Breaking News
Home / Breaking News / ಮತ್ತೆ ಸುದ್ದಿಯಾದ್ರು,ಬೆಳಗಾವಿಯ ಲಕ್ಷ್ಮಣ ಸವದಿ….!!

ಮತ್ತೆ ಸುದ್ದಿಯಾದ್ರು,ಬೆಳಗಾವಿಯ ಲಕ್ಷ್ಮಣ ಸವದಿ….!!

ಬೆಳಗಾವಿ- ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ ಸಿಂಗ್ ಅವರು ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ಬಿಜೆಪಿಯಿಂದ ಆಯ್ಕೆ ಆಗುವ ನಾಲ್ಕು ಜನ ಅಭ್ಯರ್ಥಿಗಳ ಪಟ್ಟಿಗೆ ಸಹಿ ಹಾಕಿದ್ದು ಈ ಪಟ್ಟಿಯಲ್ಲಿ ಮಾಜಿ ಸಿಎಂ ಬೆಳಗಾವಿಯ ಹಿರಿಯ ಬಿಜೆಪಿ ನಾಯಕ ಲಕ್ಷ್ಮಣ ಸವದಿ ಅವರ ಹೆಸರು ಇದೆ.

ಲಕ್ಷ್ಮಣ ಸವದಿ ಅವರು ಅಥಣಿ ವಿಧಾಸಭಾ ಕ್ಷೇತ್ರದಿಂದ ಸ್ಪರ್ದೆ ಮಾಡುತ್ತಾರೆ.ಹಾಲಿ ಶಾಸಕ ಮಹೇಶ್ ಕುಮಟೊಳ್ಳಿ ಅವರಿಗೆ ಬಾರಿ ಬಿಜೆಪಿ ಟಿಕೆಟ್ ಸಿಗೋದಿಲ್ಲ,ಎನ್ನುವ ಸುದ್ದಿ ಹರದಾಡಿತ್ತು.ಆದ್ರೆ ಇವತ್ತು ಬಿಡುಗಡೆ ಆಗಿರುವ ಬಿಜೆಪಿ ಪಟ್ಟಿ ಅಥಣಿ ವಿಧಾಸಭಾ ಕ್ಷೇತ್ರದಲ್ಲಿ ಎದುರಾಗಿದ್ದ ಹಲವಾರು ಪ್ರಶ್ನೆಗಳಿಗೆ ಉತ್ತರ ನೀಡಿದೆ.

ಲಕ್ಷ್ಮಣ ಸವದಿ ಅವರು ಇವತ್ತು ಬೆಂಗಳೂರಿನಲ್ಲಿ ,ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ‌‌.

Check Also

ಚಿಕ್ಕೋಡಿ ಕ್ಷೇತ್ರದಲ್ಲಿ ಕಾಂಗ್ರೆಸ್ಸಿಗೆ ಉತ್ತಮ ಬೆಂಬಲ…!

ಚಿಕ್ಕೋಡಿ- ಚಿಕ್ಕೋಡಿ ಕ್ಷೇತ್ರದಲ್ಲಿ ಮಹತ್ವದ ಬೆಳವಣಿಗೆ ಆಗಿದೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅತ್ಯಲ್ಪ ಮತಗಳಿಂದ ಪರಾಭವಗೊಂಡಿದ್ದ NCP ಅಭ್ಯರ್ಥಿ ಉತ್ತಮ್ …

Leave a Reply

Your email address will not be published. Required fields are marked *