Breaking News

LOCAL NEWS

ಬೆಳಗಾವಿ ಲೋಕಸಭಾ ಅಖಾಡಕ್ಕೆ ಸಾಹುಕಾರ್ ಎಂಟ್ರಿ….!!

ಬೆಳಗಾವಿ- ಬೆಳಗಾವಿ ಲೋಕಸಭಾ ಅಖಾಡಕ್ಕೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಎಂಟ್ರಿ ಹೊಡೆದಿದ್ದಾರೆ.ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಜೊತೆ ಎರಡು ಗಂಟೆಗೂ ಹೆಚ್ವು ಕಾಲ ಚರ್ಚಿಸಿ ಚುನಾವಣೆಯ ರೂಪುರೇಷೆಗಳ ಬಗ್ಗೆ ಸಮಾಲೋಚನೆ ಮಾಡಿದ್ದಾರೆ.ಗುರುವಾರ ಮಧ್ಯಾಹ್ನ ಮಂಗಲಾ ಅಂಗಡಿ ಅವರ ಗೃಹ ಕಚೇರಿಯಲ್ಲಿ ರಮೇಶ್ ಜಾರಕಿಹೊಳಿ ಜಗದೀಶ್ ಶೆಟ್ಟರ್ ಅವರನ್ನು ಭೇಟಿಯಾಗಿ ಎಲ್ಲರ ಗಮನ ಸೆಳೆದಿದ್ದಾರೆ. ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಅಲೆ,ಇದೆ,ಕಾರ್ಯಕರ್ತರು ಉತ್ಸುಕರಾಗಿದ್ದಾರೆ.ಎಲ್ಲರೂ ಒಮ್ಮತದಿಂದ ಕೆಲಸ ಮಾಡುತ್ತಾರೆ.ಎಲ್ಲರಲ್ಲಿಯೂ ಸಹಮತ ಇದೆ‌.ನರೇಂದ್ರ …

Read More »

ಧಾರವಾಡದಿಂದ, ಪ್ರಲ್ಹಾದ್ ಜೋಶಿ ಬದಲಾವಣೆಗೆ ಮಠಾಧೀಶರ ಪಟ್ಟು…!!

ಧಾರವಾಡ ‌ಲೋಕಸಭೆ ಅಭ್ಯರ್ಥಿ ಪ್ರಹ್ಲಾದ್ ‌ಜೋಶಿ ಬದಲಾವಣೆಗೆ ದಿಂಗಾಲೇಶ್ವರ ಸ್ವಾಮೀಜಿ ಆಗ್ರಹ: ಮಾ.31 ರ ಗಡುವು ನೀಡಿದ ಮಠಾಧೀಶರು… ಹುಬ್ಬಳ್ಳಿ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಲಿಂಗಾಯತ ಮತ್ತು ಉಳಿದ ಸಮಾಜವನ್ನು ತುಳಿಯುತ್ತಿದ್ದಾರೆ. ಸ್ವಾಮೀಜಿಗಳನ್ನು ಅಪಮಾನಗೊಳಿಸಿದ್ದಾರೆ. ಧಾರವಾಡ ಲೋಕಸಭಾ ಮತಕ್ಷೇತ್ರದಿಂದ ಅವರಿಗೆ ನೀಡಿರುವ ಟಿಕೆಟ್’ನ್ನು ಬಿಜೆಪಿ ವರಿಷ್ಠರು ಮಾ. 31 ರೊಳಗೆ ಬದಲಾವಣೆ ಮಾಡಬೇಕೆಂದು ಶಿರಹಟ್ಟಿಮಠದ ಪಕೀರ ದಿಂಗಾಲೇಶ್ವರ ಮಹಾಸ್ವಾಮಿಗಳು ಆಗ್ರಹಿಸಿದರು. ಮೂರುಸಾವಿರಮಠದ ಆವರಣದಲ್ಲಿ ವಿವಿಧ ಸ್ವಾಮೀಜಿಗಳೊಂದಿಗೆ ಚಿಂತನ ಮಂಥನ …

Read More »

ಬುಧವಾರ, ಬೆಳಗಾವಿಯಲ್ಲಿ ಜಗದೀಶ್ ಶೆಟ್ಟರ್ ಗೆ ಗ್ರ್ಯಾಂಡ್ ವೆಲ್ ಕಮ್…!!!

ಬೆಳಗಾವಿ: ಬೆಳಗಾವಿ ಲೋಕಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಜಗದೀಶ್ ಶೆಟ್ಟರ್ ಅವರು ನಾಳೆ ಬುಧವಾರ ಬೆಳಗಾವಿಗೆ ಬರಲಿದ್ದು ಬೆಳಗಾವಿಯ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಜಗದೀಶ್ ಶೆಟ್ಟರ್ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲು ನಿರ್ಧರಿಸಿದ್ದಾರೆ. ನಾಳೆ,ಬುಧವಾರದಂದು ಬೆಳಿಗ್ಗೆ 10 ಘಂಟೆಗೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೀರೆಬಾಗೇವಾಡಿ ಟೋಲ್ ಮೂಲಕ ಬೆಳಗಾವಿ ಲೊಕಸಭಾ ಕ್ಷೇತ್ರಕ್ಕೆ ಆಗಮಿಸಲಿದ್ದು ಸಾವಿರಾರು ಬಿಜೆಪಿ ಕಾರ್ಯಕರ್ತರು ಅವರಿಗೆ ಬೃಹತ್ ಸ್ವಾಗತ ಮಾಡಲಿದ್ದಾರೆ. ಎಂದು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ …

Read More »

ಗೋ ಬ್ಯಾಕ್ ಸಂಧಾನಕ್ಕಾಗಿ ,ದಿಢೀರ್ ಬೆಳಗಾವಿಗೆ ಯಡಿಯೂರಪ್ಪ…!!

ಬೆಳಗಾವಿ- ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಬೆಳಗಾವಿ ಕ್ಷೇತ್ರದಿಂದ ಸ್ಪರ್ದಿಸುವ ವಿಚಾರದಲ್ಲಿ ಬಿಜೆಪಿಯಿಂದಲೇ ಗೋ ಬ್ಯಾಕ್ ಆಂದೋಲನ ಶುರುವಾದ ಹಿನ್ನಲೆಯಲ್ಲಿ ಬಿಜೆಪಿಯ ಅತೃಪ್ತ ನಾಯಕರನ್ನು ಸಂತೈಸಲು ಮಾಜಿ ಸಿಎಂ ಯಡಿಯೂರಪ್ಪ ಬೆಳಗಾವಿಗೆ ಇಂದು ರಾತ್ರಿ ಆಗಮಿಸುತ್ತಿದ್ದಾರೆ. ಬೆಳಗಾವಿಯ ಪಂಚತಾರಾ ಹೊಟೆಲ್ ನಲ್ಲಿ ಯಡಿಯೂರಪ್ಪ ನವರು ಬೆಳಗಾವಿ ಜಿಲ್ಲೆಯ ಬಿಜೆಪಿ ಶಾಸಕರು, ಮಾಜಿ ಶಾಸಕರು,ಹಾಗು ಸ್ಥಳೀಯ ಬಿಜೆಪಿ ನಾಯಕರ ಜೊತೆ ಮಹತ್ವದ ಸಭೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ. ಸೋಶಿಯಲ್ …

Read More »

ಲಕ್ಷ್ಮಣ ಸವದಿ ಕ್ಷೇತ್ರದಿಂದಲೇ ಪ್ರಿಯಾಂಕಾ ಪ್ರಚಾರ ಆರಂಭ…

ಬೆಳಗಾವಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಲು ಕರೆ ಅಥಣಿ: ದೇಶಕ್ಕೆ ಕಾಂಗ್ರೆಸ್ ಪಕ್ಷ ಹಲವು ಕೊಡುಗೆಗಳನ್ನು ನೀಡಿದೆ. ಆರ್ಥಿಕ ಸಬಲೀಕರಣಕ್ಕಾಗಿ ಕಾಂಗ್ರೆಸ್​ 5 ಗ್ಯಾರಂಟಿಗಳನ್ನು ನೀಡಿದೆ. ಕೊವಿಡ್​​, ಪ್ರವಾಹದ ಸಂದರ್ಭದಲ್ಲಿ ಜನರಿಗೆ ಸಾಕಷ್ಟು ಕೆಲಸ ಮಾಡಿದ್ದೇವೆ. ಹೀಗಾಗಿ ಬೆಳಗಾವಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಲೇಬೇಕೆಂದು ಲೋಕೋಪಯೋಗಿ ಇಲಾಖೆ ಸಿವ ಸತೀಶ್‌ ಜಾರಕಿಹೊಳಿ ಅವರು ಹೇಳಿದರು. ಅಥಣಿ ಪಟ್ಟಣದಲ್ಲಿ ಚಿಕ್ಕೋಡಿ ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ …

Read More »

ಯೋಗ್ಯತೆ ಇದ್ರೂ ಯೋಗ ಇಲ್ಲ: ಲಕ್ಷ್ಮಿ ಹೆಬ್ಬಾಳ್ಕರ್ ಅಳಿಯನ ಅಸಮಾಧಾನ

ಬೆಂಗಳೂರು: ಧಾರವಾಡ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಬಯಸಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅಳಿಯ ರಜತ್ ಉಳ್ಳಾಗಡ್ಡಿಮಠ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಧಾರವಾಡ-ಧಾರವಾಡದಿಂದ ವಿನೋದ್ ಅಸೂಟಿಗೆ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ. ಹೀಗಾಗಿ ತಮ್ಮ ಬೆಂಬಲಿಗರ ಸಭೆ ನಡೆಸಿದ ರಜತ್ ಉಳ್ಳಾಗಡ್ಡಿಮಠ, ಈ ಬಾರಿ ನಾನು ಎಂಟ್ರೆನ್ಸ್ ಎಕ್ಸಾಮ್ ಫೇಲ್ ಆಗಿದ್ದೇನೆ ಎಂದು ಹೇಳಿದ್ದಾರೆ. ಯೋಗ್ಯತೆ ಇದ್ರೂ ಯೋಗ ಇಲ್ಲ: ಟಿಕೆಟ್ ಮಿಸ್ ಆಗಿದ್ದಕ್ಕೆ ಲಕ್ಷ್ಮಿ ಹೆಬ್ಬಾಳ್ಕರ್ ಅಳಿಯ ಅಸಮಾಧಾನ ಕಳೆದ …

Read More »

ಬಿಜೆಪಿ ಪಟ್ಟಿ ಬಿಡುಗಡೆ,ಬೆಳಗಾವಿಯಿಂದ ಶೆಟ್ಟರ್ ಉತ್ತರ ಕನ್ನಡದಿಂದ ಕಾಗೇರಿ…

ಬೆಳಗಾವಿ – ಕೊನೆಗೂ ಬಿಜೆಪಿ ಪಟ್ಟಿ ಬಿಡುಗಡೆಯಾಗಿದೆ.ಬೆಳಗಾವಿಯಿಂದ ಜಗದೀಶ್ ಶೆಟ್ಟರ್ ಹಾಗೂ ಉತ್ತರ ಕನ್ನಡದಿಂದ ವಿಶ್ವೇಶರ್ ಹೆಗಡೆ ಕಾಗೇರಿ ಅವರು ಫೈನಲ್ ಆಗಿದ್ದಾರೆ. ಹಾಲಿ ಸಂಸದ ಅನಂತಕುಮಾರ್ ಹೆಗಡೆ ಅವರನ್ನು ಬಿಜೆಪಿ ಕೈಬಿಟ್ಟಿದೆ. ಅಲ್ಲಿ ಕಾಗೇರಿಯವರನ್ನು ಬಿಜೆಪಿ ಕಣಕ್ಕಿಳಿಸಿದೆ. ಬೆಳಗಾವಿ ಲೋಕಸಭಾವಕ್ಷೇತ್ರದಿಂದ ಕೊನೆಗೂ ಜಗದೀಶ್ ಶೆಟ್ಟರ್ ಅವರ ಹೆಸರು ಫೈನಲ್ ಆಗಿದೆ.

Read More »

ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ ಇಬ್ಬರು ಸಾವು!

ಬೆಳಗಾವಿ-ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿ ಇಬ್ಬರು ಸಾವನ್ನೊಪ್ಪಿದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರ ದುರ್ಮರಣ ಹೊಂದಿದ್ದಾರೆ.ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ರೇವಡಿಕೊಪ್ಪ ಗ್ರಾಮದ ಬಳಿ ಈ ಘಟನೆ ನಡೆದಿದೆ. ಕೊಳಚಿ ಗ್ರಾಮದ ವೆಂಕನಗೌಡ ಪಾಟೀಲ್(50), ಲಕ್ಕನಾಯಕನಕೊಪ್ಪದ ಪ್ರಮೋದ್ ಕುಂಬಾರ್(18) ಮೃತ ದುರ್ದೈವಿಗಳಾಗಿದ್ದಾರೆ.ಇಬ್ಬರು ಬೈಕ್ ಸವಾರರು ಗಾಯಗೊಂಡಿದ್ದು ಅವರನ್ನು ರಾಮದುರ್ಗ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ರಾಮದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ …

Read More »

ಒಂದೇ ತಿಂಗಳಲ್ಲಿ ಇಂಗ್ಲೀಷ್ ಸ್ಪೀಕೀಂಗ್ ಕೋಟ…!!

ಕೋಟ ಶ್ರೀನಿವಾಸ ಪೂಜಾರಿಯವರಿಗೆ ಒಂದೇ ತಿಂಗಳಲ್ಲಿ ಇಂಗ್ಲಿಷ್ ಕಲಿಸುವುದಾಗಿ ಹೇಳಿದ ಬೆಳಗಾವಿಯ ಖ್ಯಾತ ಇಂಗ್ಲಿಷ್ ಟ್ರೆನರ್ ! ಬೆಳಗಾವಿ: ಉಡುಪಿ- ಚಿಕ್ಕಮಗಳೂರು ಲೋಕಸಭಾ ಮತಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸಿರುವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಒಂದು ತಿಂಗಳಲ್ಲೇ ಇಂಗ್ಲಿಷ್ ಕಲಿಸುವುದಾಗಿ ಬೆಳಗಾವಿಯ ಖ್ಯಾತ ಇಂಗ್ಲಿಷ್ ಟ್ರೆನರ್ ಜಿ.ಎಲ್.ಮಂಜುನಾಥ ತಿಳಿಸಿದ್ದಾರೆ. ಮೂಲತಃ ಹಾಸನದವರಾಗಿರುವ ಬೆಳಗಾವಿಯಲ್ಲಿ ಕಳೆದ 20 ವರ್ಷಗಳಿಂದ ಟೈಮ್ ಇಂಗ್ಲಿಷ್ ಟ್ರೈನಿಂಗ್ ಅಕಾಡೆಮಿ ಮೂಲಕ ವಿದ್ಯಾರ್ಥಿಗಳು, ಉದ್ಯೋಗಾರ್ಥಿಗಳು ಹಾಗೂ ನಾಗರಿಕರಿಗೆ ಇಂಗ್ಲಿಷ್ …

Read More »

ಬೆಳಗಾವಿಯ ಪೋಲೀಸ್ ಠಾಣೆ ಆವರಣದಲ್ಲಿ ಶವ ಪತ್ತೆ….!!

ಬೆಳಗಾವಿ-ಪೊಲೀಸ್ ಠಾಣೆ ಆವರಣದಲ್ಲಿ ಅನುಮಾಸ್ಪದ ವ್ಯಕ್ತಿಯ ಶವಪತ್ತೆ!ಯಾಗಿದೆ.ಬೆಳಗಾವಿ ನಗರದ ಕ್ಯಾಂಪ್‌ ಪ್ರದೇಶದ ಸಂಚಾರಿ ಪೊಲೀಸ್ ಠಾಣಾ ಆವರಣದಲ್ಲಿ ಶವ ಪತ್ತೆಯಾಗಿದ್ದು ಅನೇಕ ಅನುಮಾನಗಳಿಗೆ ಕಾರಣವಾಗಿದೆ. ಜಪ್ತಿ ಮಾಡಿ ನಿಲ್ಲಿಸಿದ್ದ ಬಸ್ ಹಿಂಬದಿಯ ಸೀಟ್ ನಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.ಅಂದಾಜು 40-45ವರ್ಷದ ವ್ಯಕ್ತಿಯ ಮೃತದೇಹ ಇದಾಗಿದೆ.ಕಳೆದ ಹದಿನೈದು ದಿನಗಳ ಹಿಂದೆಯೇ ಸಾವನ್ನಪ್ಪಿದ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಕ್ಯಾಂಪ್‌ ಪೊಲೀಸರ ಭೇಟಿ, ನೀಡಿ ಪರಿಶೀಲನೆ ನಡೆಸಿದ್ದಾರೆ.ಕೊಲೆಯೋ ಅಥವಾ ಅಸಹಜ ಸಾವೋ ಎಂಬುವುದರ …

Read More »

ಬೆಳಗಾವಿಯ 65 ಚೆಕ್ ಪೋಸ್ಟ್ ಗಳಲ್ಲಿ check… check…order..order…!!

ಚೆಕ್ ಪೋಸ್ಟ್ ಗಳಲ್ಲಿ ತೀವ್ರ ನಿಗಾ ವಹಿಸಲು ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀ ಸೂಚನೆ ಬೆಳಗಾವಿ, -ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಕ್ರಮ ಮದ್ಯ, ಹಣ ಮತ್ತಿತರ ವಸ್ತುಗಳ ಸಾಗಾಣಿಕೆ ತಡೆಗಟ್ಟುವ ನಿಟ್ಟಿನಲ್ಲಿ ಸ್ಥಾಪಿಸಲಾಗಿರುವ ಚೆಕ್ ಪೋಸ್ಟ್ ಗಳಲ್ಲಿ ತೀವ್ರ ನಿಗಾವಹಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶನಿವಾರ(ಮಾ.23) ನಡೆದ ಸಹಾಯಕ ಚುನಾವಣಾಧಿಕಾರಿಗಳು ಮತ್ತು ನೋಡಲ್ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಜಿಲ್ಲೆಯಾದ್ಯಂತ …

Read More »

ಬೆಳಗಾವಿಯಲ್ಲಿ ಮತ್ತೆ ಎಂಇಎಸ್ ಕಿತಾಪತಿ,ಕಾಂಗ್ರೆಸ್ ಬಿಜೆಪಿಗೆ ಕಿರಿಕಿರಿ…..!!

ಬೆಳಗಾವಿ-ಚುನಾವಣೆ ಬಂದಾಗ,ಭಾಷಾ ವೈಷಮ್ಯದ ವಿಷ ಬೀಜ ಬಿತ್ತಿ,ರಾಜಕೀಯ ಬೇಳೆ ಬೇಯಿಸುತ್ತ ಬಂದಿರುವ ನಾಡದ್ರೋಹಿ ಎಂಇಎಸ್ ನಾಯಕರು ಈಗ ಮತ್ತೆ ಬಾಲ ಬಿಚ್ಚಿದ್ದಾರೆ, ಲೋಕಸಭಾ ಚುನಾವಣೆಯಲ್ಲಿ ಬೆಳಗಾವಿ ಮತ್ತು ಕಾರವಾರ ಎರಡೂ ಕ್ಷೇತ್ರಗಳಿಂದ ಸ್ಪರ್ದೆ ಮಾಡುವ ನಿರ್ಧಾರ ಕೈಗೊಂಡಿದ್ದಾರೆ. ಬೆಳಗಾವಿಯ ಮರಾಠಾ ಮಂದಿರದಲ್ಲಿ ಸಭೆ ಸೇರಿದ ಎಂಇಎಸ್ ನಾಯಕರು ಸಂಘಟನೆಯ ಅಸ್ತಿತ್ವಕ್ಕೆ ಲೋಕಸಭೆ ಚುನಾವಣೆಗೆ ನಿಲ್ಲಬೇಕು.ಈ ಬಾರಿ ಎಂಇಎಸ್ ಅಭ್ಯರ್ಥಿಯನ್ನು ಬೆಳಗಾವಿ ಮತ್ತು ಕಾರವಾರ ಎರಡೂ ಕ್ಷೇತ್ರಗಳಿಂದ ಕಣಕ್ಕಿಳಿಸಬೇಕು ಎಂದು ಎಂಇಎಸ್ …

Read More »

ಬೆಳಗಾವಿಯಿಂದ ಬಹುತೇಕ ಇವರೇ ಫೈನಲ್ ಆಗುವ ಸಾಧ್ಯತೆ….

ಬೆಳಗಾವಿ-ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ ಮೂರು ಕ್ಷೇತ್ರಗಳನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟುಕೊಟ್ಟಿದೆ.ಉಳಿದ ಇಪ್ಪತ್ತು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ,ಐದು ಸೀಟುಗಳು ಘೋಷಣೆ ಆಗಬೇಕಿವೆ,ಈ ಐದು ಸೀಟುಗಳಲ್ಲಿ ಬೆಳಗಾವಿ ಮತ್ತು ಉತ್ತರ ಕನ್ನಡ (ಕಾರವಾರ) ಕ್ಷೇತ್ರಗಳು ಇವೆ. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಹಾಲಿ ಸಂಸದೆ ಮಂಗಲಾ ಅಂಗಡಿ ಬದಲು ಜಗದೀಶ್ ಶೆಟ್ಟರ್ ಅವರಿಗೆ ಬೆಳಗಾವಿಯಿಂದ ಬಿಜೆಪಿ ಟಿಕೆಟ್ ಸಿಗಲಿದೆ ಎಂದು ಸ್ವತಃ ಮಂಗಲಾ ಅಂಗಡಿ ಅವರೇ ಮಾಹಿತಿ ನೀಡಿದ್ದರು,ಇದಾದ …

Read More »

5,8,9,11ನೇ ತರಗತಿ ಬೋರ್ಡ್​ ಎಕ್ಸಾಂಗೆ ಗ್ರೀನ್ ಸಿಗ್ನಲ್!!

ಬೆಂಗಳೂರು : ರಾಜ್ಯದ 5, 8, 9, 11ನೇ ತರಗತಿ ಬೋರ್ಡ್ ಪರೀಕ್ಷೆಯ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ನ ವಿಭಾಗೀಯ ಪೀಠ ತೀರ್ಪು ಅನ್ನು ಪ್ರಕಟಿಸಿದೆ. ರಾಜ್ಯದ 5, 8, 9,11 ನೇ ತರಗತಿಯ ಬೋರ್ಡ್ ಪರೀಕ್ಷೆಯನ್ನು ನಡೆಸಲು ಹೈಕೋರ್ಟ್ ಅಸ್ತು ಎಂದಿದೆ. ಸ್ಥಗಿತಗೊಂಡಿದ್ದ ಪರೀಕ್ಷೆಯನ್ನು ಮುಂದುವರೆಸಲು ಹೈಕೋರ್ಟ್ ಆದೇಶವನ್ನು ಹೊರಡಿಸಿದೆ ನ್ಯಾಯಮೂರ್ತಿಗಳಾದ ಕೆ.ಸೋಮಶೇಖರ್ ಹಾಗೂ ನ್ಯಾಯಮೂರ್ತಿ ಕೆ.ರಾಜೇಶ್ ರೈ ಅವರಿದ್ದ ವಿಭಾಗೀಯ ಪೀಠ ಬೋರ್ಡ್ ಪರೀಕ್ಷೆಗೆ ಅನುಮತಿಯನ್ನು ನೀಡಿ …

Read More »

ಈ ಹುಡುಗಿ ನಮ್ಮ ಕ್ರಾಂತಿಯ ನೆಲದವಳು..ಇವಳು ನಮ್ಮವಳು…!!

    ಬೆಳಗಾವಿ: ಸೂರ್ಯ ಮುಳುಗದ ಸಾಮ್ರಾಜ್ಯ ಎಂದು ಸೊಕ್ಕಿನಿಂದ ಮೆರೆಯುತ್ತಿದ್ದ ಬ್ರಿಟಿಷರಿಗೆ ಮೊಟ್ಟ ಮೊದಲ ಸೋಲಿನ ರುಚಿ ತೋರಿಸಿದ ವೀರರಾಣಿ ಚೆನ್ನಮ್ಮನ ನಾಡು‌ ಬೈಲಹೊಂಗಲ. ಕ್ರಾಂತಿಗೆ ಹೆಸರಾದ ಈ ನಾಡು ಅನೇಕ ಶೂರ, ಧೀರರನ್ನು ನಾಡಿಗೆ ಕೊಟ್ಟಿದೆ. ಮಹಿಳಾ ಐಪಿಎಲ್ ನಲ್ಲಿ‌ ಮಿಂಚಿದ ಶ್ರೇಯಾಂಕಾ ಪಾಟೀಲ್ ಕೂಡ ಇದೇ ನಾಡಿನ ಮೊಮ್ಮಗಳು. ಹಾಗಾಗಿ, ಇಲ್ಲಿನ ಜನ ಮತ್ತಷ್ಟು ಅಭಿಮಾನ ಪಡುತ್ತಿದ್ದಾರೆ. ಇತ್ತಿಚೆಗಷ್ಟೇ ಮುಕ್ತಾಯವಾದ ಮಹಿಳಾ ಐಪಿಎಲ್ ನಲ್ಲಿ ಬೆಂಗಳೂರು …

Read More »