Breaking News
Home / BGAdmin (page 61)

BGAdmin

9 ಸಚಿವರು 53 ಶಾಸಕರನ್ನ ಅನರ್ಹ ಮಾಡಿ ಅಂತಾ ಹೇಳಿದ್ದು ಯಾಕೆ ಗೊತ್ತಾ..??

ಬೆಳಗಾವಿ-ಕಾನೂನು ಬಾಹಿರವಾಗಿ ಪ್ರಮಾಣ ವಚನ ಸ್ವೀಕರಿಸಿದ ಸಚಿವರು, ಹಾಗೂಶಾಸಕರ ವಿರುದ್ಧ ಕ್ರಮ ಜರುಗಿಸುವಂತೆ ಸಾಮಾಜಿಕ ಕಾರ್ಯಕರ್ತ ಭೀಮಪ್ಪಾ ಗಡಾದ್ ಒತ್ತಾಯಿಸಿದ್ದಾರೆ. ಬೆಳಗಾವಿಯಲ್ಲಿ ಆರ್‌ಟಿಐ ಕಾರ್ಯಕರ್ತ ಭೀಮಪ್ಪ ಗಡಾದ,ಅವರುಸುದ್ದಿಗೋಷ್ಠಿ‌ ನಡೆಸಿ,9 ಸಚಿವರು 53 ಶಾಸಕರನ್ನ ಅನರ್ಹಗೊಳಿಸಿ ಸೌಲಭ್ಯ ನಿಲ್ಲಿಸುವಂತೆ ಮನವಿ ಮಾಡಿಕೊಂಡಿದ್ದಾರೆ.ರಾಜ್ಯಪಾಲರು ಮತ್ತು ವಿಧಾನಸಭಾಧ್ಯಕ್ಷರಿಗೆ ಪತ್ರ ಬರೆದು ಮನವಿ.ಮಾಡಿಕೊಂಡಿರುವ,ರಾಜ್ಯಪಾಲರು ಕ್ರಮ ಕೈಗೊಳ್ಳದಿದ್ರೇ ನ್ಯಾಯಾಲಯದಲ್ಲಿ ಪಿಆಯ್‌ಎಲ್ ದಾಖಲಿಸುವ ಎಚ್ಚರಿಕೆ ನೀಡಿದ್ದಾರೆ‌.ಕ್ರಮ ಬದ್ದವಾಗಿ ಪ್ರಮಾಣ ವಚನ ಸ್ವೀಕಾರ ಮಾಡುವವರೆಗೂ ಸೌಲಭ್ಯ ವಾಪಾಸ್ ಪಡೆಯಬೇಕು ಎಂದು …

Read More »

ಬೆಳಗಾವಿ: ಟೆಂಪೋ ಬೈಕ್ ಡಿಕ್ಕಿ ಮೂರುಜನ ಯುವಕರ ಸಾವು..

ಚಿಕ್ಕೋಡಿ: ಬೈಕ್ ಮತ್ತು ಟೆಂಪು ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ ಮೇಲೆ ತೆರಳುತ್ತಿದ್ದ ಮೂವರು ಯುವಕರು ಮೃತಪಟ್ಟಿರುವ ಘಟನೆ ಚಿಕ್ಕೋಡಿ ತಾಲೂಕಿನ ಬಸವನಾಳಗಡ್ಡೆ ಬಳಿ ಮಂಗಳವಾರ ರಾತ್ರಿ ಸಂಭವಿಸಿದೆ. ಮೃತ ಯುವಕರನ್ನು ಕೇರೂರ ಗ್ರಾಮದ ಪ್ರಶಾಂತ ಬೈರು ಖೋತ(೨೨).ಸತೀಶ ಕಲ್ಲಪ್ಪ ಹಿರೇಕೊಡಿ(೨೩).ಯಲಗೌಡ ಚಂದ್ರಕಾಂತ ಪಾಟೀಲ (೨೨) ಎಂದು ಗುರ್ತಿಸಲಾಗಿದೆ. ಯುವಕರು ಬೈಕ ಮೇಲೆ ಚಿಕ್ಕೋಡಿ ಕಡೆಯಿಂದ ಕೇರೂರ ಗ್ರಾಮಕ್ಕೆ ತೆರಳುವ ಸಮಯದಲ್ಲಿ ಚಿಕ್ಕೋಡಿ- ಅಂಕಲಿ ರಸ್ತೆಯ ಬಸವನಾಳಗಡ್ಡೆ …

Read More »

ರಿಯಾಯಿತಿ ಬಸ್ ಪಾಸ್ ಬೇಕಾ,ಹಾಗಾದ್ರೆ ಈ ಸುದ್ದಿ ಓದಿ.

ಬೆಳಗಾವಿ- 2023-24ನೇ ಶೈಕ್ಷಣಿಕ ವರ್ಷಕ್ಕೆ ರಿಯಾಯಿತಿ ಬಸ್ ಪಾಸ್ ಗಾಗಿ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಸಲ್ಲಿಸಲು ಸೇವಾಸಿಂಧು ಪೋರ್ಟಲ್ ನಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಭರತ್ ಎಸ್. ತಿಳಿಸಿದ್ದಾರೆ. ಪ್ರಸಕ್ತ ಸಾಲಿನಿಂದ ಸೇವಾಸಿಂಧು ಪೋರ್ಟಲ್ ಮೂಲಕ ಸಂಪೂರ್ಣ ಯಾಂತ್ರೀಕೃತ ವಿದ್ಯಾರ್ಥಿ ಬಸ್ ವಿತರಣೆ ಪ್ರಕ್ರಿಯೆಯನ್ನು ಆರಂಬಿಸಲಾಗಿದೆ. ಪಾಸ್ ಗಾಗಿ ವಿದ್ಯಾರ್ಥಿಗಳು ಸೇವಾಸಿಂಧು ಫೊರ್ಟಲ್ ನಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. …

Read More »

ಬೆಳಗಾವಿ ನಗರದಲ್ಲಿ ಫ್ಲೈ ಓವರ್ ನಿರ್ಮಾಣಕ್ಕೆ ಸಾಹುಕಾರ್ ಗ್ರೀನ್ ಸಿಗ್ನಲ್…!!

ಬೆಳಗಾವಿ- ಬೆಳಗಾವಿ ‌ನಗರದ ಟ್ರಾಫಿಕ್ ಸಮಸ್ಯೆಗೆ ಜಿಲ್ಲಾ ಉಸ್ತುವಾರಿ,ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಸ್ಪಂದಿಸಿದ್ದು ನಗರದಲ್ಲಿ ಫ್ಲೈ ಓವರ್ ನಿರ್ಮಾಣಕ್ಕೆ ಮೊದಲ ಸಭೆಯಲ್ಲಿ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಫ್ಲೈ ಓವರ್ ನಿರ್ಮಾಣಕ್ಕೆ ನೀಲನಕ್ಷೆ ಸಿದ್ಧಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಸಭೆ ಮುಗಿಸಿ,ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ರಾಜು ಸೇಠ. ಬೆಳಗಾವಿ ಡಿಸಿ ನಿತೇಶ್ ಪಾಟೀಲ್,ನಗರ ಪೋಲಿಸ್ ಆಯುಕ್ತ …

Read More »

ಬೆಳಗಾವಿ,ಉಸ್ತುವಾರಿ ಸಚಿವರ ಮೊದಲ ಸಭೆಯಲ್ಲಿ, ಹಲವಾರು ನಿರ್ಣಯ..!!

ಬೆಳಗಾವಿ, – ರೈಲ್ವೆ, ನೀರಾವರಿ, ಹೆದ್ದಾರಿ, ರಿಂಗ್ ರಸ್ತೆ, ಫ್ಲೈ ಓವರ್ ನಿರ್ಮಾಣ, ಭೂಸ್ವಾಧೀನ, ಪುನರ್ವಸತಿ ಹೀಗೆ ಜಿಲ್ಲೆಯ ಒಟ್ಟಾರೆ ಅಭಿವೃದ್ಧಿಗೆ ಸಂಬಂಧಿಸಿದ ಪ್ರತಿಯೊಂದು ಯೋಜನೆಯ ಅನುಷ್ಠಾನ ಪ್ರಕ್ರಿಯೆ ಚುರುಕುಗೊಳಿಸಬೇಕು; ಯೋಜನೆಗೆ ಅಡ್ಡಿಯಾಗುವ ತಾಂತ್ರಿಕ ತೊಂದರೆಗಳನ್ನು ಆದ್ಯತೆ ಮೇರೆಗೆ ಬಗೆಹರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ (ಜೂ.13) ನಡೆದ ಭೂಸ್ವಾಧೀನ, ರೈಲ್ವೆ, ರಾಷ್ಟ್ರೀಯ ಹೆದ್ದಾರಿ ಸೇರಿದಂತೆ …

Read More »

ಒಂದೇ ದಿನ ಎಷ್ಟು ಜನ ಮಹಿಳೆಯರು ಫ್ರೀ ಪ್ರಯಾಣ ಮಾಡಿದ್ರು ಗೊತ್ತಾ..??

ಹುಬ್ಬಳ್ಳಿ: -ರಾಜ್ಯಾದ್ಯಂತ ಆರಂಭವಾಗಿರುವ ಸರ್ಕಾರಿ ಬಸ್ಸಿನಲ್ಲಿ ಮಹಿಳೆಯರ ಉಚಿತ ಪ್ರಯಾಣದ “ಶಕ್ತಿ ಯೋಜನೆ”ಯ ಮೊದಲ ದಿನ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯಾಪ್ತಿಯ ಬಸ್ಸುಗಳಲ್ಲಿ 1.22 ಲಕ್ಷ ಮಹಿಳೆಯರು ಪ್ರಯಾಣ ಮಾಡಿದ್ದಾರೆ ಎಂದು ವ್ಯವಸ್ಥಾಪಕ ನಿರ್ದೇಶಕ ಭರತ್ ಎಸ್. ತಿಳಿಸಿದ್ದಾರೆ. ಸ್ತ್ರೀ ಸಬಲೀಕರಣದ ನಿಟ್ಟಿನಲ್ಲಿ ರವಿವಾರ ಜೂನ್ 11ರಂದು ಆರಂಭಿಸಲಾಗಿರುವ ಸರ್ಕಾರಿ ಬಸ್ಸಿನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿರುತ್ತದೆ. ವಾಯವ್ಯ ಕರ್ನಾಟಕ …

Read More »

ಮಹಾರಾಷ್ಟ್ರದಿಂದ ಬೆಳಗಾವಿಗೆ ಗಾಂಜಾ ಸಪ್ಲಾಯ್, ಇಬ್ಬರ ಬಂಧನ.

ಬೆಳಗಾವಿ- ಮಹಾರಾಷ್ಟದ ಸೊಲ್ಲಾಪೂರದಿಂದ ಬೆಳಗಾವಿಗೆ ಸಾಗಿಸಲಾಗುತ್ತಿದ್ದ ಸುಮಾರು ಆರು ಲಕ್ಷ ರೂ ಮೌಲ್ಯದ ನಾಲ್ಕು ಕೆಜಿ ಗಾಂಜಾ ಬೆಳಗಾವಿಯ ಸಿಇಎನ್ ಹಾಗೂ ಡಸಿಆರ್ಬಿ ಪೋಪೀಸರು ವಶಪಡಿಸಿಕೊಂಡಿದ್ದಾರೆ. ಬೆಳಗಾವಿಯ ಹತ್ತರಗಿ ಟೋಲ್ ಹತ್ತಿರ ಬೆಳಗಾವಿ ಜಿಲ್ಲಾ ಸಿಇಎನ್ ಸಿಪಿಐ ಗಡ್ಡೇಕರ ಅವರ ನೇತ್ರತ್ವದಲ್ಲಿ ದಾಳಿ ಮಾಡಿರುವ ಪೋಲೀಸರು ಗಾಂಜಾ ಸಾಗಿಸುತ್ತಿದ್ದ,ಪುರುಷೋತ್ತಮ ರಾಮಚಂದ್ರ ಕೌಲಗಿ ವಯಾ 42 ವರ್ಷ ಸಾ. ಪಂಡರಪುರ ಜಿ. ಸೊಲ್ಲಾಪುರ,ಸಾಹೇಬರಾವ ವಿಶ್ವನಾಥ್ ಪಾಲಿಕೆ ಸಾ. ಹಲದೈವಡಿ ವಯಾ 50 …

Read More »

ಕಳಪೆ ಬೀಜ ವಿತರಣೆ-ಅಧಿಕಾರಿಗಳೇ ಹೊಣೆ: ಸಚಿವ ಚಲುವರಾಯಸ್ವಾಮಿ

ಮುಂಗಾರು ವಿಳಂಬ: ಸಮರ್ಪಕ ಬೀಜ ದಾಸ್ತಾನು, ವಿತರಣೆಗೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ಬೆಳಗಾವಿ, ): ರಾಜ್ಯದಲ್ಲಿ ಮುಂಗಾರು ವಿಳಂಬವಾಗಿರುವುದರಿಂದ ಬಿತ್ತನೆ ಕೂಡ ತಡವಾಗುತ್ತಿದೆ. ಆದ್ದರಿಂದ ಮಳೆಯಾದ ಕೂಡಲೇ ಎಲ್ಲೆಡೆ ಏಕಕಾಲಕ್ಕೆ ಬಿತ್ತನೆ ಆರಂಭಗೊಳ್ಳಲಿದೆ. ಈ ಸಂದರ್ಭದಲ್ಲಿ ಬೀಜ-ಗೊಬ್ಬರ ಕೊರತೆಯಾಗದಂತೆ ಅಧಿಕಾರಿಗಳು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಕಳಪೆ ಬೀಜ ವಿತರಣೆ ಕಂಡುಬಂದರೆ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು ಎಂದು ಕೃಷಿ ಇಲಾಖೆಯ ಸಚಿವರಾದ ಎನ್.ಚಲುವರಾಯಸ್ವಾಮಿ ಎಚ್ಚರಿಕೆ ನೀಡಿದರು. ಮುಂಗಾರು ಸಿದ್ಧತೆ ಪರಿಶೀಲನೆಗೆ …

Read More »

ಬೆಳಗಾವಿಯಲ್ಲಿ ಬಸ್ ಹತ್ತಿದ ಗಣ್ಯರು,ವಡಗಾವಿಗೆ ಹೋದ್ರು..!!

ಬೆಳಗಾವಿ, ): ರಾಜ್ಯದಾದ್ಯಂತ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕಲಗಪಿಸುವ “ಶಕ್ತಿ” ಯೋಜನೆಯ ಸದ್ಬಳಕೆ‌ ಮಾಡಿಕೊಂಡು ಮಹಿಳೆಯರು ಸಬಲರಾಗಬೇಕು. ಈ ಯೋಜನೆಯಡಿ ಶೈಕ್ಷಣಿಕ ಪ್ರವಾಸ, ವೃತ್ತಿ ಕೌಶಲ ವೃದ್ಧಿಯಂತಹ ಉದ್ದೇಶಗಳಿಗೆ ಬಳಕೆ ಮಾಡಿಕೊಂಡು ಮಹಿಳೆಯರು ಎಲ್ಲ ರೀತಿಯಿಂದಲೂ ಸಬಲರಾಗಬೇಕು ಎಂದು ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಮಹಿಳೆಯರಿಗೆ ಕಿವಿಮಾತು ಹೇಳಿದರು. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬೆಳಗಾವಿ ಹಾಗೂ ಚಿಕ್ಕೋಡಿ …

Read More »

ಸತೀಶ್ ಜಾರಕಿಹೊಳಿ,ಬೆಳಗಾವಿಗೆ ಮಂಜೂರು ಮಾಡುವ ಮೊದಲ ಯೋಜನೆ ಯಾವುದು ಗೊತ್ತಾ..??

ಬೆಳಗಾವಿ ಅಭಿವೃದ್ಧಿ ಕುರಿತು ಮಾಸ್ಟರ್ ಪ್ಕ್ಯಾನ್…!! ಬೆಳಗಾವಿ- ಬೆಳಗಾವಿ ರಾಜ್ಯದ ಎರಡನೇಯ ರಾಜಧಾನಿಯಾಗುವ ಹೊಸ್ತಿಲಲ್ಲಿ ಇರುವ ನಗರ,ಈ ನಗರವನ್ನು ಬೆಂಗಳೂರು ಮಾದರಿಯಲ್ಲೇ ಅಭಿವೃದ್ಧಿ ಮಾಡಲು ಲೋಕೋಪಯೋಗಿ, ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಮಾಸ್ಟರ್ ಪ್ಲ್ಯಾನ್ ಮಾಡಿದ್ದಾರೆ ಎಂದು ಗೊತ್ತಾಗಿದೆ. ಬೆಳಗಾವಿ ನಗರದಲ್ಲಿ ಭಾರಿ ವಾಹನಗಳ ಸಂಚಾರವನ್ನು ಡೈವೋರ್ಟ್ ಮಾಡಲು ಬೆಳಗಾವಿಯ ಗಾಂಧಿ ನಗರ ( ಸಂಕಮ್ ಹೊಟೇಲ್ ) ನಿಂದ ಪೀರನವಾಡಿಯವರೆಗೂ ಬೆಂಗಳೂರು ಮಾದರಿಯ ಫ್ಲೈ …

Read More »