Breaking News
Home / Breaking News / ಬ್ಯಾಂಕಿಂಗ್ ಪರೀಕ್ಷೆಗಳಲ್ಲಿ ಕನ್ನಡಿಗರಿಗೆ ಅನ್ಯಾಯ ಕರವೇ ಪ್ರತಿಭಟನೆ

ಬ್ಯಾಂಕಿಂಗ್ ಪರೀಕ್ಷೆಗಳಲ್ಲಿ ಕನ್ನಡಿಗರಿಗೆ ಅನ್ಯಾಯ ಕರವೇ ಪ್ರತಿಭಟನೆ

ಬೆಳಗಾವಿ ಐಬಿಪಿಎಸ್ ,ಆರ್ ಆರ್ ಬಿ,ಬ್ಯಾಕಿಂಗ್ ಪರೀಕ್ಷೆಯಲ್ಲಿ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದಲ್ಲಿ ನಡೆಯುತ್ತಿರುವ ಬ್ಯಾಂಕಿಂಗ್ ಪರೀಕ್ಷೆಯಲ್ಲಿ ಪರ ರಾಜ್ಯದ ಅಭ್ಯರ್ಥಿಗಳು ಭಾಗವಹಿಸುತ್ತಿರುವದನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಯುವ ಘಟಕ ನಗರದಲ್ಲಿಂದು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಅರ್ಪಿಸಿತು

ಚೆನ್ನಮ್ಮ ವೃತದಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ಕರವೇ ಕಾರ್ಯಕರ್ತರು ಭಾಗವಹಿಸಿದ್ದರು

ರಾಜ್ಯದಲ್ಲಿ ನಡೆಯುವ ಬ್ಯಾಂಕಿಂಗ್ ಪರೀಕ್ಷೆಗಳಲ್ಲಿ ರಾಜ್ಯದ ಅಭ್ಯರ್ಥಿಗಳು ಮಾತ್ರ ಭಾಗವಹಿಸುವ ಅವಕಾಶ ಕಲ್ಪಿಸಬೇಕು ಪರ ರಾಜ್ಯದ ಅಭ್ಯರ್ಥಿಗಳು ಭಾಗವಹಿಸಿದರೆ ಕನ್ನಡಿಗರಿಗೆ ಅನ್ಯಾಯವಾಗುತ್ತದೆ ಕೂಡಲೇ ಕೇಂದ್ರ ಸರ್ಕಾರ ಪರಿಷ್ಕೃತ ಆದೇಶ ಹೊರಡಿಸಿ ಕನ್ನಡಿಗರಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯ ಮಾಡಿದ್ರು

ಕರ್ನಾಟಕ ರಕ್ಷಣಾ ವೇದಿಕೆ
ಯುವ ಘಟಕ ಬೆಳಗಾವಿಜಿಲ್ಲಾಧ್ಯ ದೀಪಕ ಗುಡಗನಟ್ಟಿ ಮಾತನಾಡಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಬ್ಯಾಂಕಿಂಗ್ ಪರೀಕ್ಷೆಗಳಲ್ಲಿ ಕನ್ನಡಿಗರಿಗೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಬಳಿ ಕೂಡಲೇ ನಿಯೋಗ ಕೊಂಡೊಯ್ಯಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು
ರಮೇಶ ಯರಗಣ್ಣನವರ,ಸುಮೀತ ಗಿರೆಪ್ಪಗೌಡ್ರ,ಶಿವಾನಂದ ತಂಬಾಕಿ,ವಿನಾಯಕ ಬೋವಿ ಸತೀಶ ಗಾಡಿವಡ್ಡರ್ ,ಚೇತನ ಮಾಸ್ತಿಹೊಳಿ,ಅಮೀತ ಕಿತ್ತೂರ ,ಗೋಪಿ ರಾಠೋಡ,ವಿನಾಯಕ ಹಟ್ಟಿಹೊಳಿ, ಗಿರೀಶ್ ಪಾಟೀಲ,ಸೇರಿದಂತೆ ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು

Check Also

ಧಾರವಾಡ ಕಾಂಗ್ರೆಸ್ ಅಭ್ಯರ್ಥಿ ಬದಲಾದ್ರೆ ಬೆಳಗಾವಿಗೂ ಎಫೆಕ್ಟ್…?

ಬೆಳಗಾವಿ -ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬದಲಾವಣೆ ಆಗಬೇಕು ಎನ್ನುವ ಬೇಡಿಕೆ ಕಾಂಗ್ರೆಸ್ ನಲ್ಲಿಯೇ ಹೆಚ್ಚಾಗಿದೆ.ಜೊತೆಗೆ ಅಭ್ಯರ್ಥಿ ಬದಲಿಸಿ …

Leave a Reply

Your email address will not be published. Required fields are marked *