Breaking News
Home / BGAdmin (page 22)

BGAdmin

ಬೆಳಗಾವಿ ಕಾಂಟೋನ್ಮಟ್ ಬೋರ್ಡಿನ CEO ಆನಂದ್ ಆತ್ಮಹತ್ಯೆ…!!

ಬೆಳಗಾವಿ- ಬೆಳಗಾವಿ ಕಾಂಟೋನ್ಮೆಂಟ್ ಬೋರ್ಡಿನ ಕಚೇರಿಯ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ಮಾಡಿ ತನಿಖೆ ನಡೆಸಿದ ಬೆನ್ನಲ್ಲಿಯೇ ಬೋರ್ಡಿನ ಸಿಇಓ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬೆಳಗಾವಿಯ ಕ್ಯಾಂಪ್ ಪ್ರದೇಶದಲ್ಲಿರುವ ತಮ್ಮ ನಿವಾಸದಲ್ಲಿ CEO ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ.ಬೆಳಗಾವಿ ದಂಡುಮಂಡಳಿ ಸಿಇಒ ಕೆ.ಆನಂದ ನಿಗೂಢ ಸಾವನ್ನೊಪ್ಪಿದ್ದಾರೆ.ಬೆಳಗಾವಿ ಕ್ಯಾಂಪ್ ಪ್ರದೇಶದಲ್ಲಿರುವ ಕೆ. ಆನಂದ ಅವರ ಸರ್ಕಾರಿ ನಿವಾಸದಲ್ಲಿ ಈ ಘಟನೆ ನಡೆದಿದೆ. ಕಳೆದ ಒಂದೂವರೆ ವರ್ಷಗಳಿಂದ …

Read More »

ಬೆಳಗಾವಿ- ಗೋವಾ ಬಾರ್ಡರ್ ನಲ್ಲಿ ಭರ್ಜರಿ ಬೇಟೆ…

ಬೆಳಗಾವಿ- ಗೋವಾದಿಂದ-ಬೆಳಗಾವಿ ಮಾರ್ಗವಾಗಿ ಆಂದ್ರ,ಸೇರಿದಂತೆ ಅಕ್ಕಪಕ್ಕದ ರಾಜ್ಯಗಳಿಗೆ ಮದ್ಯ ಸಾಗಾಣಿಕೆ ಮಾಡುತ್ತಿರುವ ಜಾಲದ ಮೇಲೆ ಬೆಳಗಾವಿಯ ಅಬಕಾರಿ ಇಲಾಖೆಯ ಅಧಿಕಾರಿಗಳು ನಿರಂತರವಾಗಿ ದಾಳಿ ನಡೆಸಿದ್ದಾರೆ. ಬೆಳಗಾವಿಯಲ್ಲಿ ಅಬಕಾರಿ ‌ಇಲಾಖೆ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ! ನಡೆಸಿದ್ದು,ಕಂಟೇನರ್ ನಲ್ಲಿ ಕಂಪಾರ್ಟ್ಮೆಂಟ್ ಮಾಡಿ ಮದ್ಯ ಸಾಗಾಟ ಜಾಲ ಪತ್ತೆಯಾಗಿದೆ.ಕಂಟೇನರ್ ನಲ್ಲಿ ಐದು ಅಡಿಯಲ್ಲಿ ಜಾಗದಲ್ಲಿ ಕಂಪಾರ್ಟ್ಮೆಟ್ ಮಾಡಲಾಗಿತ್ತು,ಕಂಪಾರ್ಟ್ಮಮೆಂಟ್ ಬಗ್ಗೆ ಯಾರಿಗೂ ಅನುಮಾನ ಬರದಂತೆ ಶೆಟರ್ ಅಳವಡಿಸಿ ಐಡಿಯಾ ಮಾಡಿದ್ದ ಖದೀಮರು ಕೊನೆಗೂ ಬಲೆಗೆ ಬಿದ್ದಿದ್ದಾರೆ. …

Read More »

ಮಾರಿಹಾಳ ಗ್ರಾಮದ ಉಪಾಧ್ಯಕ್ಷ ತೌಸೀಪ್ ಫನಿಬಂದ್ ಇನ್ನಿಲ್ಲ….

ಬೆಳಗಾವಿ- ಮಾರಿಹಾಳ ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷ ಹಾಲಿ ಉಪಾಧ್ಯಕ್ಷ ತೌಸೀಪ್ ಫನಿಭಂದ್ ಇಂದು ಸಂಜೆ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು ಸಂಜೆ ತೀವ್ರ ಹೃದಯಾಘಾತದಿಂದ ಅಸ್ವಸ್ಥರಾಗಿದ್ದ ಅವರನ್ನು ಕೆ.ಎಲ್ಇ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ತೌಸೀಪ್ ನಿಧನರಾಗಿದ್ದಾರೆ. ಮೃತರ ಅಂತ್ಯಕ್ರಿಯೆ ನಾಳೆ ಶುಕ್ರವಾರ ಬೆಳಗ್ಗೆ 10-00 ಗಂಟೆಗೆ ಮಾರಿಹಾಳ ಗ್ರಾಮದಲ್ಲಿ ನಡೆಯಲಿದೆ.

Read More »

ರಮೇಶ್ ಜಾರಕಿಹೊಳಿ ಮನೆಗೆ ವಿಜಯೇಂದ್ರ ಭೇಟಿ….!!!

ಬೆಳಗಾವಿ- ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಪುತ್ರ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಇಂದು ಬಿಜೆಪಿಯ ಪ್ರಭಾವಿ ನಾಯಕ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಮನೆಗೆ ಭೇಟಿ ನೀಡಿ ರಾಜಕೀಯ ಬೆಳವಣಿಗೆಗಳ ಬಗ್ಗೆ ಮಹತ್ವದ ಚರ್ಚೆ ನಡೆಸುವದರ ಮೂಲಕ ಎಲ್ಲರ ಗಮನ ಸೆಳೆದರು. ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಿ ಬಿಜೆಪಿ ಸರ್ಕಾರವನ್ನು ರಚಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ರಮೇಶ್ ಜಾರಕಿಹೊಳಿ ಅವರನ್ನು ವಿಜಯೇಂದ್ರ ಅವರು ಸದಾಶಿವ ನಗರದಲ್ಲಿ ಇರುವ …

Read More »

ಕಾಲು ಕೆದರಿ ಜಗಳಕ್ಕೆ ಸಿದ್ಧತೆ ನಡೆಸಿರುವ ಎಂಇಎಸ್….!!

ಬೆಳಗಾವಿ- ಬೆಳಗಾವಿ ಮಹಾನಗರದಲ್ಲಿ ಭಾಷಾವೈಷಮ್ಯದ ವಿಷಬೀಜ ಬಿತ್ತಿ,ರಾಜಕೀಯ ಮಾಡುತ್ತ ಬಂದಿರುವ ನಾಡದ್ರೋಹಿ ಎಂಇಎಸ್ ಈಗ ಬೆಳಗಾವಿಯಲ್ಲಿ ಡಿಸೆಂಬರ್ 4 ರಿಂದ ನಡೆಯುತ್ತಿರುವ ಚಳಿಗಾಲದ ಅಧಿವೇಶನಕ್ಕೆ ಪ್ರತಿಯಾಗಿ ಮರಾಠಿ ಮಹಾ ಮೇಳಾವ್ ನಡೆಸಲು ನಿರ್ಧರಿಸಿದೆ. ಒಂದುಕಡೆ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನದ ಸಿದ್ಧತೆ ನಡೆಸಿದ್ರೆ ಇನ್ನೊಂದು ಕಡೆ ಎಂಇಎಸ್ ಕಿರಿಕ್ ಶುರುವಾಗಿದೆ.ಅಧಿವೇಶನಕ್ಕೆ ಪ್ರತಿಯಾಗಿ ಮರಾಠಿ ಮಹಾಮೇಳಾವ್ ನಡೆಸಲು ನಿರ್ಧರಿಸಿರುವ ಎಂಇಎಸ್ ನಾಯಕರು ಅದಕ್ಕಾಗಿ ಖಾನಾಪೂರ ಮತ್ತು ಬೆಳಗಾವಿಯಲ್ಲಿ ಸಮೀತಿಗಳನ್ನು ರಚಿಸಿ ಮೇಳಾವ್ ನಡೆಸುವದಾಗಿ …

Read More »

ವಿಕಲಚೇತನರ ಅಹವಾಲು ಆಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್…

ಬೆಳಗಾವಿ- ನಿನ್ನೆಯ ದಿನ ಮಂಗಳವಾರ ಸಂಜೆಬೆಳಗಾವಿಯ ಜಿಲ್ಲಾಧಿಕಾರಿಗಳ ಆವರಣದಲ್ಲಿ ವಿಕಲಚೇತನರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಧರಣಿ ಸತ್ಯಾಗ್ರಹ ನಡೆಸಿದರು. ಧರಣಿ ಕುಳಿತಿದ್ದ ನವ ಕರ್ನಾಟಕ ಎಮ್ ಆರ್ ಡಬ್ಲ್ಯೂ/ವಿ ಆರ್ ಡಬ್ಲ್ಯೂ/ಯು ಆರ್ ಡಬ್ಲ್ಯೂ ವಿಕಲಚೇತನರ ಗೌರವಧನ ಕಾರ್ಯಕರ್ತರನ್ನು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಭೇಟಿ ಮಾಡಿ, ಅವರ ಬೇಡಿಕೆಗಳ ಮಾಹಿತಿಯನ್ನು ಪಡೆದು,ವಿಕಲಚೇತನರ ಅಹಾಲು ಸ್ವೀಕಾರ ಮಾಡಿದ್ರು. ರಾಜ್ಯದ 6860 ಜನ ಎಮ್ ಆರ್ ಡಬ್ಲ್ಯೂ/ವಿ ಆರ್ ಡಬ್ಲ್ಯೂ/ಯು …

Read More »

ಬೆಳಗಾವಿಯಲ್ಲಿ ಪ್ರತಿಭಟನೆಗಳನ್ನು ಕಂಟ್ರೋಲ್ ಮಾಡಲು ಸಲಹೆ…

ಬೆಳಗಾವಿ ಅಧಿವೇಶನ: ಪ್ರತಿಭಟನೆಗಳ ಇಳಿಮುಖಕ್ಕೆ ಮುಖ್ಯಮಂತ್ರಿಗೆ, ಸಭಾಪತಿ ಬಸವರಾಜ ಹೊರಟ್ಟಿ ಸಲಹಾ ಪತ್ರ ಬೆಂಗಳೂರು, – ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 4, 2023 ರಿಂದ ಡಿಸೆಂಬರ್ 15ರ ವರೆಗೆ 10 ದಿನಗಳ ಕಾಲ ಚಳಿಗಾಲದ ಅಧಿವೇಶನವನ್ನು ರಾಜ್ಯ ಸರ್ಕಾರ ನಡೆಸಲು ನಿರ್ಧರಿಸಿರುವ ಹಿನ್ನೆಲೆ ವಿಧಾನ ಪರಿಷತ್ತು ಸಭಾಪತಿ ಬಸವರಾಜ ಎಸ್. ಹೊರಟ್ಟಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ, ಕಂದಾಯ ಸಚಿವ ಕೃಷ್ಣ ಬೈರೇಗೌಡ …

Read More »

ಸತೀಶ್ ಜಾರಕಿಹೊಳಿ ಮುಂದಿನ ಸಿಎಂ ……!!

ಬೆಳಗಾವಿ- ರಾಜ್ಯರಾಜಕಾರಣದಲ್ಲಿ ಏನು ನಡೆಯುತ್ತಿದೆ ? ಯಾರಿಗೂ ಅರ್ಥವಾಗದ ಗೊಂದಲದ ಘಳಿಗೆಯಲ್ಲಿ ಬೆಳಗಾವಿ ಜಿಲ್ಲೆಯ ಯರಗಟ್ಟಿಯಲ್ಲಿ ನಡೆದ ಕನ್ನಡದ ಜಾತ್ರೆ ಕಾರ್ಯಕ್ರಮದಲ್ಲಿ ಜಿಲ್ಲೆಯ ಗಣ್ಯ ವ್ಯಕ್ತಿಯೊಬ್ಬರು ಮಹತ್ವದ ಸುಳಿವು ಕೊಟ್ಟಿದ್ದಾರೆ. ಪೂರ್ವ ದಿಕ್ಕಿನಲ್ಲಿ ಸೂರ್ಯ ಹುಟ್ಟುವದು ಎಷ್ಟು ಸತ್ಯವೋ ಮಾಸ್ಟರ್ ಮೈಂಡ್, ಸತೀಶ್ ಜಾರಕಿಹೊಳಿ ಅವರು ಮುಂದಿನ ಸಿಎಂ ಆಗುವದು ಅಷ್ಟೇ ಸತ್ಯ. ಎಂದು ಹೇಳಿದವರು ಸವದತ್ತಿ ಯಲ್ಲಮ್ಮನ ಕ್ಷೇತ್ರದ ಶಾಸಕ,ಸತೀಶ್ ಜಾರಕಿಹೊಳಿ ಪರಮಾಪ್ತ ವಿಶ್ವಾಸ್ ವೈದ್ಯ ಅವರು ಹೇಳಿದ …

Read More »

ಸುವರ್ಣಸೌಧದ ಅಂಗಳದಲ್ಲಿ ಹೆಬ್ಬಾವು ಪ್ರತ್ಯಕ್ಷ….!!

ಬೆಳಗಾವಿ- ಡಿಸೆಂಬರ್ 4 ರಿಂದ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದ್ದು ಅದಕ್ಕಾಗಿ ಸೌಧದಲ್ಲಿ ಭರ್ಜರಿ ತಯಾರಿ ಕೂಡ ನಡೆಯುತ್ತಿದೆ. ಸುವರ್ಣಸೌಧದ ಅಂಗಳದಲ್ಲಿ ಉದ್ಯಾನವನದ ಸುತ್ತಮುತ್ತಲು ಸ್ವಚ್ಛತಾ ಕಾಮಗಾರಿಯೂ ಭರದಿಂದ ಸಾಗಿದ್ದು ಇಂದು ಮಧ್ಯಾಹ್ನದ ಹೊತ್ತಿಗೆ ಒಂದಲ್ಲ ಎರಡಲ್ಲ,ಮೂರ್ನಾಲ್ಕು ಹೆಬ್ಬಾವುಗಳು ಹುತ್ತದಿಂದ ಹೊರಬಂದಿವೆ. ಸುವರ್ಣಸೌಧಕ್ಕೆ ಹೋಗುವ ಮುಖ್ಯರಸ್ತೆಯಲ್ಲಿ ಪಾರ್ಕಿಂಗ್ ಸ್ಥಳಕ್ಕೆ ಟರ್ನ ತೆಗೆದುಕೊಳ್ಳುವ ಸ್ಥಳದಲ್ಲಿ ಹೆಬ್ಬಾವು ಕಾಣಿಸಿಕೊಂಡಿದ್ದು ಜನರ ಕೂಗಾಟ ಕೇಳಿ ಹೆಬ್ಬಾವುಗಳು ಪಕ್ಕದ ಗಿಡಗಂಟೆಗಳಲ್ಲಿ ಮಾಯವಾಗಿವೆ. ಅಧಿವೇಶನಕ್ಕೆ ಮುನ್ನ …

Read More »

ಬೆಳಗಾವಿ ಪೋಲೀಸ್ ಕಮಿಷ್ನರ್ ಕಚೇರಿಯಲ್ಲಿ ಹೋಮ್ ಮಿನಿಸ್ಟರ್ ಪರಮೇಶ್ವರ್…

ಸುಳ್ಳುಸುದ್ದಿ, ಸಾಮಾಜಿಕ ಜಾಲತಾಣಗಳ ಮೇಲೆ ನಿಗಾವಹಿಸಲು ಗೃಹಸಚಿವ ಪರಮೇಶ್ವರ್ ಸೂಚನೆ ಬೆಳಗಾವಿ: ಸಮಾಜದಲ್ಲಿ ಅಶಾಂತಿ ಮೂಡಿಸುವಂತಹ ಸುಳ್ಳುಸುದ್ದಿಗಳು, ಪ್ರಚೋದನಾಕಾರಿ ಹೇಳಿಕೆ ಅಥವಾ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಆಗಿರುವುದು ಕಂಡುಬಂದರೆ ತಕ್ಷಣವೇ ಕಾರ್ಯಪ್ರವೃತ್ತರಾಗಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಗೃಹಸಚಿವ ಜಿ.ಪರಮೇಶ್ವರ್ ಕಟ್ಟುನಿಟ್ಟಿನ ಸೂಚನೆ ನೀಡಿದರು. ನಗರದ ಪೊಲೀಸ್ ಆಯುಕ್ತಾಲಯಕ್ಕೆ ಸೋಮವಾರ(ನ.20) ಭೇಟಿ ನೀಡಿದ ಅವರು, ಸಾಮಾಜಿಕ ಜಾಲತಾಣ ನಿಗಾ ಘಟಕ, ನಿಯಂತ್ರಣ ಕೊಠಡಿಗಳನ್ನು ಖುದ್ದಾಗಿ ವೀಕ್ಷಿಸಿ ಸಲಹೆ-ಸೂಚನೆಗಳನ್ನು ನೀಡಿದರು. …

Read More »