Breaking News
Home / BGAdmin (page 66)

BGAdmin

ರಾತ್ರೋ ರಾತ್ರಿ ಸ್ಪೇಶಲ್ ಫ್ಲಾಯಿಟ್ ನಲ್ಲಿ ಬೆಳಗಾವಿಗೆ ದೌಡಾಯಿಸಿದ ಡಿ.ಕೆ ಶಿವಕುಮಾರ್…!!

ಬೆಳಗಾವಿ- ರಾತ್ರೋ ರಾತ್ರಿ 11-30 ಕ್ಕೆ ಸ್ಪೇಶಲ್ ಫ್ಲಾಯಿಟ್ ನಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಳಗಾವಿಗೆ ದೌಡಾಯಿಸಿ ಬೆಳಗಾವಿಯಲ್ಲೇ ವಾಸ್ತವ್ಯ ಮಾಡಿದ್ದಾರೆ. ಅಥಣಿ ಶಾಸಕ ಮಾಜಿ ಡಿಸಿಎಂ ಲಕ್ಷ್ಮಣ ಸವದಿ,ಅವರು ಚುನಾವಣೆಯಲ್ಲಿ ಗೆದ್ದರೂ ಸಹ ಅವರು ಮಂತ್ರಿ ಮಂಡಲದಲ್ಲಿ ಸ್ಥಾನ ಗಿಟ್ಟಿಸಿಕೊಂಡಿಲ್ಲ‌.ಅವರನ್ನು ಭೇಟಿಯಾಗಲು,ಸಮಾಧಾನಪಡಿಸಲು ಡಿ.ಕೆ ಶಿವಕುಮಾರ್ ಬೆಳಗಾವಿಗೆ ದೌಡಾಯಿಸಿದ್ದಾರೆ. ಬುಧವಾರ ಬೆಳಗ್ಗೆ 8-00 ಗಂಟೆಗೆ ಲಕ್ಷ್ಮಣ ಸವದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿ ನಂತರ ಜಗದೀಶ್ ಶೆಟ್ಟರ್ ಅವರನ್ನು …

Read More »

ಬೆಳಗಾವಿ : ಹೊಲದ ಗದ್ದೆಯಲ್ಲಿ ವಿಮಾನ ಲ್ಯಾಂಡೀಂಗ್..!!

ಬೆಳಗಾವಿ: ತಾಲೂಕಿನ ಹೊನ್ನಿಹಾಳ ಹಾಗೂ ಬಾಗೇವಾಡಿ ಮಾರ್ಗದ ಮಧ್ಯೆ ಇರುವ ಹೊಲದಲ್ಲಿ ಮಂಗಳವಾರ ಬೆಳಿಗ್ಗೆ ತರಬೇತಿ ವಿಮಾನವೊಂದು ಭೂಸ್ಪರ್ಶವಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ಸಮೀಪದ ಸಾಂಬ್ರಾ ಗ್ರಾಮದ ಬಳಿ ಇರುವ ಬೆಳಗಾವಿ ವಿಮಾನ ನಿಲ್ದಾಣದಿಂದ ತರಬೇತಿ ನಡೆಸುತ್ತಿದ್ದ ಪುಟ್ಟ ವಿಮಾನ ಒಂದು ತಾಲೂಕಿನ ಹೊನ್ನಿಹಾಳ ಹೊರವಲಯದ ಮೋದಗಾ- ಬಾಗೇವಾಡಿ ರಸ್ತೆ ಮಧ್ಯದಲ್ಲಿ ತುರ್ತು ಭೂಸ್ಪರ್ಶವಾಗಿದೆ. ಘಟನೆಯಲ್ಲಿ ತರಬೇತುದಾರನ ಕಾಲಿಗೆ ಗಾಯವಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆಮಾರೀಹಾಳ ಠಾಣೆ ಪೊಲೀಸರು, ವಾಯು ಸೇನೆ ಅಧಿಕಾರಿಗಳು …

Read More »

ಬೆಳಗಾವಿಯ ಸುವರ್ಣಸೌಧದಲ್ಲಿ ನಾಳೆ ಫಸ್ಟ್ ಮೀಟೀಂಗ್..!!

ಬೆಳಗಾವಿ- ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ,ಬೆಳಗಾವಿ ಜಿಲ್ಲೆಯಿಂದ ಇಬ್ಬರು ಮಂತ್ರಿಗಳಾಗಿದ್ದಾರೆ.ಈ ಇಬ್ವರು ಮಂತ್ರಿಗಳು ನಾಳೆ ಮಂಗಳವಾರ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಬೆಳಗಾವಿ ಜಿಲ್ಲೆಯ ಎಲ್ಲ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ಲೋಕೋಪಯೋಗಿ ಸಚಿವ. ಸತೀಶ್ ಜಾರಕಿಹೊಳಿ ಅವರ ಅಧ್ಯಕ್ಷತೆಯಲ್ಲಿ,ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರ ಉಪಸ್ಥಿತಿಯಲ್ಲಿ ಬೆಳಗ್ಗೆ 11-00 ಗಂಟೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮೊದಲ ಸಭೆ ನಡೆಯಲಿದೆ. ಈ ಸಭೆಯಲ್ಲಿ ಬೆಳಗಾವಿ …

Read More »

ಇಂದು ಬೆಳಗಾವಿ ನಗರದಲ್ಲಿ ಯುವಕನ ಮರ್ಡರ್…!!

ಬೆಳಗಾವಿ- ರಾತ್ರಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಉತ್ಸವ ಮೆರವಣಿಗೆ ಮುಗಿಸಿ ಬೆಳಗಿನ ಜಾವ ಮನಗೆ ಬಂದಿದ್ದ ಯುವಕನನ್ನು ಸೋದರ ಸಂಬಂದಿಯೊಬ್ಬ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಳಗಾವಿ ಶಹಾಪೂರಿನ ಹೊಸೂರ ಬಸವನಗಲ್ಲಿಯಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಮಿಲಿಂದ್ ಚಂದ್ರಕಾಂತ ಜಾಧವ (28) ಹತ್ಯೆಯಾದ ದುರ್ದೈವಿಯಾಗಿದ್ದು ಈತನ ಕಾಕನ ಮಗ ಅಭಿಜೀತ್ ಜಾಧವ ಎಂಬಾತನೇ ಮಿಲಿಂದ್ ಹತ್ಯೆ ಮಾಡಿದ್ದಾನೆ ಎಂದು ಹೇಳಲಾಗಿದ್ದು,ಪೋಲೀಸರು ಆರೋಪಿ ಅಭಿಜೀತ್ ನನ್ನು ವಶಕ್ಕೆ …

Read More »

ಅಕ್ಕಾ…! ಅಣ್ಣಾ..! ಸ್ವಾಗತಕ್ಕೆ ಕುಂದಾನಗರಿಯಲ್ಲಿ ಭರ್ಜರಿ ತಯಾರಿ..!

ಬೆಳಗಾವಿ-ಭಾನುವಾರ ಬೆಳಗಾವಿಗೆ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳಕರ್; ಭರ್ಜರಿ ಸ್ವಾಗತಕ್ಕೆ ಬೆಳಗಾವಿ ಸಜ್ಜಾಗಿದೆ.ರಾಜ್ಯ ಕಾಂಗ್ರೆಸ್ ನೇತೃತ್ವದ ಸರಕಾರದ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿರುವ ಸತೀಶ್ ಜಾರಕಿಹೊಳಿ ಮತ್ತು ಲಕ್ಷ್ಮೀ ಹೆಬ್ಬಾಳಕರ್ ಸಚಿವರಾದ ನಂತರ ಮೊದಲ ಬಾರಿಗೆ ಭಾನುವಾರ ಬೆಳಗಾವಿಗೆ ಆಗಮಿಸಲಿದ್ದಾರೆ. ಒಟ್ಟಾಗಿ ಆಗಮಿಸುತ್ತಿರುವ ಸಚಿವ ದ್ವಯರನ್ನು ಸ್ವಾಗತಿಸಲು ಇಡೀ ಬೆಳಗಾವಿ ಮಹಾನಗರ ಸಜ್ಜಾಗಿದ್ದು, ನಗರದಲ್ಲಿ ಮೆರವಣಿಗೆ ನಡೆಯಲಿದೆ. ಮೇ 20ರಂದು ಸತೀಶ್ ಜಾರಕಿಹೊಳಿ ಹಾಗೂ ಮೇ 27ರಂದು ಲಕ್ಷ್ಮೀ ಹೆಬ್ಬಾಳಕರ್ …

Read More »

ಯಾರಿಗೆ ಯಾವ ಖಾತೆ..? ಇಲ್ಲಿದೆ ಸಂಪೂರ್ಣ ವಿವರ..!

ಸಚಿವರಿಗೆ ಖಾತೆ ಹಂಚಿಕೆ: ಯಾರ್ಯಾರಿಗೆ ಯಾವ ಖಾತೆ..? ಇಲ್ಲಿದೆ ನೋಡಿ. ಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಅಧಿಕೃತವಾಗಿ ಖಾತೆ ಹಂಚಿಕೆ ಮಾಡಲಾಗಿದೆ. ಹಣಕಾಸು, ವಾರ್ತೆ ಮತ್ತು ಗುಪ್ತಚರ ಇಲಾಖೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಬಳಿಯೇ ಇಟ್ಟುಕೊಂಡಿದ್ದಾರೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಮಹತ್ವದ ಜಲಸಂಪನ್ಮೂಲ ಮತ್ತು ಬೆಂಗಳೂರು ಅಭಿವೃದ್ಧಿ ಖಾತೆ ದೊರೆತಿದೆ. ಉಳಿದಂತೆ ಡಾ. ಜಿ. ಪರಮೇಶ್ವರ್- ಗೃಹ, ಹೆಚ್.ಕೆ. ಪಾಟೀಲ್- ಸಣ್ಣ ನೀರಾವರಿ ಮತ್ತು ಕಾನೂನು ಮತ್ತು …

Read More »

ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಡಬಲ್ ಖುಷಿ….!!

ಬೆಳಗಾವಿ: ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಪಾಲಿಗೆ ಶುಕ್ರವಾರ ಶುಭಕರ ವಾಗಿದೆ. ತಮಗೆ ಸಚಿವ ಸ್ಥಾನ ಸಿಗುವುದು ಖಾತ್ರಿಯಾದ ಖುಷಿಯ ಜೊತೆಗೆ ಮನೆಗೆ ಮೊಮ್ಮಗಳ ಮಹಾಲಕ್ಷ್ಮಿ ಆಗಮನವಾಗಿದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಮೊದಲ ಬಾರಿ ಮಂತ್ರಿ ಸ್ಥಾನ ಗಿಟ್ಟಿಸಿಕೊಂಡ ಖುಷಿಯ ಜೊತೆಗೆ ಮಗ ಮೃಣಾಲ್ ಗೆ ಹೆಣ್ಣು ಮಗು ಜನನವಾಗಿದೆ. ಇದರಿಂದ ಹೆಬ್ಬಾಳಕರ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ಹೆಬ್ಬಾಳಕರ ಸೊಸೆ ಡಾ. ಹೀತಾ ಹೆಣ್ಣು ಮಗುವಿಗೆ ಜನ್ಮ …

Read More »

ಹೆಬ್ಬಾಳಕರ್ ಹೆಸರು ಕ್ಲಿಯರ್, ಸಂಜೆ ಹೊತ್ತಿಗೆ ಡಿಕ್ಲೇರ್..!!

ಬೆಳಗಾವಿ- ಬೆಳಗಾವಿ ಜಿಲ್ಲೆಯಿಂದ ಮೊದಲ ಪಟ್ಟಿಯಲ್ಲಿ ಸತೀಶ್ ಜಾರಕಿಹೊಳಿ ಅವರು ಸಚಿವರಾದ ಬಳಿಕ ಈ ಜಿಲ್ಲೆಯಿಂದ ಮಂತ್ರಿಯಾಗೋದು ಇಬ್ಬರೋ ? ಮೂವರೋ ಎನ್ನುವ ಪ್ರಶ್ನೆ ಎಲ್ಲರನ್ನು ಕಾಡುತ್ತಲೇ ಇತ್ತು ಆದ್ರೆ ಇಂದು ಸಂಜೆ ಹೊತ್ತಿಗೆ ಈ ಪ್ರಶ್ನೆಗೆ ಉತ್ತರ ಸಿಗಲಿದೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ,ಎರಡು ದಶಕಗಳ ಕಾಲ ಕಾಂಗ್ರೆಸ್ ಪಕ್ಷದಲ್ಲಿ ಸಂಘಟನಾತ್ಮಕ ಸೇವೆ ಮಾಡಿದ್ದಾರೆ.ಜೊತೆಗೆ ಪ್ರಬಲ ಪಂಚಮಸಾಲಿ ಸಮಾಜಕ್ಕೆ ಸೇರಿದವರಾಗಿದ್ದು ಸಮಾಜದ ಹೋರಾಟದಲ್ಲೂ ಸಕ್ರೀಯವಾಗಿದ್ದಾರೆ.ಇದರ ಜೊತೆಗೆ …

Read More »

ಬೈಲಹೊಂಗಲದಲ್ಲಿ ಭಯಾನಕ ಮಾರಾಮಾರಿ…!!

ಬೆಳಗಾವಿ-ಜಮೀನು ವಿವಾದ ಎರಡು ಕುಟುಂಬಗಳ ಮಧ್ಯೆ ನಡೆದಿರುವ ಹೊಡೆದಾಟದ ದೃಶ್ಯಗಳನ್ನು ನೋಡಿದ್ರೆ ಮೈ ಝುಮ್ ಎನ್ಬುತ್ತೆ ಮಾರಾಮಾರಿಯ ಆ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ. ಬೈಲಹೊಂಗಲ ತಾಲ್ಲೂಕಿನಭಾವಿಹಾಳದಲ್ಲಿ ಎರಡು ಕುಟುಂಬಗಳ ಮಧ್ಯೆ ಹೊಡೆದಾಟ‌ ನಡೆದಿದೆ. ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ಭಾವಿಹಾಳ ಗ್ರಾಮದಲ್ಲಿ ಎರಡು ಕುಟುಂಬಗಳು ಕಟ್ಟಿಗೆಗಳಿಂದ ಪರಸ್ಪರ ಹೊಡೆದಾಡಿಕೊಳ್ಳುವ ದೃಶ್ಯ ವೈರಲ್ ಆಗಿದ್ದು,ಭಯಾನಕ ಹೊಡೆದಾಟ ನೋಡಿದ ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಘಟನೆ ನಡೆದಿದ್ದು …

Read More »

ಎನ್ ಜಯರಾಮ್ ಅವರು ಈಗ ಮುಖ್ಯಮಂತ್ರಿಗಳ ಕಾರ್ಯದರ್ಶಿ.

ಬೆಳಗಾವಿ: ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಬೋರ್ಡ್ ಅಧ್ಯಕ್ಷರಾಗಿದ್ದ ಐಎಎಸ್ ಅಧಿಕಾರಿ ಎನ್ ಜಯರಾಮ್ ಅವರು ಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿ ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ. ಜಯರಾಮ್ ಎನ್. 2004 ಬ್ಯಾಚ್ ಐಎಎಸ್ ಅಧಿಕಾರಿ. ಅವರು ಬೆಳಗಾವಿ ಜಿಲ್ಲೆ ಜೊತೆಗೆ ಅವಿನಭಾವ ನಂಟು ಹೊಂದಿದ್ದಾರೆ. ಸುಮಾರು ನಾಲ್ಕು ವರ್ಷಗಳ ಸುಧೀರ್ಘ ಅವಧಿಯವರೆಗೆ ಬೆಳಗಾವಿ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ಜಯರಾಮ್ ಈ ವೇಳೆ ಜಿಲ್ಲೆಯ ಎಲ್ಲ ಪಕ್ಷಗಳ‌ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು …

Read More »