Breaking News
Home / LOCAL NEWS / ಸಚಿವರ ಸಭೆಗೆ ಗೈರು ಅಧಿಕಾರಿಗಳಿಗೆ ನೋಟಿಸ್…!

ಸಚಿವರ ಸಭೆಗೆ ಗೈರು ಅಧಿಕಾರಿಗಳಿಗೆ ನೋಟಿಸ್…!

ಬೆಳಗಾವಿ: ಆಗಸ್ಟ ಖಾಸಗಿ ಆಸ್ಪತ್ರೆಗಳಲ್ಲಿ ಸಾರ್ವಜನಿಕರಿಂದ ಹೆಚ್ಚಿನ ಹಣ ಸುಲಿಗೆ ಮಾಡಲಾಗುತ್ತಿದೆ ಎಂಬ ದೂರುಗಳು ಕೇಳಿಬರುತ್ತಿರುವುದರಿಂದ ಪ್ರತಿಯೊಂದು ಆಸ್ಪತ್ರೆಗಳಲ್ಲಿ ಕಡ್ಡಾಯವಾಗಿ ಚಿಕಿತ್ಸೆಗಳ ದರಪಟ್ಟಿಯನ್ನು ಕಡ್ಡಾಯವಾಗಿ ಪ್ರದರ್ಶಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಚಿಕ್ಕೋಡಿಯ ಪ್ರವಾಸಿ ಮಂದಿರದಲ್ಲಿ ಮಂಗಳವಾರ ನಡೆದ ಚಿಕ್ಕೋಡಿ ಉಪ ವಿಭಾಗ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.
ಖಾಸಗಿ ಆಸ್ಪತ್ರೆಗಳಲ್ಲಿ ದರಪಟ್ಟಿಯನ್ನು ಜನರಿಗೆ ಕಾಣುವಂತೆ ಪ್ರದರ್ಶಿಸುವುದು ಕಡ್ಡಾಯ. ಆದರೆ ಬಹುತೇಕ ಆಸ್ಪತ್ರೆಗಳಲ್ಲಿ ದರಪಟ್ಟಿ ಕಾಣಿಸುತ್ತಿಲ್ಲ. ಆದ್ದರಿಂದ ಆರೋಗ್ಯ ಇಲಾಖೆ ಅಧಿಕಾರಿಗಳು ಪ್ರತಿಯೊಂದು ಆಸ್ಪತ್ರೆಗೆ ಭೇಟಿ ನೀಡಿ ದರಪಟ್ಟಿ ಅಳವಡಿಸಲು ಕ್ರಮ ಕೈಗೊಳ್ಳಬೇಕು ಎಂದು ಸಚಿವರು ತಿಳಿಸಿದರು.
ಹಾವು ಕಚ್ಚಿದರೆ ಚಿಕಿತ್ಸೆ ನೀಡಲು 6ರಿಂದ 8 ಸಾವಿರ ರೂಪಾಯಿ ಖರ್ಚಾಗಬಹುದು. ಆದರೆ ಕೆಲವು ಆಸ್ಪತ್ರೆಗಳಲ್ಲಿ 40ರಿಂದ 50 ಸಾವಿರ ರೂಪಾಯಿಗಳವರೆಗೆ ಬಿಲ್ ಮಾಡಲಾಗುತ್ತಿದೆ ಎಂದು ಕುಡಚಿ ಶಾಸಕ ಪಿ.ರಾಜೀವ ಸಚಿವರ ಗಮನಸೆಳೆದರು.
ಇದನ್ನು ಗಂಭೀರವಾಗಿ ಪರಿಗಣಿಸಿದ ಸಚಿವ ರಮೇಶ ಜಾರಕಿಹೊಳಿ ಅವರು, ಆರೋಗ್ಯ ಇಲಾಖೆ ಅಧಿಕಾರಿಗಳು ಆಸ್ಪತ್ರೆಗಳಲ್ಲಿ ದರಪಟ್ಟಿ ಅಳವಡಿಸುವುದರ ಜತೆಗೆ ಯಾವ ಚಿಕಿತ್ಸೆಗೆ ಎಷ್ಟು ವೆಚ್ಚ ತಗಲುತ್ತದೆ ಎಂಬುದರ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದು ಸಲಹೆ ನೀಡಿದರು.

ವೈದ್ಯರ ಮೇಲೆ ಜಿಪಿಎಸ್ ನಿಗಾ:
ವೈದ್ಯರ ಕೊರತೆ ಇರುವುದರಿಂದ ಒಬ್ಬ ವೈದ್ಯರನ್ನು ಎರಡು ಅಥವಾ ಮೂರು ಪ್ರಾಥಮಿಕ ಕೇಂದ್ರಗಳಿಗೆ ನಿಯೋಜಿಸಲಾಗುತ್ತಿದೆ. ಆದರೆ ವೈದ್ಯರೂ ಯಾವ ಕೇಂದ್ರದಲ್ಲೂ ಲಭ್ಯವಾಗುತ್ತಿಲ್ಲ ಎಂದು ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಅಸಮಾಧಾನ ವ್ಯಕ್ತಪಡಿಸಿದರು.
ಇದಕ್ಕೆ ಸ್ಪಂದಿಸಿದ ಜಿಲ್ಲಾ ಉಸ್ತುವಾರಿ ಸಚಿª ರಮೇಶ ಜಾರಕಿಹೊಳಿ ಅವರು, ವೈದ್ಯರ ಮೇಲೆ ನಿಗಾ ವಹಿಸಲು ಜಿಪಿಎಸ್ ವ್ಯವಸ್ಥೆಯನ್ನು ಜಾರಿಗೆ ತರುವಂತೆ ಹೇಳಿದರು.
ಈಗಾಗಲೇ ಪ್ರಾಯೋಗಿಕವಾಗಿ ಈ ವ್ಯವಸ್ಥೆ ಅಳವಡಿಸಲಾಗಿದ್ದು, ಯಶಸ್ವಿಯಾದರೆ ಎಲ್ಲೆಡೆ ಜಾರಿಗೆ ಬರಲಿದೆ ಎಂದು ಆರೋಗ್ಯಾಧಿಕಾರಿಗಳು ವಿವರಿಸಿದರು.
ಅನವಶ್ಯಕವಾಗಿ ಮಹಿಳೆಯರ ಗರ್ಭಕೋಶ ಕಿತ್ತುಹಾಕುತ್ತಿರುವ ಪ್ರಕರಣಗಳು ವರದಿಯಾಗಿದ್ದು, ಜಿಲ್ಲೆಯಲ್ಲಿ ಈ ಬಗ್ಗೆ ನಿಗಾವಹಿಸಬೇಕು ಎಂದು ಸೂಚನೆ ನೀಡಲಾಯಿತು.

ಸಭೆಗೆ ಗೈರು-ಅಧಿಕಾರಿಗಳಿಗೆ ನೋಟಿಸ್:
ಗಂಗಾಕಲ್ಯಾಣ ಯೋಜನೆಯ ಫಲಾನುಭವಿಗಳಿಗೆ ವಿದ್ಯುತ್ ಸಂಪರ್ಕ ನೀಡದೇ ಸತಾಯಿಸಲಾಗುತ್ತಿದೆ ಎಂದು ರಾಯಬಾಗ ಶಾಸಕ ದುರ್ಯೋಧನ ಐಹೊಳೆ ಅವರು ಸಚಿವರ ಗಮನಕ್ಕೆ ತಂದರು.
ಟಿಸಿ ರೈತರಿಗೆ ವಿನಾಕಾರಣ ಸತಾಯಿಸಲಾಗುತ್ತಿದ್ದು, ಹಣ ನೀಡಿದವರಿಗೆ ಟಿಸಿ ನೀಡುತ್ತಿರುವ ಪ್ರಕರಣಗಳು ತಮ್ಮ ಗಮನಕ್ಕೆ ಬಂದಿದೆ ಎಂದು ಕುಡಚಿ ಶಾಸಕ ರಾಜೀವ ಅಸಮಾಧಾನ ವ್ಯಕ್ತಪಡಿಸಿದರು.

Check Also

ಗೋ ಬ್ಯಾಕ್ ಸಂಧಾನಕ್ಕಾಗಿ ,ದಿಢೀರ್ ಬೆಳಗಾವಿಗೆ ಯಡಿಯೂರಪ್ಪ…!!

ಬೆಳಗಾವಿ- ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಬೆಳಗಾವಿ ಕ್ಷೇತ್ರದಿಂದ ಸ್ಪರ್ದಿಸುವ ವಿಚಾರದಲ್ಲಿ ಬಿಜೆಪಿಯಿಂದಲೇ ಗೋ ಬ್ಯಾಕ್ ಆಂದೋಲನ ಶುರುವಾದ …

Leave a Reply

Your email address will not be published. Required fields are marked *