Home / Breaking News / ನಿಪ್ಪಾಣಿ ಪೋಲೀಸರ ಸಮಯ ಪ್ರಜ್ಞೆ, ತಪ್ಪಿದ ಭಾರೀ ಅನಾಹುತ….!!!

ನಿಪ್ಪಾಣಿ ಪೋಲೀಸರ ಸಮಯ ಪ್ರಜ್ಞೆ, ತಪ್ಪಿದ ಭಾರೀ ಅನಾಹುತ….!!!

ಬೆಳಗಾವಿ – ಮಹಾರಾಷ್ಟ್ರದಿಂದ ಔಷಧಿ ಸಾಗಿಸುವ ಕಂಟೇನರ್ ನಲ್ಲಿ ಕದ್ದು ಮುಚ್ವಿ ಕರ್ನಾಟಕದ ಗಡಿ ಪ್ರವೇಶ ಮಾಡಲು ಪ್ರಯತ್ನಿಸಿದ್ದ 24 ಜನರನ್ನು ತಡೆದಿರುವ ನಿಪ್ಪಾಣಿ ಪೋಲೀಸರು ದೊಡ್ಡ ಅನಾಹುತವನ್ನೇ ತಪ್ಪಸುವಲ್ಲಿ ಯಶಸ್ವಿಯಾಗಿದ್ದಾರೆ .

ಏಪ್ರಿಲ್ 16 ರಂದು ಔಷಧಿ ಸಾಗಿಸುವ ಕಂಟೇನರ್ ಕಾಗಲ್ ಬಳಿ ಕರ್ನಾಟಕದ ಗಡಿ ಪ್ರವೇಶಿಸುವಾಗ ಕಂಟೇನರ್ ತಡೆದು ಕಂಟೇನರ್ ಚೆಕ್ ಮಾಡಿದಾಗ 24 ಜನರು ಔಷಧಿ ಭಾಕ್ಸ್ ಗಳ ನಡುವೆ ಮುಚ್ಚಿ ಕುಳಿತುಕೊಂಡಿದ್ದರು ಅವರನ್ನು ವಶಕ್ಕೆ ಪಡೆದ ನಿಪ್ಪಾಣಿ ಪೋಲೀಸರು ಮಹಾರಾಷ್ಟ್ರದ ಪೋಲೀಸರಿಗೆ ಒಪ್ಪಸಿದ್ದರು‌.

ಕರಗನಾಟಕದ ಗಡಿ ನುಸುಳುವ ಪ್ರಯತ್ನ ಮಾಡಿದ್ದ 24 ಜನರನ್ನು ಕಾಗಲ್ ಬಳಿಯ ಕಾಸಬಾಸಾ ಗಾಂವ ಬಳಿ ಸಾಮೂಹಿಕ ಕ್ವಾರಂಟೈನ್ ಮಾಡಲಾಗಿತ್ತು

ಕೊಲ್ಹಾಪೂರ ಜಿಲ್ಲಾಡಳಿತ 24 ಜನರ ಗಂಟಲು ದ್ರವವನ್ನು ಪರೀಕ್ಷೆಗೊಳಪಡಿಸಿದಾಗ 24 ಜನರಲ್ಲಿ ಇಬ್ಬರ ರಿಪೋರ್ಟ್ ಪಾಸಿಟೀವ್ ಬಂದಿದ್ದು ನಿಪ್ಪಾಣಿ ಪೋಲೀಸರ ಸಮಯ ಪ್ರಜ್ಞೆಯಿಂದಾಗಿ ಅನಾಹುತ ತಪ್ಪಿದೆ

ನಿಪ್ಪಾಣಿ ಪೋಲೀಸರ ಕಾರ್ಯಕ್ಕೆ ಜಿಲ್ಲಾ ಪೋಲೀಸ್ ಇಲಾಖೆ ಪ್ರಶಂಸೆ ಮಾಡುವ ಮೂಲಕ ನಿಪ್ಪಾಣಿ ಪೋಲೀಸರಿಗೆ ಬಹುಮಾನ ಘೋಷಿಸಿದೆ ಎಂದು ತಿಳಿದು ಬಂದಿದೆ .

ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ನಿಂಬರಗಿ ಅವರು ಗಡಿಯಲ್ಲಿ ಯಾರೊಬ್ಬರೂ ಆಕ್ರಮವಾಗಿ ನುಸುಳಿ ಬಾರದಂತೆ ಬಿಗಿ ಬಂದೋಬಸ್ತ ಮಾಡಿ ತೀವ್ರ ನಿಗಾ ವಹಿಸಿದ ಪರಿಣಾಮ ನುಸುಳುಕೋರರಿಗೆ ಲಗಾಮು ಹಾಕಿದಂತಾಗಿದೆ ….

ಬೆಳಗಾವಿ ಜಿಲ್ಲಾ ಪೋಲೀಸ್ ಜಿಂದಾಬಾದ್…..!!!

Check Also

ಒಂದು ಟೇಬಲ್ ಎರಡು ಖರ್ಚಿಗೆ ಮಾತ್ರ ಅವಕಾಶ….!!

ಲೋಕಸಭಾ ಚುನಾವಣೆ: ಬಿಗಿ ಬಂದೋಬಸ್ತ್ ಸುಗಮ-ಶಾಂತಿಯುತ ಮತದಾನಕ್ಕೆ ಸಕಲ ಸಿದ್ದತೆ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಬೆಳಗಾವಿ, -: ಲೋಕಸಭಾ ಚುನಾವಣೆ …

Leave a Reply

Your email address will not be published. Required fields are marked *