Breaking News
Home / Breaking News / ಕಾವ್ಯ ಮಾಣಿಕ್ಯ, ಬೆಳಗಾವಿಯ ನದೀಮ ಸನದಿ

ಕಾವ್ಯ ಮಾಣಿಕ್ಯ, ಬೆಳಗಾವಿಯ ನದೀಮ ಸನದಿ

ನದೀಮ ಅವರಿಗೆ ಕಾವ್ಯ ಮಾಣಿಕ್ಯ ಪ್ರಶಸ್ತಿ
ಬೆಳಗಾವಿ ೧೯:ಹಾಸನದ ಮಾಣಿಕ್ಯ ಪ್ರಕಾಶನ ನೀಡುವ ಕಾವ್ಯ ಮಾಣಿಕ್ಯ ರಾಜ್ಯಪ್ರಶಸ್ತಿಗೆ
ಬೆಳಗಾವಿಯ ಯುವ ಕವಿ ನದೀಮ ಸನದಿ ಅವರ ಪ್ರಥಮ ಕೃತಿ ಹುಲಿಯ ನೆತ್ತಿಗೆ ನೆರಳು ಕವನ ಸಂಕಲನ ಆಯ್ಕೆಯಾಗಿದೆ.ನಿನ್ನೆ ರವಿವಾರ ದಿ.೧೮ ರಂದು ಹಾಸನದ ಸಂಸ್ಕೃತ ಭವನದಲ್ಲಿ ನಡೆದ ಸಮಾರಂಭದಲ್ಲಿ ಪದ್ಮಶ್ರೀ ಪುರಸ್ಕೃತ ಹಿರಿಯ ಸಾಹಿತಿ ಡಾ.ದೊಡ್ಡರಂಗೇಗೌಡ ಅವರು ನದೀಮ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.
ನದೀಮ ಸನದಿ ಬಿ.ಇ, ಎಂ.ಟೆಕ್.ಪದವೀಧರರಾಗಿದ್ದು,ಸಧ್ಯ ಬೆಳಗಾವಿ ಸ್ಮಾರ್ಟ್ ಸಿಟಿ ಯಲ್ಲಿ ಸಹಾಯಕ ಸಿವಿಲ್ ಎಂಜಿನಿಯರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.
ಸ್ಮಾರ್ಟ್ ಸಿಟಿಯ ನಿರ್ದೇಶಕ ರಾದ ಶ್ರೀ ಶಶಿಧರ ಕುರೇರ ನದೀಮ್ ಅವರನ್ನು ಅಭಿನಂದಿಸಿದ್ದಾರೆ.

Check Also

ಮನೆ,ಮನೆಗೆ ಹೋಗಿ ಮತದಾರರ ಚೀಟಿ ವಿತರಿಸಲು ಡಿಸಿ ನಿತೇಶ್ ಪಾಟೀಲ್ ಸೂಚನೆ

ಬೆಳಗಾವಿ, ):ಮತದಾರರಿಗೆ ತಮ್ಮ ಮತಗಟ್ಟೆಗಳ ಬಗ್ಗೆ ಮುಂಚಿತವಾಗಿ ಮತದಾರರ ಚೀಟಿ(ವೋಟರ್ ಸ್ಲಿಪ್)ಗಳನ್ನು ನೀಡಿದರೆ ಮತದಾನ ಮಾಡಲು ಅನುಕೂಲವಾಗಲಿದೆ. ಆದ್ದರಿಂದ ಪ್ರತಿಯೊಂದು …

Leave a Reply

Your email address will not be published. Required fields are marked *