Breaking News

LOCAL NEWS

ಪಾಪಿಯ ಮನೆಯಲ್ಲಿ ಮೂಕ ಪ್ರಾಣಿಗಳ ವೇದನೆಗೆ ಖಾಕಿ ಸ್ಪಂದನೆಗೆ ವಂದನೆ…!!

ಬೆಳಗಾವಿ: ಹಿರೇಕೋಡಿಯ ನಂದಿ ಪರ್ವತದ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಆರೋಪಿ ನಾರಾಯಣ ಮಾಳೆ ಮನೆಗೆ ಪೊಲೀಸರು ಭದ್ರತೆ ಒದಗಿಸಿದ್ದು, ಬಂಧನ ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬಸ್ಥರು ಮನೆಯಿಂದ ಪರಾರಿಯಾಗಿದ್ದಾರೆ. ಜೈನಮುನಿಯ ಹತ್ಯೆ ಪ್ರಕರಣದಲ್ಲಿ ಪೊಲೀಸರು ನಾರಾಯಣ ಮಾಳಿಯನ್ನು ವಶಕ್ಕೆ ಪಡೆಯುತ್ತಿದ್ದಂತೆಯೇ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಜು.೭ರಂದು ಮನೆಗೆ ಕೆಎಸ್‌ಆರ್‌ಪಿ ಹಾಗೂ ಸಿವಿಲ್ ಪೊಲೀಸರಿಂದ ಭದ್ರತೆ ಒದಗಿಸಲಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಮಾಳಿ ಕುಟುಂಬಸ್ಥರು ಜಾನುವಾರುಗಳನ್ನು ಬಿಟ್ಟು ಪರಾರಿಯಾಗಿದ್ದಾರೆ. …

Read More »

ಬೆಳಗಾವಿಯಲ್ಲಿ ಬಾಲಕಿಯ ಕಿಡ್ನಾಪ್ ಗೆ ಯತ್ನ,ಪೋಲೀಸರಿಗೆಆರೋಪಿಯ ಸುಳಿವು

ಬೆಳಗಾವಿ- ಇತ್ತೀಚಿಗೆ ಟ್ಯುಶನ್ ಮುಗಿಸಿ ಮನೆಗೆ ಹೋಗುತ್ತಿದ್ದ ಬಾಲಕಿಯನ್ನು ಕಿಡ್ನಾಪ್ ಮಾಡಲು ಯತ್ನಿಸಿದ ಘಟನೆ ಬೆಳಗಾವಿಯ ಹಿಂದವಾಡಿಯ ಮಹಾವೀರ ಗಾರ್ಡನ್ ಬಳಿ ನಡೆದಿದೆ. ಬಾಲಕಿಯನ್ನು ಹಿಂಬಾಲಿಸಿದ ಅನಾಮಿಕನೊಬ್ಬ ನಿನ್ನ ತಾಯಿಯ ಕಿಡ್ನಾಪ್ ಆಗಿದೆ ನಿನ್ನನ್ನು ಮನೆಗೆ ಬಿಡುವೆ ಎಂದು ಬಾಲಕಿಯನ್ನು ಎತ್ತಾಕಿಕೊಂಡು ಹೋಗುತ್ತಿರುವಾಗ ಬಾಲಕಿ ಕಿರುಚಾಡಿ,ರಂಪ ಮಾಡಿದಾಗ ಅಲ್ಲಿ ಜನ ಸೇರಿದ್ದಾರೆ,ಜನ ಸೇರುತ್ತಿರುವದನ್ನು ಗಮನಿಸಿದ ಅನಾಮಿಕ ಅಲ್ಲಿಂದ ಪರಾರಿಯಾಗಿದ್ದಾನೆ.ಈ ಕುರಿತು ಬಾಲಕಿಯ ಪೋಷಕರು ಬೆಳಗಾವಿಯ ತಿಲಕವಾಡಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. …

Read More »

ನಮ್ಮಿಂದ ತಪ್ಪಾಗಿದೆ. ನೀವೇ ಗುಂಡು ಹಾರಿಸಿ ಕೊಲ್ಲಿ, ಎಂದ ಆರೋಪಿಗಳು…!!

ಬೆಳಗಾವಿ: ಹಿರೇಕೋಡಿಯ ನಂದಿ ಪರ್ವತ ಆಶ್ರಮದ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಕೊಲೆ ಪ್ರಕರಣದ ಆರೋಪಿಗಳಾದ ನಾರಾಯಣ ಮಾಳಿ ಹಾಗೂ ಹಸನ್‌ಸಾಬ್ ದಲಾಯತ್‌ರನ್ನು ಕಸ್ಟಡಿಗೆ ತೆಗೆದುಕೊಂಡು ಚಿಕ್ಕೋಡಿ ಡಿವೈಎಸ್‌ಪಿ ಬಸವರಾಜ ಯಲಿಗಾರ ನೇತೃತ್ವದಲ್ಲಿ ವಿಚಾರಣೆ ನಡೆಸುತ್ತಿದ್ದು, ಪ್ರಮುಖ ಆರೋಪಿ ನಾರಾಯಣ ಮಾಳಿ ಪಾಪಪ್ರಜ್ಞೆಯ ನಾಟಕವಾಡುತ್ತಿದ್ದು, ಪೊಲೀಸರ ದಾರಿ ತಪ್ಪಿಸುತ್ತಿದ್ದಾನೆಯೇ ಎಂಬ ಸಂಶಯ ಮೂಡಿಸಿದೆ. ವಿಚಾರಣೆ ವೇಳೆ ನನ್ನಿಂದ ತಪ್ಪಾಗಿದೆ. ನೀವೇ ಗುಂಡು ಹಾರಿಸಿ ಕೊಲ್ಲಿ, ಇಲ್ಲ ನಾನೇ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ …

Read More »

ಜೈನಮುನಿಗಳ ಇಬ್ಬರು ಹಂತಕರು 7 ದಿನ ಪೋಲೀಸ್ ಕಸ್ಟಡಿಗೆ.

ಹಿರೇಕೋಡಿ ನಂದಿಪರ್ವತ ಆಶ್ರಮದ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು,ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಆರೋಪಿಗಳಿಗೆ ವೈದ್ಯಕೀಯ ಪರೀಕ್ಷೆ ಮಾಡಲಾಯಿತು. ವೈದ್ಯಕೀಯ ಪರೀಕ್ಷೆ ಬಳಿಕ ಆರೋಪಿಗಳನ್ನು ಕೋರ್ಟ್‌ಗೆ ಕರೆ ತಂದ ಪೊಲೀಸರು,ಆರೋಪಿತರಾದ,ಎ1 ಆರೋಪಿ ನಾರಾಯಣ ಮಾಳಿ, ಎ2 ಆರೋಪಿ ಹಸನಸಾಬ್ ದಲಾಯತ್ ಕೋರ್ಟ್‌ಗೆ ಹಾಜರು ಪಡಿಸಲಾಯಿತು.ಚಿಕ್ಕೋಡಿ ಪ್ರಧಾನ ದಿವಾಣಿ ನ್ಯಾಯಾಲಯಕ್ಕೆ ಕರೆತಂದ ಪೊಲೀಸರು,ಬಿಗಿಪೊಲೀಸ್ ಭದ್ರತೆಯಲ್ಲಿ ಆರೋಪಿಗಳು ನ್ಯಾಯಾಲಯಕ್ಕೆ ಹಾಜರು ಪಡಿಸಿದರು. ಜುಲೈ 17ರವರೆಗೆ ಇಬ್ಬರು ಆರೋಪಿಗಳು ಪೊಲೀಸ್ ಕಸ್ಟಡಿಗೆ …

Read More »

ಘಟಪ್ರಭಾ ನದಿಗೆ ಬಿದ್ದ ಬೈಕ್ ಇಬ್ಬರು ನೀರು ಪಾಲು….!!

ಬೆಳಗಾವಿ-ಘಟಪ್ರಭಾ ನದಿಯಲ್ಲಿ ಇಬ್ಬರು ಸಂಬಂಧಿಗಳು.ಕೊಚ್ಚಿಹೋದ ಘಟನೆ ನಡೆದಿದೆ.ಬೆ ಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಅವರಾದಿ ಬಳಿ ಘಟನೆ ನಡೆದಿದೆ. ಅವರಾದಿ ಬ್ರಿಡ್ಜ್ ಮೇಲೆ ನಿಯಂತ್ರಣ ತಪ್ಪಿ ಘಟಪ್ರಭಾ ನದಿಗೆ ಬ ಬೈಕ್ ಬಿದ್ದ ಕಾರಣಚನ್ನಪ್ಪ ಹರಿಜನ್(30), ದುರ್ಗವ ಹರಿಜನ್(25) ಇಬ್ಬರು ಕೊಚ್ಚಿಹೋಗಿದ್ದಾರೆ.ಅವರಾದಿ ಗ್ರಾಮದಿಂದ ಮಹಾಲಿಂಗಪುರಕ್ಕೆ ಹೋರಟ್ಟಿದ್ದ ಇಬ್ಬರು ನೀರು ಪಾಲಾಗಿದ್ದಾರೆ. ಬ್ರಿಡ್ಜ್ ಬಳಿ ಬೈಕ್ ಪತ್ತೆಯಾಗಿದ್ದು ಇಬ್ಬರಿಗಾಗಿ ಶೋಧ ಕಾರ್ಯ ನಡೆದಿದೆ.ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದೆ.ಘಟಪ್ರಭಾ ನದಿಗೆ …

Read More »

ಹೊರ ಗುತ್ತಿಗೆ ನೌಕರರಿಗೆ , ಕನಿಷ್ಠ ವೇತನ ಒದಗಿಸುವುದು ಅಧಿಕಾರಿಗಳ ಜವಾಬ್ದಾರಿ.

ಬೆಳಗಾವಿ, – ಸರಕಾರದ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರಿಗೆ ಶಾಸನಾತ್ಮಕ ಸೌಲಭ್ಯಗಳು ಮತ್ತು ಕನಿಷ್ಠ ವೇತನ ಕಾಯ್ದೆ ಪ್ರಕಾರ ವೇತನ ಮತ್ತಿತರ ಸೌಲಭ್ಯಗಳನ್ನು ಗುತ್ತಿಗೆದಾರರು ಸಮರ್ಪಕವಾಗಿ ಒದಗಿಸುವುದನ್ನು ಖಚಿತಪಡಿಸಿಕೊಳ್ಳುವುದು ಆಯಾ ಇಲಾಖೆಯ ಅಧಿಕಾರಿಗಳ ಹೊಣೆಗಾರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು. ಸರ್ಕಾರದ ವಿವಿಧ ಇಲಾಖೆಗಳು, ನಿಗಮ ಮಂಡಳಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರ ಗುತ್ತಿಗೆ ನೌಕರರಿಗೆ ದೊರಕುವ ಶಾಸನಾತ್ಮಕ ಸೌಲಭ್ಯಗಳು ಮತ್ತು ಕಾರ್ಮಿಕ ಕಾಯ್ದೆ ಅರಿವು ಕುರಿತು ಜಿಲ್ಲಾಧಿಕಾರಿ ಕಚೇರಿಯ …

Read More »

ಶಾಸಕ ರಾಜು ಸೇಠ ಅವರಿಂದ ಬೆಳಗಾವಿ ಸಿಟಿ ರೌಂಡ್ಸ್…!!!

ಬೆಳಗಾವಿ- ಅಧಿವೇಶನದ ಬಿಡುವಿನ ಸಮಯದಲ್ಲಿ ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅಸೀಪ್ ( ರಾಜು) ಸೇಠ ಅವರು ಬೆಳಗಾವಿ ನಗರದ ಉತ್ತರ ಮತಕ್ಷೇತ್ರದ ಹಲವಾರು ಪ್ರದೇಶಗಳಿಗೆ ಭೇಟಿ ನೀಡಿ ಸಾರ್ವಜನಿಕರ ಅಹವಾಲು ಕೇಳಿದ್ರು… ಬೆಳಗಾವಿ ಮಹಾನಗರ ಪಾಲಿಕೆಯ ಆಯುಕ್ತ ಅಶೋಕ ದುಡಗುಂಟಿ ಅವರ ಜೊತೆ ಜಿಟಿ,ಜಿಟಿ ಮಳೆಯಲ್ಲೂ ಕೈಯಲ್ಲಿ ಛತ್ರಿ ಹಿಡಿದು ನಗರದ ಗಲ್ಲಿ ಗಲ್ಲಿಗಳಲ್ಲಿ ಸುತ್ತಾಡಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದ್ರು.ಮಳೆ ವಿಪರೀತವಾದಾಗ ಯಾವ ಯಾವ ಪ್ರದೇಶಗಳಲ್ಲಿ ಜನ ಯಾವ …

Read More »

ಬೆಳಗಾವಿಯ ಜೈನ ಮುನಿ ಹತ್ಯೆ : ಸಿಎಂ ಸಿದ್ದರಾಮಯ್ಯ ಹೇಳಿದ್ದೇನು ?

ಬೆಂಗಳೂರು :ಚಿಕ್ಕೋಡಿಯ ಹಿರೇಕೋಡಿಯ ಜೈನಮುನಿ ಹತ್ಯೆ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿ ಆರೋಪಿಗಳಿಗೆ ನ್ಯಾಯಾಲಯದಲ್ಲಿ ಶಿಕ್ಷೆ ಆಗುವಂತೆ ಕಾನೂನು ಕ್ರಮ ಕೈಗೊಳ್ಳಲು ಹಿರಿಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ. ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಮುಖ್ಯಮಂತ್ರಿಗಳು, ಕಾನೂನುಬಾಹಿರ ಕೃತ್ಯ ಎಸಗುವವರ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ. ಕಾನೂನು ಕೈಗೆತ್ತಿಕೊಳ್ಳುವ ಹಕ್ಕು ಯಾರಿಗೂ ಇಲ್ಲ.ತಪ್ಪು ಯಾರೇ ಮಾಡಿದ್ದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ. ಈಗಾಗಲೇ …

Read More »

ಬೆಳಗಾವಿ ಜಿಲ್ಲೆಯಲ್ಲಿ ಮತ್ತೆ ಡಬಲ್ ಮರ್ಡರ್…

ಬೆಳಗಾವಿ:ದಂಪತಿಗಳಿಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆಗೈದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಹುಕ್ಕೇರಿ ತಾಲೂಕಿನ ಮಾವನೂರಿನ ಗಜೇಂದ್ರ ಈರಪ್ಪ ಹುನ್ನೂರಿ(60) ಹಾಗೂ ದ್ರಾಕ್ಷಾಯಿಣಿ ಗಜೇಂದ್ರ ಹುನ್ನೂರಿ(45) ಹತ್ಯೆಗೀಡಾದ ದಂಪತಿ. ಮಾವನೂರಿನಲ್ಲಿನ ಮನೆಯಲ್ಲಿ ದಂಪತಿಗಳಿಬ್ಬರನ್ನು ಮಾರಕಾಸ್ತ್ರಗಳಿಂದ ಮುಖ ಮತ್ತು ತಲೆಗೆ ಹಲ್ಲೆ ನಡೆಯಿಸಿ ಶುಕ್ರವಾರ ಕೊಲೆಗೈಯಲಾಗಿದೆ. ದಂಪತಿಗೆ ಓರ್ವ ಮಗಳಿದ್ದು, ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ಶುಕ್ರವಾರ ಮನೆಯಲ್ಲಿ ದಂಪತಿ ಮಾತ್ರವೇ ವಾಸಗಿದ್ದು, ಶುಕ್ರವಾರವೇ ಯಾರೋ ಮಾರಕಾಸ್ತ್ರಗಳಿಂದ ಕೊಚ್ಚಿದ್ದು, ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. …

Read More »

ಎಸ್ಪಿ ಸಂಜೀವ್ ಪಾಟೀಲರು ತೋರಿದ ಕರ್ತವ್ಯ ಪ್ರಜ್ಞೆಗೆ ಸಲಾಂ..!!

ಚಿಕ್ಕೊಡಿ: ಹಿರೇಕೋಡಿಯ ನಂದಿ ಪರ್ವತ ಆಶ್ರಮದ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣವನ್ನು ಕೆಲವೇ ಗಂಟೆಯೊಳಗೆ ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಇದರ ಯಶಸ್ಸು ನಿಸ್ಸಂದೇಹವಾಗಿ ಎಸ್ಪಿ ಸಂಜೀವ್ ಪಾಟೀಲ ಅವರಿಗೆ ಸಲ್ಲಬೇಕು. ಜೈನಮುನಿಯ ನಾಪತ್ತೆಯಾದ ದೂರು ದಾಖಲಾದ ಸುದ್ದಿ ತಿಳಿಯುತ್ತಿದ್ದಂತೆ ಆಶ್ರಮಕ್ಕೆ ದೌಡಾಯಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ್ ಪಾಟೀಲ ಆರೋಪಿಗಳ ಪತ್ತೆ ಹಾಗೂ ಬಂಧನದಿಂದ ಹಿಡಿದು ಮುನಿಗಳ ಮೃತದೇಹ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳಿಸುವ …

Read More »

ಮೃತದೇಹವನ್ನು ಪೀಸ್ ಪೀಸ್ ಮಾಡಿ ಕತ್ತರಿಸಿರುವ ಕ್ರೂರಿಗಳು..!!

ಚಿಕ್ಕೋಡಿ-ಹಿರೇಕೋಡಿಯ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಕೇಸ್ ರಹಸ್ಯ ಬಯಲಾಗಿದೆ.ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಮೃತದೇಹದ 9 ಭಾಗಗಳನ್ನ ಕೊಳವೆಬಾವಿಯಿಂದ ಹೊರ ತೆಗೆಯಲಾಗಿದೆ. ಎರಡು ಕೈ, ಎರಡು ಕಾಲು, ಎರಡು ಭಾಗ ತೊಡೆ, ತಲೆಯ ಎರಡು ಭಾಗ, ಹೊಟ್ಟೆ ಪ್ರತ್ಯೇಕವಾಗಿ ಕತ್ತರಿಸಿರುವ ಕ್ರೂರಿಗಳು,ಜೈನಮುನಿಗಳ ಹತ್ಯೆಗೈದು ಮೃತದೇಹ ಪೀಸ್ ಪೀಸ್ ಮಾಡಿ ಹಂತಕರು ಕೊಳವೆಬಾವಿಗೆ ಎಸೆದಿದ್ದರು. ಖಟಕಬಾವಿ ಗ್ರಾಮದ ಗದ್ದೆಯಲ್ಲಿರುವ 400 ಅಡಿ ಆಳದ ಕೊಳವೆಬಾವಿಗೆ ಎಸೆದಿದ್ದ ಹಂತಕರು ಸಾಕ್ಷ್ಯ …

Read More »

ನಾಪತ್ತೆಯಾಗಿದ್ದ, ನಂದಿ ಮಹಾರಾಜರ ಹತ್ಯೆ, ಶವಕ್ಕಾಗಿ ಶೋಧ ಕಾರ್ಯಾಚರಣೆ.

ಬೆಳಗಾವಿ-ಹಿರೇಕೋಡಿಯ ಆಚಾರ್ಯ ಕಾಮಕುಮಾರ ನಂದಿ ಮಹಾರಾಜರು ನಾಪತ್ತೆಯಾದ ಕುರಿತು ನಿನ್ನೆ ಮಧ್ಯಾಹ್ನ ದೂರು ದಾಖಲಾಗಿತ್ತು,ಆದ್ರೆ ರಾತ್ರಿ ಹೊತ್ತಿಗೆ ಮಹಾರಾಜರ ಹತ್ಯೆಯಾಗಿರುವ ವಿಚಾರ, ಪೋಲೀಸರ ತನಿಖೆಯಿಂದ ದೃಡವಾಗಿದೆ. ನಂದಿ ಮಹಾರಾಜರ ಹತ್ಯೆಯಾಗಿರುವ ಬಗ್ಗೆ   ಖಟಕಬಾವಿ ಗ್ರಾಮದಲ್ಲಿ ಎಸ್‌ಪಿ ಡಾ.ಸಂಜೀವ್ ಪಾಟೀಲ್ ಮಾದ್ಯಮಗಳಿಗೆ ಹೇಳಿಕೆ ನೀಡಿದ್ದಾರೆ‌.ಬುಧವಾರ ರಾತ್ರಿಯಿಂದ ಸ್ವಾಮೀಜಿ ಕಾಣೆಯಾಗಿದ್ದಾರೆ ಎಂದು ನಿನ್ನೆ ಭಕ್ತರು ದೂರು ನೀಡಿದ್ರು,ಭಕ್ತರು ದೂರಿನ ಮೇರೆಗೆ ತನಿಖೆ ಕೈಗೊಂಡಿದ್ದೇವು,ಬುಧವಾರ ಹಾಗೂ ಹಿಂದಿನ ದಿನಗಳ ಘಟನಾವಳಿಗಳ ಬಗ್ಗೆ ತಾಳೆ ಹಾಕಿ …

Read More »

ಇದ್ದಕ್ಕಿದ್ದಂತೆ ಬಸದಿಯಿಂದ ಜೈನ ಮುನಿ ನಾಪತ್ತೆ, ಭಕ್ತರಲ್ಲಿ ಆತಂಕ

ಚಿಕ್ಕೋಡಿ-ಇದ್ದಕ್ಕಿದ್ದಂತೆ ಬಸದಿಯಿಂದ ಜೈನ ಮುನಿ ನಾಪತ್ತೆ, ಭಕ್ತರಲ್ಲಿ ಆತಂಕ ಮೂಡಿದೆ. ಚಿಕ್ಕೋಡಿ ಪಕ್ಕದ ಹಿರೇಕೋಡಿಯ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರು ನಾಪತ್ತೆಯಾದ ಘಟನೆ ನಡೆದಿದೆ.ಮಹಾರಾಜರು ನಾಪತ್ತೆಯಾದ ಬಗ್ಗೆ ಭಕ್ತರು ಪೋಲೀಸರಿಗೆ ದೂರು ನೀಡಿದ್ದಾರೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದಲ್ಲಿರುವ ಆಶ್ರಮ ಇದಾಗಿದೆ.ಹಿರೇಕೋಡಿ ಗ್ರಾಮದ ನಂದಿಪರ್ವತ ಜೈನ ಆಶ್ರಮದಿಂದ ಮಹಾರಾಜರು ನಾಪತ್ತೆಯಾಗಿದ್ದಾರೆ. ನಿನ್ನೆ ಬೆಳಗ್ಗೆ 8 ಗಂಟೆಯಿಂದ ನಾಪತ್ತೆಯಾಗಿರುವ ಜೈನ ಮುನಿಗಳನ್ನು ಭಕ್ತರು ಹುಡುಕಾಟ ಆರಂಭಿಸಿದ್ದಾರೆ.ಮೊನ್ನೆ …

Read More »

ಸಿದ್ಧು ಬಜೆಟ್ ನಲ್ಲಿ ಬೆಳಗಾವಿಗೆ ಸಿಕ್ಕಿದ್ದೇನು ಗೊತ್ತಾ..??

ಬೆಳಗಾವಿ- ಹೊಸ ಸರ್ಕಾರದ ಹೊಸ ಬಜೆಟ್ ನಲ್ಲಿ ಬೆಳಗಾವಿ ಜಿಲ್ಲೆಯ ಪಾಲಿಗೆ ಭರವಸೆಯ ಬೆಳಕು ಮೂಡಿದ್ದು ಹಲವಾರು ಮಹತ್ವದ ಯೋಜನೆಗಳು ಬಜೆಟ್ ನಲ್ಲಿ ಘೋಷಣೆಯಾಗಿವೆ. ಬೆಳಗಾವಿಯಲ್ಲಿ ಅಲ್ಪಸಂಖ್ಯಾತ ಯುವಕರಿಗೆ ಕೌಶಲ್ಯ ತರಬೇತಿ ಕೇಂದ್ರ… • 4 ಕೋಟಿ ರೂ. ವೆಚ್ಚದಲ್ಲಿ ಬೆಳಗಾವಿ ಸೇರಿದಂತೆ ರಾಮನಗರ, ದಾವಣಗೆರೆ ಕಲಬುರಗಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅಲ್ಪಸಂಖ್ಯಾತ ಯುವ ಜನರಿಗೆ ಕೌಶಲ್ಯ ತರಬೇತಿಯನ್ನು ಪ್ರಾರಂಭ. ಬೆಳಗಾವಿಯಲ್ಲಿ AHS ಘಟಕ ಸ್ಥಾಪನೆ… • ರಾಜೀವ್‌ …

Read More »

ನೀರಿನ ಮಟ್ಟ ಕುಸಿತ,ತುರ್ತು ಸಭೆ ಕರೆದ ಬೆಳಗಾವಿ ಪ್ರಾದೇಶಿಕ ಆಯುಕ್ತರು.

ಮಳೆ ಕೊರತೆ: ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿತ ಕುಡಿಯುವ ಉದ್ಧೇಶಕ್ಕೆ ಮಾತ್ರ ನೀರು ಬಳಕೆಗೆ ಪ್ರಾದೇಶಿಕ ಆಯುಕ್ತ: ನಿತೇಶ್ ಪಾಟೀಲ ಸೂಚನೆ ಬೆಳಗಾವಿ- ಮುಂಗಾರು ಮಳೆಯ ವಿಫಲತೆಯಿಂದಾಗಿ ಆಲಮಟ್ಟಿ, ಮಲಪ್ರಭಾ, ಹಿಪ್ಪರಗಿ ಮತ್ತು ಹಿಡಕಲ್ ಜಲಾಶಯಗಳಲ್ಲಿ ನೀರಿನ ಮಟ್ಟ ತೀವ್ರವಾಗಿ ಕಡಿಮೆಯಾಗಿರುವುದರಿಂದ ಜಲಾಶಯಗಳಲ್ಲಿ ಸಂಗ್ರಹಿತ ನೀರನ್ನು ವ್ಯವಸ್ಥಿತವಾಗಿ ಕುಡಿಯುವ ಉದ್ದೇಶಕ್ಕಾಗಿ ಮಾತ್ರ ಬಳಕೆ ಮಾಡಬೇಕು ಎಂದು ಪ್ರಾದೇಶಿಕ ಆಯುಕ್ತರಾದ ನಿತೇಶ್ ಪಾಟೀಲ ಅವರು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. …

Read More »