Breaking News
Home / Breaking News / ಬೆಳಗಾವಿ ಗ್ರಾಮೀಣದಲ್ಲಿ ಇಂದು ಫುಲ್ ಡೇ ಪಾಲಿಟೀಕ್ಸ್..!!!

ಬೆಳಗಾವಿ ಗ್ರಾಮೀಣದಲ್ಲಿ ಇಂದು ಫುಲ್ ಡೇ ಪಾಲಿಟೀಕ್ಸ್..!!!

ಬೆಳಗಾವಿ- ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಇಂದು ಫುಲ್ ಡೇ ಪಾಲಿಟೀಕ್ಸ್ ನಡೆಯಿತು .ಯಾಕಂದ್ರೆ ಈ ಕ್ಷೇತ್ರದಲ್ಲಿ ಬಿಜೆಪಿ ತನ್ನ ಭದ್ರಕೋಟೆ ನಿರ್ಮಿಸಲು ಶಂಕುಸ್ಥಾಪನೆ ನೆರವೇರಿಸಿತು…

ಬೆಳಗಾವಿ ಜಾಂಬೋಟಿ ರಸ್ತೆಯಲ್ಲಿರುವ ಗಣೇಶ್ ಬಾಗ್ ನಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಆಯ್ಕೆಯಾದ ಗ್ರಾಮ ಪಂಚಾಯತಿ ಸದಸ್ಯರಿಗೆ ಬಿಜೆಪಿ ಮುಖಂಡರು ಸ್ನೇಹ ಭೋಜನಕೂಟ ಏರ್ಪಡಿಸಿ ನೂತನ ಸದಸ್ಯರಿಗೆ ಸತ್ಕಾರವನ್ನು ಮಾಡುವ ಮೂಲಕ ಈ ಕ್ಷೇತ್ರದಲ್ಲಿ ಬಿಜೆಪಿ ಭದ್ರಕೋಟೆ ನಿರ್ಮಿಸಲು ಇಂದು ಬುನಾದಿ ಹಾಕಿದಂತಾಯಿತು.

ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಅವರು,ಬೆಳಗಾವಿ ಗ್ರಾಮೀಣ ಕ್ಷೇತ್ರ,ಮತ್ತು ಗೋಕಾಕ ಕ್ಷೇತ್ರ ನನ್ನ ಎರಡು ಕಣ್ಣುಗಳಿದ್ದಂತೆ,ಎಂದು ಹೇಳಿದರು.ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಯಾರಿಗಾದರೂ ಸಿಗಲಿ ಎಲ್ಲರೂ ಒಗ್ಗಟ್ಟಾಗಿ ಪಕ್ಷದ ಗೆಲುವಿಗೆ ದುಡಿಯುತ್ತೇವೆ ಎಂದು ಜ್ಯೋತಿಬಾ ಮೇಲೆ ಪ್ರಮಾಣ ಮಾಡಬೇಕು,ಎಂದು ಹೇಳುವ ಮೂಲಕ ರಮೇಶ್ ಜಾರಕಿಹೊಳಿ ಇಂದು ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಒಗ್ಗಟ್ಟಿನ ಮಂತ್ರ ಜಪಿಸಿದರು..

ಕಳೆದ ಬಾರಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿ ಸೋಲಿಗೆ ನಾನೇ ಕಾರಣವಾಗದ್ದೆ, ಕಳೆದ ಬಾರಿ ಸೋಲಿನ ಕಾರಣ ಸರಿ ಪಡಿಸೋಣ, ಜಿಲ್ಲೆಯ 18 ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಸಂಕಲ್ಪ ನನ್ನದಾಗಿದೆ ಎಂದರು.

ಗ್ರಾಮೀಣ ಕ್ಷೇತ್ರದಲ್ಲಿ ಟಿಕೇಟ್ ಆಕಾಂಕ್ಷಿಗಳು ಹೆಚ್ಚಿದ್ದಾರೆ. ಟಿಕೇಟ್ ಯಾರಿಗೆ ಕೊಟ್ರು ಎಲ್ಲರು ಒಗ್ಗಟಾಗಿ ದುಡಿಯೋಣ, ಕೊಲ್ಲಾಪುರ ಜೋತಿಬಾ ದೇವಿ ಮುಟ್ಟಿ ಪ್ರಮಾಣ ಮಾಡಬೇಕು ಒಂದಾಗಿ ದುಡಿಯುತ್ತೆವೆ ಎಂದು ರಮೇಶ್ ಜಾರಕಿಹೊಳಿ ಹೇಳಿದರು.

Check Also

ಮೇ 2 ರಂದು ಏಕನಾಥ, 3 ರಂದು ಅಮೀತ್ ಶಾ ಬೆಳಗಾವಿಗೆ….

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆ ರಂಗೇರಿದೆ, ಮತಬೇಟೆಗಾಗಿ ಮೇ 2 ರಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ, ಮೇ …

Leave a Reply

Your email address will not be published. Required fields are marked *