Breaking News
Home / BGAdmin (page 80)

BGAdmin

ಬೆಳಗಾವ್ಯಾಗ ಇಲೆಕ್ಷನ್ ತಯಾರಿ ಹೆಂಗ್ ನಡದೈತಿ ನೋಡ್ರಿ!!

ಮತಗಟ್ಟೆಗಳಿಗೆ ಜಿಲ್ಲಾಧಿಕಾರಿ , ಎಸ್.ಪಿ. ಭೇಟಿ: ಮೂಲಸೌಕರ್ಯ ಪರಿಶೀಲನೆ ಬೆಳಗಾವಿ, -ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತಗಟ್ಟೆಗಳಲ್ಲಿ ಕನಿಷ್ಟ ಮೂಲಸೌಕರ್ಯವನ್ನು ಖಚಿತಪಡಿಸುವುದಕ್ಕಾಗಿ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ ಅವರಿಂದಿಗೆ ಬುಧವಾರ (ಮಾ.8) ವಿವಿಧ ವಿಧಾನಸಭಾ ಮತಕ್ಷೇತ್ರಗಳ ವ್ಯಾಪ್ತಿಯಲ್ಲಿನ ಮತಗಟ್ಟೆಗಳಿಗೆ ಭೇಟಿ ನೀಡಿ, ಮೂಲಸೌಕರ್ಯ ಪರಿಶೀಲಿಸಿದರು. ಯರಗಟ್ಟಿ, ಕೌಜಲಗಿ, ಮೂಡಲಗಿ, ಘಟಪ್ರಭಾ, ಶಿಂಧಿಕುರಬೇಟ, ಗೋಕಾಕ, …

Read More »

ಆತ್ಮಹತ್ಯೆಗೆ ಯತ್ನ; ಮಹಿಳೆ, ಮಕ್ಕಳಿಗೆ ಉತ್ತಮ ಚಿಕಿತ್ಸೆ ನೀಡಲು ವೈದ್ಯರಿಗೆ ಸೂಚನೆ

ಬೆಳಗಾವಿ,- ಕೌಟುಂಬಿಕ ಸಮಸ್ಯೆಯ ಕಾರಣಕ್ಕೆ ಮಹಿಳೆಯೊಬ್ಬರು ಮೂರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರಿನ ಬಸ್ ತಂಗುದಾಣದಲ್ಲಿ ನಡೆದಿದ್ದು, ಅವರನ್ನು ತಕ್ಷಣವೇ ಆಸ್ಪತ್ರೆಗೆ ಸೇರಿಸಲಾಗಿದೆ‌. ತಾಯಿ ಮತ್ತು ಮಕ್ಕಳು ಚೇತರಿಸಿಕೊಂಡಿದ್ದು, ಯಾವುದೇ ಅಪಾಯವಿಲ್ಲ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯ ಅವರಣದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ಸುದ್ದಿಗಳು ಕೆಲವು ಮಾಧ್ಯಮಗಳಲ್ಲಿ ವರದಿಯಾಗಿರುತ್ತದೆ. ಆದರೆ ಈ ಘಟನೆಯು ಜಿಲ್ಲಾಧಿಕಾರಿ ಕಚೇರಿಯ ಎದುರಿಗೆ ಹೊರಭಾಗದಲ್ಲಿರುವ ಬಸ್ …

Read More »

ಬೆಳಗಾವಿ ಡಿಸಿ ಕಚೇರಿ ಆವರಣದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದು ಯಾರು ,ಯಾಕೆ ಗೊತ್ತಾ!!

ಬೆಳಗಾವಿ ಡಿಸಿ ಕಚೇರಿ ಆವರಣದಲ್ಲಿ ಮೂರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ತಾಯಿ! ಬೆಳಗಾವಿ-ಗಂಡ ಸಾಲಮಾಡಿ ಮನೆ ಬಿಟ್ಟು ಹೋಗಿದ್ದ,ಸಾಲಗಾರರ ಕಿರುಕಳ ತಾಳಲಾರದೆ,ತನ್ನ ಸಂಕಷ್ಟ ಹೇಳಿಕೊಳ್ಳಲು ಆಗದೆ, ಮೂರು ಮಕ್ಕಳೊಂದಿಗೆ ತಾಯಿಯೊಬ್ಬಳು ಬೆಳಗಾವಿ ಡಿಸಿ ಕಚೇರಿ ಆವರಣದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಜ್ಯುಸ್ ಅಂತಾ ಹೇಳಿಕ್ಕಳಿಗೆ ಪಿನಾಯಲ್ ಕುಡಿಸಿ ತಾನೂ ಪಿನಾಯಿಲ್ ಕಿಡಿದು ಆತ್ಮಹತ್ಯೆಗೆ ಯತ್ನಿಸಿದ ತಾಯಿ ಮತ್ತು ಮಕ್ಕಳನ್ನು ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಗಿದೆ.ಪತಿ ಮಾಡಿದ ಸಾಲಕ್ಕೆ ಬೇಸತ್ತು ಪತ್ನಿ …

Read More »

ಬೆಳಗಾವಿ ನಗರದಲ್ಲಿ ಯುವಕನ ಮರ್ಡರ್!

ಬೆಳಗಾವಿಯಲ್ಲಿ ಯುವಕನ ಬರ್ಬರ ಹತ್ಯೆ ಬೆಳಗಾವಿ-ಹಳೆ ವೈಷಮ್ಯಕ್ಕೆ ಯುವಕನ ಬರ್ಬರ ಹತ್ಯೆ ಮಾಡಲಾಗಿದೆ.ಬೆಳಗಾವಿ ಹೊರ ವಲಯದ ಮಚ್ಚೆ ಬಳಿ ಯಳ್ಳೂರ ರಸ್ತೆಯಲ್ಲಿ ಘಟನೆ ಯುವಕನ ಕೊಲೆ ನಡೆದಿದೆ. ಮಜಗಾಂವ ಗ್ರಾಮದ ಪ್ರತೀಕ್ ಲೋಹಾರ್(21) ಹತ್ಯೆಯಾದ ಯುವಕನಾಗಿದ್ದು,ಕೆಲಸ ಮುಗಿಸಿಕೊಂಡು ಮನೆಗೆ ವಾಪಾಸ್ ಹೋಗುವಾಗ ಹತ್ಯೆ ಮಾಡಲಾಗಿದೆ. ಪ್ರತೀಕ್ ಸ್ನೇಹಿತನ ಜತೆಗೆ ಜಗಳವಾಡುತ್ತಿದ್ದ ಕೆಲವರು. ಜಗಳ ಬಿಡಿಸಲು ಹೋಗಿದ್ದ ಪ್ರತೀಕ್ ಹತ್ಯೆ ಮಾಡಿದ ದುಷ್ಕರ್ಮಿಗಳು.ಈ ಹಿಂದೆ ಹಲವು ಬಾರಿ ಪ್ರತೀಕ್ ಜತೆಗೆಜಗಳವಾಡಿಕೊಂಡಿದ್ದ ದುಷ್ಕರ್ಮಿಗಳು. …

Read More »

ಇದಕ್ಕೆ ಲಕ್ ಅಂತಾರೆ, ಮನೆಗೆ ಬಂತು ರಾಜ್ಯೋತ್ಸವ ಪ್ರಶಸ್ತಿ

ಬೆಳಗಾವಿ, ಮಾ.5(ಕರ್ನಾಟಕ ವಾರ್ತೆ): 2022ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದ ಬೆಳಗಾವಿಯ ಸಾಹಿತಿ ರಾಮಕೃಷ್ಣ ಮರಾಠೆ ಅವರಿಗೆ ಹನುಮಾನ ನಗರದಲ್ಲಿರುವ ಅವರ ನಿವಾಸದಲ್ಲಿ ಭಾನವಾರ(ಮಾ.5) ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ರಾಮಕೃಷ್ಣ ಮರಾಠೆ ಅವರಿಗೆ ಅನಿವಾರ್ಯ ಕಾರಣಗಳಿಂದಾಗಿ ರಾಜ್ಯೋತ್ಸವ ದಿನದಂದು ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಭಾಗವಹಿಸುವುದು ಸಾಧ್ಯವಾಗಿರಲಿಲ್ಲ. ಆದ್ದರಿಂದ ಸರಕಾರದ‌ ಪರವಾಗಿ ಇಂದು ಅವರ ನಿವಾಸಕ್ಕೆ ಆಗಮಿಸಿ ಪ್ರಶಸ್ತಿಯನ್ನು ನೀಡಿ, ಸನ್ಮಾನಿಸಲಾಯಿತು. ಶಾಸಕರಾದ ಅನಿಲ ಬೆನಕೆ, ಕರ್ನಾಟಕ ಗಡಿಪ್ರದೇಶ …

Read More »

ಬೆಳಗಾವಿ ರಾಜ್ಯೋತ್ಸವಕ್ಕೆ ಐದು ಲಕ್ಷ ಕೊಡ್ತಾರಂತೆ,!

ಬೆಳಗಾವಿ ಕನ್ನಡ ರಾಜ್ಯೋತ್ಸವಕ್ಕೆ ಪ್ರತಿವರ್ಷ 5 ಲಕ್ಷ ರೂಪಾಯಿ ಅನುದಾನ: ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಸಿ.ಸೋಮಶೇಖರ್ ಘೋಷಣೆ ಬೆಳಗಾವಿ, ಮಾ.4(ಕರ್ನಾಟಕ ವಾರ್ತೆ): ರಾಜ್ಯದಲ್ಲಿಯೇ ವಿಶಿಷ್ಟವಾಗಿ ಕನ್ನಡ ರಾಜ್ಯೋತ್ಸವವನ್ನು ಬೆಳಗಾವಿ ನಗರದಲ್ಲಿ ಆಚರಿಸಲಾಗುತ್ತಿದ್ದು, ಲಕ್ಷಾಂತರ ಜನರು ಭಾಗವಹಿಸುತ್ತಾರೆ. ರಾಜ್ಯೋತ್ಸವವನ್ನ ಸಡಗರದಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಅನುಕೂಲವಾಗುವಂತೆ ಪ್ರಾಧಿಕಾರದ ವತಿಯಿಂದ ಪ್ರತಿವರ್ಷ ಐದು ಲಕ್ಷ ರೂಪಾಯಿ ಅನುದಾನ ನೀಡಲಾಗುವುದು ಎಂದು ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಸಿ.ಸೋಮಶೇಖರ್ ಪ್ರಕಟಿಸಿದರು. ಗಡಿಪ್ರದೇಶ ಅಭಿವೃದ್ಧಿ …

Read More »

ಹೆಬ್ಬಾಳಕರ್ ಬರಲಿಲ್ಲ,ಜಾರಕಿಹೊಳಿ ಭಾಷಣ ಮಾಡಲಿಲ್ಲ!!

ಹೆಬ್ಬಾಳಕರ್ ಬರಲಿಲ್ಲ,ಜಾರಕಿಹೊಳಿ ಭಾಷಣ ಮಾಡಲಿಲ್ಲ!! ಬೆಳಗಾವಿ- ಬೆಳಗಾವಿ ಗ್ರಾಮೀಣ ಕ್ಷೇತ್ರದ ರಾಜಹಂಸಗಡದಲ್ಲಿ ನಡೆದ ಶಿಷ್ಟಾಚಾರದ ಲಢಾಯಿ ಕೊನೆಗೂ ಅಂತ್ಯವಾಯಿತು.ಸಿಎಂ ಬೊಮ್ಮಾಯಿ ಅವರು ಇವತ್ತು ರಾಜಹಂಸಗಡದ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಯನ್ನು ಲೋಕಾರ್ಪಣೆ ಮಾಡುವದರ ಮೂಲಕ ಇತ್ತೀಚಿಗೆ ನಡೆದಿದ್ದ ಕ್ರೆಡಿಟ್ ವಾರ್ ಗೆ ಬ್ರೇಕ್ ಹಾಕಿದ್ರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಮತ್ತು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಇವತ್ತು ರಾಜಹಂಸಗಡದ ಕಾರ್ಯಕ್ರಮದಲ್ಲಿ ಒಂದೇ ವೇದಿಕೆ ಹಂಚಿಕೊಳ್ಳುವ ನಿರೀಕ್ಷೆ …

Read More »

ಬೆಳಗಾವಿಯ ರಾಜಹಂಸಗಡಕ್ಕೆ ಮತ್ತೆ ಐದು ಕೋಟಿ ಕೊಡ್ತೇವಿ ಅಂದ್ರು ಸಿಎಂ!

ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಅನಾವರಣ ರಾಜಹಂಸಗಡ ಕೋಟೆ ಅಭಿವೃದ್ದಿಗೆ ಹೆಚ್ಚುವರಿ 5 ಕೋಟಿ ಅನುದಾನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಳಗಾವಿ, – ದೇಶ ಕಂಡ ಅಪ್ರತಿಮ ನಾಯಕ ಹಾಗೂ ಹಿಂದೂ ಧರ್ಮದ ರಕ್ಷಣೆಗೆ ಕೆಚ್ಚೆದೆಯ ಹೋರಾಟ ಮಾಡಿರುವ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿರುವುದು ಸಂತಸ ತಂದಿದೆ. ರಾಜಹಂಸಗಡ ಕೋಟೆಯ ಸಮಗ್ರ ಅಭಿವೃದ್ಧಿಗೆ ಹೆಚ್ಚುವರಿಯಾಗಿ 5 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ …

Read More »

ಈ ಕಟ್ಟಡ ನಿರ್ಮಾಣವಾಗುತ್ತಿರುವುದು ಎಲ್ಲಿ ಯಾತಕ್ಕೆ ಗೊತ್ತಾ ??

*12 ಕೋಟಿ ರೂಗಳ ವೆಚ್ಚದಲ್ಲಿ ಕೌಜಲಗಿಯಲ್ಲಿ ಅಮೃತ ಸಮುದಾಯ ಆರೋಗ್ಯ ಕೇಂದ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ* ಶೀಘ್ರದಲ್ಲಿಯೇ ಬಹುನಿರೀಕ್ಷಿತ ಕಲ್ಮಡ್ಡಿ ಏತ ನೀರಾವರಿ ಯೋಜನೆ ಲೋಕಾರ್ಪಣೆ-ಬಾಲಚಂದ್ರ ಜಾರಕಿಹೊಳಿ ಗೋಕಾಕ: ಕೌಜಲಗಿ ಮತ್ತು ಸುತ್ತಲಿನ ಸಾರ್ವಜನಿಕರಿಗೆ ಉತ್ತಮ ವೈದ್ಯಕೀಯ ಚಿಕಿತ್ಸೆ ನೀಡಲು ಈಗಿರುವ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಅಮೃತ ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೆ ಏರಿಸಲಾಗಿದ್ದು, ಈ ಹೊಸ ಕಟ್ಟಡ ನಿರ್ಮಾಣಕ್ಕಾಗಿ 12ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಅರಭಾವಿ ಶಾಸಕ ಹಾಗೂ …

Read More »

ಕಲ್ಲಂಗಡಿಯಲ್ಲಿ ಅರಳಿದ ಮೋದಿ ಭಾವಚಿತ್ರ

ಬೆಳಗಾವಿ- ಕುಂದಾನಗರಿ ಬೆಳಗಾವಿ ಈಗ ಮೋದಿ ನಗರಿಯಾಗಿದೆ.ಕಲ್ಲಂಗಡಿಯಲ್ಲಿ ಅರಳಿದ ಮೋದಿ ಭಾವಚಿತ್ರ ಬೆಳಗಾವಿಯಲ್ಲಿ ಎಲ್ಲರ ಗಮನ ಸೆಳೆಯುತ್ತಿದೆ. ಮೋದಿ ಬೆಳಗಾವಿಗೆ ಆಗಮನ ಹಿನ್ನಲೆ ಅಭಿಮಾನಿಯಿಂದ ಕಲೆಯ ಪ್ರದರ್ಶನವಾಗಿದೆ.ಕಲ್ಲಂಗಡಿ ಹಣ್ಣಿನಲ್ಲಿ ಮೋದಿ ಚಿತ್ರ ಬಿಡಿಸಿಕೊಂಡು ಬಂದ ಮೋದಿ ಅಭಿಮಾನಿ,ಬೆಳಗಾವಿ ನಗರದ ನಿವಾಸಿ ಕಲ್ಲಪ್ಪಾ ಶಿವಾಜಿ ಭಾತಕಂಡೆ ಇವತ್ತು ಬೆಳಗಾವಿಯಲ್ಲಿ ಎಲ್ಲರ ಗಮನ ಸೆಳೆದಿದ್ದಾನೆ. ಮೋದಿ ಆಗಮನದ ಹಿನ್ನಲೆ ಆದಭಿಮಾನದಿಂದ ಕಲ್ಲಂಗಡಿಯಲ್ಲಿ ಚಿತ್ರ ಬಿಡಿಸಿರುವ ಶಿವಾಜಿ,ನಗರದ ಚನ್ನಮ್ಮ ವೃತ್ತದಲ್ಲಿ ಮೋದಿ ಬಂದಾಗ ಪ್ರದರ್ಶನ …

Read More »