Breaking News
Home / Uncategorized / ಶನಿವಾರ ಲಕ್ಷ್ಮೀ ಹೆಬ್ಬಾಳಕರ ಕ್ಷೇತ್ರಕ್ಕೆ ಸಚಿವ ರಮೇಶ್ ಜಾರಕಿಹೊಳಿ

ಶನಿವಾರ ಲಕ್ಷ್ಮೀ ಹೆಬ್ಬಾಳಕರ ಕ್ಷೇತ್ರಕ್ಕೆ ಸಚಿವ ರಮೇಶ್ ಜಾರಕಿಹೊಳಿ

ಬೆಳಗಾವಿ- ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ‌* ಅವರು ದಿನಾಂಕ 02.05.2020, ಶನಿವಾರದಂದು ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿರುವ ಕಿಣಯೇ ಡ್ಯಾಂ ಕಾಮಗಾರಿಯನ್ನು ವೀಕ್ಷಿಸಲಿದ್ದಾರೆ.

ಮದ್ಯಾಹ್ನ 12-00 ಘಂಟೆಗೆ
ನೀರಾವರಿ ಇಲಾಖೆ ಮತ್ತು ಕ.ನೀ.ನಿ.ನಿ.ದ ಅಧಿಕಾರಿಗಳೊಂದಿಗೆ *‌ಪ್ರಗತಿ‌ ಪರಿಶೀಲನಾ ಸಭೆ* ನಡೆಸಲಿದದ್ದಾರೆ.

ಜಲಸಂಪನ್ಮೂಲ ಸಚಿವರಾದ ಬಳಿಕ ಲಕ್ಷ್ಮೀ ಹೆಬ್ಬಾಳಕರ ಪ್ರತಿನಿಧಿಸುತ್ತಿರುವ ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಿಣಿಯೇ ಡ್ಯಾಂ ಕಾಮಗಾರಿ ಬಹುತೇಕ ಮುಕ್ತಾಯವಾಗಿದ್ದು,ಜಲಾಶಯದ ಎಡದಂಡೆ ಮತ್ತು ಬಲದಂಡೆ ಕಾಮಗಾರಿಗಳು ನಡೆಯುತ್ತಿವೆ.

ಬೆಳಗಾವಿ ನಗರದ ಸುಮಾರು 20 ಕಿ ಮೀ ಅಂತರದಲ್ಲಿರುವ ಕಿಣೆಯೇ ಜಲಾಶಯ ಈ ಭಾಗದ ರೈತರ ಜೀವನಾಡಿಯಾಗಿದ್ದು ಕಾಲುವೆ ಕಾಮಗಾರಿಗಳ ಗುಣಮಟ್ಟವನ್ನು ಸಚಿವ ರಮೇಶ್ ಜಾರಕಿಹೊಳಿ ಪರಶೀಲನೆ ಮಾಡಲಿದ್ದಾರೆ

ನೀರಾವರಿ ಇಲಾಖೆಯ ಹಿರಿಯ ಅಧಿಕಾರಿಗಳು ಈ ಸಂಧರ್ಭದಲ್ಲಿ ಉಪಸ್ಥಿತ ರಿರುವರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Check Also

ಮಹಾರಾಷ್ಟ್ರ ಗಡಿ ಉಸ್ತುವಾರಿ ಸಚಿವರ ಮುಖಕ್ಕೆ ಕಪ್ಪು ಮಸಿ ಎರಚಿದ್ರು…!!

ಬೆಳಗಾವಿ-ಮಹಾರಾಷ್ಟ್ರ ಗಡಿ ಉಸ್ತುವಾರಿ ಸಚಿವ ಚಂದ್ರಕಾಂತ ಪಾಟೀಲ ಅವರ ಮುಖಕ್ಕೆ ಮಸಿ ಬಳಿದ ಘಟನೆ ಇಂದು ಮಹಾರಾಷ್ಟ್ರದ ಪೂನೆಯಯಲ್ಲಿ ನಡೆದಿದೆ. …

Leave a Reply

Your email address will not be published. Required fields are marked *