Home / Breaking News / ಮುಂದಿನ ವರ್ಷ ಅಬಕಾರಿ ಇಲಾಖೆಯ ಎಲ್ಲಾ ವರ್ಗದ ಸಿಬ್ಬಂದಿಗೆ ಬಡ್ತಿ

ಮುಂದಿನ ವರ್ಷ ಅಬಕಾರಿ ಇಲಾಖೆಯ ಎಲ್ಲಾ ವರ್ಗದ ಸಿಬ್ಬಂದಿಗೆ ಬಡ್ತಿ

ಅನಧಿಕೃತ ಮದ್ಯ ಮಾರಾಟ ತಡೆಯಲು ಗೋವಾ- ಬೆಳಗಾವಿ ಗಡಿಯಲ್ಲಿ ಹೆಚ್ಚಿನ ನಿಗಾ: ಅಬಕಾರಿ ಸಚಿವ ಎಚ್. ನಾಗೇಶ್
………………………………………………………….
ಬೆಳಗಾಾಾವ— ಲಾಕ್ ಡೌನ್ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆಗೆ ಶೇ. 50 ಆದಾಯ ಕಡಿಮೆ ಆಗಿದ್ದು, ಒಟ್ಟಾರೆ
3 ಸಾವಿರ ಕೋಟಿ ಇಲಾಖೆಗೆ ನಷ್ಟವಾಗಿದೆ‌‌. ಬಾರ್ ಮತ್ತು ರೆಸ್ಟೊರೆಂಟ್ ತೆರೆದ ಬಳಿಕ ಅಬಕಾರಿ ಇಲಾಖೆಯ ಅದಾಯ ಹೆಚ್ಚಲಿದೆ ಎಂದು ಅಬಕಾರಿ ಸಚಿವರಾದ ಎಚ್. ನಾಗೇಶ ಅವರು ತಿಳಿಸಿದರು.

ಸುವರ್ಣ ವಿಧಾನಸೌಧದಲ್ಲಿ ಶನಿವಾರ ( ಆ.೨೯)
ಅಬಕಾರಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಮಾಧ್ಯಮದವರ ಜತೆ ಅವರು ಮಾತನಾಡಿದರು.

ಸದ್ಯಕ್ಕೆ ಬಾರ್ ಮತ್ತು ರೆಸ್ಟೊರೆಂಟ್ ತೆರೆಯುವ ಬಗ್ಗೆ ಯಾವುದೇ ನಿರ್ಣಯ ಕೈಗೊಂಡಿಲ್ಲ.‌ ಬಾರ್ ಮತ್ತು ರೆಸ್ಟೊರೆಂಟ್ ತೆರೆಯುವುದರಿಂದ ಸರ್ಕಾರಕ್ಕೆ ಆದಾಯ ಬರಬಹುದು ಆದರೆ ಕೋವಿಡ್-೧೯ ಹಿನ್ನೆಲೆಯಲ್ಲಿ ಬಾರ್ ಮತ್ತು ರೆಸ್ಟೊರೆಂಟ್ ತೆರೆಯಲು ಅನುಮತಿ ನೀಡಿಲ್ಲ.

ಬೆಳಗಾವಿ ಜಿಲ್ಲೆಗೆ ಗೋವಾದಿಂದ ಅನಧಿಕೃತ ಮದ್ಯ ಸಾಗಿಸುವ ಕೆಲಸ ದಿನದಿಂದ ದಿನಕ್ಕೆ ಹೆಚ್ಚಾಗಿ ನಡೆಯುತ್ತಿದೆ. ಆದ್ದರಿಂದ ಬೆಳಗಾವಿ ಮತ್ತು ಗೋವಾ ಗಡಿಯಲ್ಲಿ ರಾತ್ರಿಯ ವೇಳೆ ಹೆಚ್ಚು ನಿಗಾ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಕಳ್ಳ ಭಟ್ಟಿ ಮಾಡುವರಿಗೆ ಹೆಚ್ಚಿನ ದಂಡ ಹಾಗೂ ಕಠಿಣ ಶಿಕ್ಷೆ ನೀಡಲು ಕ್ರಮ ಕೈಗೊಳ್ಳಲಾಗುವುದು. ಹೆಚ್ಚಿನ ದಂಡ ಕಟ್ಟುವುದರಿಂದ ಕಳ್ಳ ಭಟ್ಟಿ ಮಾಡುವ ಪ್ರಮಾಣ ಕಡಿಮೆ ಆಗುತ್ತದೆ ಎಂದು ತಿಳಿಸಿದರು ‌

ಮುಂದಿನ ವರ್ಷ ಅಬಕಾರಿ ಇಲಾಖೆಯ ಎಲ್ಲಾ ವರ್ಗದ ಸಿಬ್ಬಂದಿಗೆ ಬಡ್ತಿ ನೀಡಲಾಗುವುದು. ಅಬಕಾರಿ ಇಲಾಖೆಯ ಸಿಬ್ಬಂದಿಗಳ ರಕ್ಷಣೆಗಾಗಿ ಪೊಲೀಸ್ ಇಲಾಖೆಯ ರೀತಿಯಲ್ಲಿ ಶಸ್ತ್ರಾಸ್ತ್ರ ನೀಡುವ ಬಗ್ಗೆ ಚರ್ಚಿಸಲಾಗುವುದು ಎಂದು ಹೇಳಿದರು.

ಎಮ್. ಆರ್. ಪಿ ಅಂಗಡಿಗಳಿಗೆ ಹೊಸದಾಗಿ ಲೈಸೆನ್ಸ್ ನೀಡುವುದಿಲ್ಲ. ಅದಕ್ಕೆ ಸರ್ಕಾರದಿಂದಲೂ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.‌ ಅಬಕಾರಿ ಇಲಾಖೆಯಲ್ಲಿ ರಾಜ್ಯಮಟ್ಟದ ಸಹಾಯವಾಣಿ (೧೮೦೦೪೨೫೨೫೫) ಆರಂಭಿಸಲಾಗುವುದು ಎಂದು ಸಚಿವ ಎಚ್.ನಾಗೇಶ್ ತಿಳಿಸಿದರು.

ಈ ವೇಳೆ ರಾಜ್ಯ ಅಬಕಾರಿ ಇಲಾಖೆಯ ಆಯುಕ್ತರಾದ ಡಾ. ಲೋಕೇಶ್, ಜಂಟಿ ‌ಆಯುಕ್ತ ಡಾ. ವೈ. ಮಂಜುನಾಥ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇದಕ್ಕೂ ಮುಂಚೆ ಇಲಾಖೆಯ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
****

Check Also

ಒಂದು ಟೇಬಲ್ ಎರಡು ಖರ್ಚಿಗೆ ಮಾತ್ರ ಅವಕಾಶ….!!

ಲೋಕಸಭಾ ಚುನಾವಣೆ: ಬಿಗಿ ಬಂದೋಬಸ್ತ್ ಸುಗಮ-ಶಾಂತಿಯುತ ಮತದಾನಕ್ಕೆ ಸಕಲ ಸಿದ್ದತೆ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಬೆಳಗಾವಿ, -: ಲೋಕಸಭಾ ಚುನಾವಣೆ …

Leave a Reply

Your email address will not be published. Required fields are marked *