Breaking News
Home / Breaking News / ಪ್ರಕಾಶ್ ಹುಕ್ಕೇರಿ ಹೇಳಿಕೆಗೆ ಕವಟಗಿಮಠ ಟಾಂಗ್…

ಪ್ರಕಾಶ್ ಹುಕ್ಕೇರಿ ಹೇಳಿಕೆಗೆ ಕವಟಗಿಮಠ ಟಾಂಗ್…

ಬೆಳಗಾವಿ-ಸುರೇಶ್ ಅಂಗಡಿ ಅವರ ಕುಟುಂಬದವರಿಗೆ ಟಿಕೆಟ್ ಕೊಟ್ರೆ ,ನನ್ನ ಮಗನನ್ನು ಗೆಲ್ಲಿಸಿದ ಹಾಗೆ,ಅವರನ್ನೂ ಗೆಲ್ಲಿಸುತ್ತೇನೆ ಎಂದು ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಅವರು ನೀಡಿರುವ ಹೇಳಿಕೆಗೆ ವಿಧಾನ ಪರಿಷತ್ತಿನ ಮುಖ್ಯ ಸಚೇತಕ ಮಹಾಂತೇಶ್ ಕವಡಗಿಮಠ ಟಾಂಗ್ ಕೊಟ್ಟಿದ್ದಾರೆ.

ಚಿಕ್ಕೋಡಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು, ಪ್ರಕಾಶ್ ಹುಕ್ಕೇರಿ ಅವರು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ,ಕಾಂಗ್ರೆಸ್ ಪಕ್ಷದಿಂದ ಅವರು ಪಡೆದುಕೊಂಡಿರುವಷ್ಟು ಲಾಭವನ್ನು ಅಧಿಕಾರವನ್ನು ಬೇರೆ ಯಾರೂ ಪಡೆದುಕೊಂಡಿಲ್ಲ ಅವರು ಬಿಜೆಪಿ ಬಗ್ಗೆ ಮಾತನಾಡುವದು ಸಮಂಜಸವಲ್ಲ,ಅವರಿಂದ ನಾವು ಪಾಠ ಕಲಿಯಬೇಕಾಗಿಲ್ಲ,ಎಂದು ಮಹಾಂತೇಶ್ ಕವಟಗಿಮಠ ಆಕ್ರೋಶ ವ್ಯೆಕ್ತ ಪಡಿಸಿದ್ದಾರೆ.

ಪ್ರಕಾಶ ಹುಕ್ಕೇರಿ ಅವರು ಸುರೇಶ ಅಂಗಡಿ ಅವರ ಕುಟುಂಬದ ಬಗ್ಗೆ ಕಳಕಳಿ ವ್ಯೆಕ್ತ ಪಡಿಸಿರುವದನ್ನು ನಾನು ಸ್ವಾಗತ ಮಾಡುತ್ತೇನೆ, ಯಾರಿಗೆ ಟಿಕೆಟ್ ಕೊಡಬೇಕು ಅನ್ನೋದನ್ನು ನಮ್ಮ ಪಕ್ಷದ ನಾಯಕರು ತೀರ್ಮಾಣ ಮಾಡುತ್ತಾರೆ.ನಮ್ಮ ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ಪ್ರಕಾಶ್ ಹುಕ್ಕೇರಿ ಅವರು ಕಾಂಗ್ರೆಸ್ ನಲ್ಲಿ ಇದ್ದುಕೊಂಡು ಮಾತನಾಡುವದು ಸರಿಯಲ್ಲ ಅಂದ್ರು ಮಹಾಂತೇಶ ಕವಟಗಿಮಠ

ಪ್ರಕಾಶ್ ಹುಕ್ಕೇರಿ ಅವರು ಬಿಜೆಪಿ ಗೆ ಬಂದ್ರೆ ಸ್ವಾಗತ ಮಾಡ್ತೀರಾ ಎಂದು ಮಾದ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಬಿಜೆಪಿಗೆ ಬರಲು ಬಹಳಷ್ಟು ಜನರು ಕ್ಯುನಲ್ಲಿ ನಿಂತಿದ್ದಾರೆ ಎಂದು ಮಹಾಂತೇಶ ಕವಟಗಿಮಠ ಹೇಳಿದರು.

Check Also

ಮೇ 2 ರಂದು ಏಕನಾಥ, 3 ರಂದು ಅಮೀತ್ ಶಾ ಬೆಳಗಾವಿಗೆ….

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆ ರಂಗೇರಿದೆ, ಮತಬೇಟೆಗಾಗಿ ಮೇ 2 ರಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ, ಮೇ …

Leave a Reply

Your email address will not be published. Required fields are marked *