Breaking News
Home / BGAdmin (page 6)

BGAdmin

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅರೆಸ್ಟ್…

ದೆಹಲಿ, ಮಾರ್ಚ್‌ 21: ಅಬಕಾರಿ ನೀತಿ ಹಗರಣದಲ್ಲಿ ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನ ಅರೆಸ್ಟ್‌ ಮಾಡಲಾಗಿದೆ. ಅಬಕಾರಿ ನೀತಿ ಹಗರಣದ ತನಿಖೆ ನಡೆಸುತ್ತಿದ್ದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು, ಕೇಜ್ರಿವಾಲ್ ಬಂಧನಕ್ಕೆ ಕೋರಿದ್ದರು. ಆದರೆ ತಮ್ಮನ್ನು ಬಂಧಿಸದಂತೆ ಇಡಿಗೆ ನಿರ್ದೇಶನ ನೀಡುವಂತೆ ಕೋರಿ ಕೇಜ್ರಿವಾಲ್ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದರು. ಅರವಿಂದ್ ಕೇಜ್ರಿವಾಲ್ ಮನವಿ ತಿರಸ್ಕರಿಸಿದ್ದ ದೆಹಲಿ ಹೈಕೋರ್ಟ್, ಅವರನ್ನು ಯಾಕೆ ಬಂಧಿಸಿಲ್ಲ ಅಂತ ಇಡಿ ಅಧಿಕಾರಿಗಳನ್ನು ಪ್ರಶ್ನಿಸಿತ್ತು. ಈ …

Read More »

ಬೆಳಗಾವಿ,ಚಿಕ್ಕೋಡಿ, ಕಾಂಗ್ರೆಸ್ ಪಕ್ಷದ ಇಬ್ಬರೂ, ಅಭ್ಯರ್ಥಿಗಳು ಡಿಗ್ರಿ ಹೋಲ್ಡರ್ಸ್…!!

ಬೆಳಗಾವಿ- ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೃನಾಲ ಹೆಬ್ಬಾಳಕರ್ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಇಬ್ಬರೂ ಮಂತ್ರಿ ಮಕ್ಕಳು,ಪದವೀಧರರು,ಕೋಟ್ಯಾಧೀಶರು ಎನ್ನುವದು ವಿಶೇಷ,ವಿಭಿನ್ನ ಮತ್ತು ವಿಶಿಷ್ಠವಾಗಿದೆ. ಬೆಳಗಾವಿ ಅಭ್ಯರ್ಥಿ ಮೃನಾಲ ಸಿವ್ಹಿಲ್ ಇಂಜಿನಿಯರ್ ,ಚಿಕ್ಕೋಡಿ ಅಭ್ಯರ್ಥಿ,ಪ್ರಿಯಾಂಕಾ MBA ಪದವೀಧರರು ಈ ಇಬ್ಬರೂ ಅಭ್ಯರ್ಥಿಗಳು ಹಲವಾರು ಕಂಪನಿಗಳ ಪಾಲುದಾರರು,ಕೆಲವು ಕಂಪನಿಗಳ ಮಾಲೀಕರು ಜೊತೆಗೆ ಇಬ್ಬರೂ ಕೋಟ್ಯಾಧೀಶರಾಗಿದ್ದಾರೆ.ಇವರಿಬ್ಬರೂ ಪೋಷಕರ ಗರಡಿಯಲ್ಲಿ ಪಳಗಿದವರಾಗಿದ್ದು ಫೌಂಡೇಶನ್ ಮುಖಾಂತರ ಅನೇಕ ಸಮಾಜಿಕ,ಧಾರ್ಮಿಕ,ಮತ್ತು …

Read More »

ಟಿಕೆಟ್ ಯಾರಿಗೆ ಕೊಟ್ರೂ ಅವರನ್ನು ಗೆಲ್ಲಿಸುತ್ತೇವೆ- ಬಾಲಚಂದ್ರ

ಬಿಜೆಪಿ ಹೈ ಕಮಾಂಡ್ ನಿರ್ಣಯಕ್ಕೆ ಬದ್ಧರಾಗಿ ಚುನಾವಣೆಯನ್ನು ಎದುರಿಸೋಣ- ಶಾಸಕ ಬಾಲಚಂದ್ರ ಜಾರಕಿಹೊಳಿ *ಕಲ್ಲೊಳ್ಳಿಯಲ್ಲಿ ಜರುಗಿದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ*: ಬೆಳಗಾವಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯ ಆಯ್ಕೆಯು ಇನ್ನೆರಡು ದಿನಗಳಲ್ಲಿ ಅಂತಿಮವಾಗಲಿದ್ದು, ಪಕ್ಷದ ಹೈಕಮಾಂಡ್ ಯಾರಿಗೆ ಟಿಕೇಟ್ ನೀಡಿದರೂ ಎಲ್ಲರೂ ಒಗ್ಗಟ್ಟಾಗಿ ನಮ್ಮ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಗುರುವಾರದಂದು ತಾಲೂಕಿನ ಕಲ್ಲೋಳಿ ಪಟ್ಟಣದಲ್ಲಿ ಕಲ್ಲೋಳಿ ಸೌಹಾರ್ದ …

Read More »

ಬೆಳಗಾವಿಯಲ್ಲಿ ಬಸ್ ಚಾಲಕನಿಗೆ ಏರ್ ಗನ್ ತೋರಿಸಿ,ದಾದಾಗಿರಿ…

ಸಿಬಿಟಿ ಡ್ರೈವರ್ ಗೆ ಏರ್ ಗನ್ ತೋರಿಸಿ ದಾದಾಗಿರಿ ಬೆಳಗಾವಿ: ಕಾರ್ ಚಾಲಕನೊಬ್ಬ ಕೆಎಸ್ ಆರ್ ಟಿಸಿ ಡ್ರೈವರ್ ಗೆ ಏರ್ ಗನ್ ತೋರಿಸಿ ದಾದಾಗಿರಿ ಪ್ರದರ್ಶಿಸಿರುವ ಘಟನೆ ಬೆಳಗಾವಿ ಆರ್‌ಎನ್ ಶೆಟ್ಟಿ ಕಾಲೇಜು ಸರ್ಕಲ್ ಬಳಿ ಮಧ್ಯಾಹ್ನ ನಡೆದಿದೆ. ಕೆಎಸ್ ಆರ್ ಟಿಸಿ ಬಸ್ ಗೆ ಕಾರು ಎದುರು ಆಗಿದೆ. ಆಗ ಕಾರಿನಲ್ಲಿದ್ದ ಅಜಂ ನಗರದ ಮಹಮ್ಮದ್ ಷರೀಫ್ ಕೆಎಸ್ ಆರ್ ಟಿಸಿ ಬಸ್ ಚಾಲಕ ಮಲ್ಲಿಕಾರ್ಜುನ ಅಂಕಲಿ …

Read More »

ಗಾಂಜಾ ಮಾಫಿಯಾ ವಿರುದ್ಧ ಬೆಳಗಾವಿ ಪೋಲೀಸರ ಸಮರ…

ಬೆಳಗಾವಿ- ಬೆಳಗಾವಿ ಮಹಾನಗರ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡುವ ಜಾಲದ ವಿರುದ್ಧ ಬೆಳಗಾವಿ ಪೋಲೀಸರು ಸಮರ ಸಾರಿದ್ದಾರೆ. ಹಿರೇಬಾಗೇವಾಡಿ ಪೊಲೀಸರಿಂದ ಇಬ್ಬರು ಗಾಂಜಾ ಮಾರಾಟಗಾರರ ಬಂಧನ ಮಾಡಲಾಗಿದ್ದು 32580 ಮೌಲ್ಯದ ಗಾಂಜಾ ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬೆಳಗಾವಿ ನಗರದ ಹಿರೆಬಾಗೇವಾಡಿ ಪೊಲೀಸ್ ಠಾಣಾ ಹದ್ದಿಯ ಮುತ್ನಾಳ ಗ್ರಾಮದ ಹತ್ತಿರ ಗಾಂಜಾ ಮಾರಾಟ ಮಾಡಲು ಬಂದ ಇಬ್ಬರು ಆರೋಪಿತರ ಮೇಲೆ ಹಿರೇಬಾಗೇವಾಡಿ ಪೊಲೀಸರು ದಾಳಿ ಮಾಡಿದ್ದಾರೆ. ಪೊಲೀಸ್ ಇಸ್ಪೆಕ್ಟರ್ …

Read More »

SSLC ಪರೀಕ್ಷಾ ಕೇಂದ್ರದಲ್ಲಿ ಸಿಸಿಟಿವ್ಹಿ ಕ್ಯಾಮರಾ ಅಳವಡಿಕೆ….

ಬೆಳಗಾವಿ, – ಪರೀಕ್ಷಾ ಅಕ್ರಮಗಳು, ಅನಗತ್ಯ ಗೊಂದಲ, ಅನಾನುಕೂಲಗಳನ್ನು ಉಂಟಾಗದಂತೆ ಅಚ್ಚುಕಟ್ಟು ವ್ಯವಸ್ಥೆ ಕಲ್ಪಿಸಿ, ಪರೀಕ್ಷಾ ನಿಯೋಜಿತ ಸಿಬ್ಬಂದಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಪರೀಕ್ಷೆಗಳು ಸುಗಮವಾಗಿ ನಡೆಯುವಂತೆ ಅಗತ್ಯ ಸಿದ್ದತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ ನೀಡಿದರು. ಶಿಕ್ಷಣ ಇಲಾಖೆಯ ವತಿಯಿಂದ ನಗರದ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಸೋಮವಾರ (ಮಾ.18) ನಡೆದ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಗಳ ಪೂರ್ವ ತಯಾರಿ ಕುರಿತು ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು …

Read More »

ಮಾದರಿ ನೀತಿ ಸಂಹಿತೆ ಜಾರಿ: ರಾಜಕೀಯ ಸಭೆ, ಸಮಾರಂಭ, ಕಾರ್ಯಕ್ರಮಗಳಿಗೆ ಪೂರ್ವಾನುಮತಿ ಕಡ್ಡಾಯ

ಬೆಳಗಾವಿ, – ಬೆಳಗಾವಿ-02 ಲೋಕಸಭಾ ಚುನಾವಣೆ ಕ್ಷೇತ್ರ,ದ ವ್ಯಾಪ್ತಿಯಲ್ಲಿರುವ ಬೆಳಗಾವಿ ಉತ್ತರ-11 ಹಾಗೂ ಬೆಳಗಾವಿ ದಕ್ಷಿಣ-12 ವಿಧಾನಸಭಾ ಮತಕ್ಷೇತ್ರಗಳ ವ್ಯಾಪ್ತಿಯಲ್ಲಿ ಯಾವುದೇ ರಾಜಕೀಯ ಸಭೆ, ಸಮಾರಂಭ ಹಾಗೂ ಕಾರ್ಯಕ್ರಮಗಳನ್ನು ಆಯೋಜಿಸಬೇಕಾದಲ್ಲಿ ಪೂರ್ವಾನುಮತಿಯನ್ನು ಪಡೆಯಬೇಕಾಗಿರುವುದು ಕಡ್ಡಾಯವಾಗಿರುತ್ತದೆ. ಮಾರ್ಚ್ 16, 2024 ರಿಂದ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಯಾವುದೇ ಕಾರ್ಯಕ್ರಮವನ್ನು ಆಯೋಜಿಸಬೇಕಾದಲ್ಲಿ “SUVIDHA” ವೆಬ್‌ಸೈಟಿನಲ್ಲಿ 48 ಗಂಟೆಯೊಳಗೆ ಆನ್‌ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸುವಂತೆ ನಿರ್ದೇಶನ ನೀಡಲಾಗಿರುತ್ತದೆ. ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯಕ್ಕೆ ಸಂಬಂಧಪಟ್ಟಂತೆ …

Read More »

ಎಎಸ್ಐ ಸಾವು- ಪಿಎಸ್ಐ ಸಸ್ಪೆಂಡ್; ಬೆಳಗಾವಿ ಎಸ್ಪಿ ಕಳಕಳಿಗೆ ಸೆಲ್ಯೂಟ್!

ಬೆಳಗಾವಿ: ಭೀಕರ ರಸ್ತೆ ಅಪಘಾತದಲ್ಲಿ ಎಎಸ್ಐ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಯರಗಟ್ಟಿ ಪಟ್ಟಣದಲ್ಲಿ ತಡರಾತ್ರಿ ನಡೆದಿದೆ. ಘಟನೆ ಬೆನ್ನಲ್ಲೇ ದೊಡವಾಡ ಠಾಣೆ ಪಿಎಸ್ಐ‌‌ ನಂದೀಶರನ್ನು ಅಮಾನತು ಮಾಡಿ ಬೆಳಗಾವಿ ಎಸ್ಪಿ ಡಾ. ಭೀಮಾಶಂಕರ ಗುಳೇದ ಆದೇಶ ಹೊರಡಿಸಿದ್ದಾರೆ.ಹೆಲ್ಮೆಟ್ ಧರಿಸದೇ ಬೈಕ್ ಚಲಾಯಿಸಿದ್ದೇ ಎಎಸ್ಐ ಸಾವಿಗೆ ಕಾರಣ ಎಂಬುದು ಸಾಬೀತಾಗಿದೆ. ಯರಗಟ್ಟಿ ಪಟ್ಟಣದ ವಿಜಯಕಾಂತ ಮಿಕಲಿ (51) ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಎಎಸ್ಐ. ಇವರು ಬೈಲಹೊಂಗಲ ತಾಲೂಕಿನ ದೊಡವಾಡ ಠಾಣೆಯಲ್ಲಿ ಎಎಸ್ಐ …

Read More »

ಸ್ಥಳೀಯ ನಾಯಕರ ಒಗ್ಗಟ್ಟು,ಶೆಟ್ಟರ್ ಗೆ ಬಿಕ್ಕಟ್ಟು,ಬಿಜೆಪಿಯಲ್ಲಿ ಯಡವಟ್ಟು….!!!

ಬೆಳಗಾವಿ- ಬೆಳಗಾವಿ ಲೋಕಸಭಾ ಮತಕ್ಷೇತ್ರ್ರದ ಬಿಜೆಪಿ ಟಿಕೆಟ್ ಇನ್ನುವರೆಗೆ ಅಧಿಕೃತವಾಗಿ ಘೋಷಣೆ ಆಗಿಲ್ಲ ಆದ್ರೆ ಈ ಕ್ಷೇತ್ರದಿಂದ ಜಗದೀಶ್ ಶೆಟ್ಟರ್ ಬಿಜೆಪಿ ಅಭ್ಯರ್ಥಿ ಆಗೋದು ಖಚಿತವಾದ ಬಳಿಕ, ಬೇರೆ ಜಿಲ್ಲೆಯ ನಾಯಕರಿಗೆ ಬೆಳಗಾವಿಯಿಂದ ಟಿಕೆಟ್ ಬೇಡ,ಎನ್ನುವ ಅಪಸ್ವರ ಶುರುವಾಗಿದ್ದು ಚುನಾವಣೆಯ ಆರಂಭದಲ್ಲೇ ಬಿಜೆಪಿಯಲ್ಲಿ ಬಿಕ್ಕಟ್ಟು ಎದುರಾಗಿದೆ. ಜಗದೀಶ್ ಶೆಟ್ಟರ್ ಅವರಿಗೆ ಬೆಳಗಾವಿಯಿಂದ ಟಿಕೆಟ್ ಬೇಡ ಎಂದು ನೇರವಾಗಿ ಬೆಳಗಾವಿಯ ಯಾವ ಬಿಜೆಪಿ ನಾಯಕನೂ ಹೇಳಿಲ್ಲ,ಆದ್ರೆ ,ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ,ಶಾಸಕ …

Read More »

ದಿಢೀರ್‌ ಬೆಳಗಾವಿಗೆ ಜಗದೀಶ್ ಶೆಟ್ಟರ್ ಎಂಟ್ರಿ…!!

ಬೆಳಗಾವಿ- ಇಂದು ಮಧ್ಯಾಹ್ನ ಬಿಜೆಪಿ ಮುಖಂಡ ಪ್ರಭಾಕರ್ ಕೋರೆ ಅವರ ಮನೆಯಲ್ಲಿ ಬೆಳಗಾವಿ ಜಿಲ್ಲೆಯ ಅತೃಪ್ತ ಬಿಜೆಪಿ ನಾಯಕರ ಹೈ- ಪವರ್ ಮೀಟೀಂಗ್ ನಡೆದ ಬೆನ್ನಲ್ಲಿಯೇ ಸೂರ್ಯ ಮುಳುಗಿ ಕತ್ತಲು ಆವರಿಸುತ್ತಿದ್ದಂತೆಯೇ ಬೆಳಗಾವಿ ಲೋಕಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ದಿಢೀರ್ ಬೆಳಗಾವಿಗೆ ಆಗಮಿಸಿದ್ದಾರೆ. ಇಂದು ಮಧ್ಯಾಹ್ನ ಬಿಜೆಪಿ ಹಿರಿಯ ಮುಖಂಡ ಪ್ರಭಾಕರ್ ಕೋರೆ ಅವರ ನಿವಾಸದಲ್ಲಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ,ಶಾಸಕ ಅಭಯ ಪಾಟೀಲ, ಮಾಜಿ ಶಾಸಕ …

Read More »