Breaking News
Home / ಬೆಳಗಾವಿ ನಗರ / ಬೆಳಗಾವಿ ದಕ್ಷಿಣದಿಂದ ಶಂಕರ ಮುನವಳ್ಳಿ ತಯಾರಿ

ಬೆಳಗಾವಿ ದಕ್ಷಿಣದಿಂದ ಶಂಕರ ಮುನವಳ್ಳಿ ತಯಾರಿ

ಬೆಳಗಾವಿ- ಬೆಳಗಾವಿ ದಕ್ಷಿಣ ವಿಧಾನಸಭಾ ಮತಕ್ಷೇತ್ರದಿಂದ ಸ್ಪರ್ದಿಸಲು ಕಾಂಗ್ರೆಸ್ ಮುಖಂಡ ಶಂಕರ ಮುನವಳ್ಳಿ ತಯಾರಿ ನಡೆಸಿದ್ದಾರೆ ಎಮದು ತಿಳಿದು ಬಂದಿದೆ

ಮುಂಬರುವ ವಿಧಾನಸಭೆಯ ಚುನಾವಣೆಯಲ್ಲಿ ಸ್ಪರ್ದಿಸಲು ಶಂಕರ ಮುನವಳ್ಳಿ ಈಗಿನಿಂದಲೇ ತಯಾರಿ ನಡೆಸಿದ್ದಾರೆ ಎಂದು ತಿಳಿದು ಬಂದಿದ್ದು ದಕ್ಷಿಣ ಮತಕ್ಷೇತ್ರದಲ್ಲಿ ತಮ್ಮ ಸೇವಾ ಕಾರ್ಯವನ್ನು ಅವರು ಆರಂಭಿಸಿದ್ದಾರೆ ಹಲವಾರು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಸಂಘಟನೆಗಾಗಿ ಶ್ರಮಿಸುತ್ತಿರುವ ಶಂಕರ ಮುನವಳ್ಳಿ ರಾಜಕಾರಣದ ಜೊತೆ ಸಮಾಜ ಸೇವೆ ಮಾಡುತ್ತಾ ಬಂದಿದ್ದಾರೆ ನೇರ ದಿಟ್ಟ ನಿರಂತರ  ಎನ್ನುವ ಹಾಗೆ ಕಾಂಗ್ರೆಸ್ ನಾಯಕರು ಎಡವಿದಾಗ ತಪ್ಪು ಮಾಡಿದಾಗ ಬಹಿರಂಗವಾಗಯೇ ಖಂಡಿಸುತ್ತಾ ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತರ ಪಡೆಯನ್ನು ಕಟ್ಟಿಕೊಂಡಿದ್ದಾರೆ

ಬೆಳಗಾವಿ ದಕ್ಷಿಣ ಮತಕ್ಷೇತ್ರದಿಂದ ಸ್ಪರ್ದಿಸಲು ಶಂಕರ ಮುನವಳ್ಳಿ ನಿರ್ಧರಿಸಿದ್ದಾರೆ ಎನ್ನುವ ಚರ್ಚೆ ಆರಂಭವಾಗಿದ್ದು ಅನೇಕ ಜನ ನಿಷ್ಠಾವಂತ ಕಾಂಗ್ರೆಸ್ ನಾಯಕರು ಚುನಾವಣೆಗೆ ಸ್ಪರ್ದಿಸುವಂತೆ ಶಂಕರ ಮುನವಲ್ಲಿ ಅವರ ಮೇಲೆ ಒತ್ತಡ ಹೇರಿದ್ದಾರೆ ಎಂದು ಹೇಳಲಾಗಿದೆ

Check Also

ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…

ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮಹಿಳೆಯೊಬ್ಬಳು ಗಂಭೀರವಾಗಿ ಗಾಯಗೊಂಡ …

Leave a Reply

Your email address will not be published. Required fields are marked *