Breaking News
Home / Breaking News / ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಕಡಾಡಿ ಕಾರಿಗೆ ಘೇರಾವ್….

ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಕಡಾಡಿ ಕಾರಿಗೆ ಘೇರಾವ್….

ಬೆಳಗಾವಿ-ಹಿಂದುಳಿದ ವರ್ಗದ ನಾಯಕ,ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಯಾವುದೇ ತಪ್ಪು ಮಾಡಿಲ್ಲ, ಬಿಜೆಪಿ ನಾಯಕರು ಉದ್ದೇಶಪೂರ್ವಕವಾಗಿ,ರಾಜಕೀಯ ಲಾಭಕ್ಕಾಗಿ ಸತೀಶ್ ಜಾರಕಿಹೊಳಿ ಅವರನ್ನು ಹಿಂದೂ ವಿರೋಧಿ ಎಂದು ಬಿಂಬಿಸಿದ್ದಾರೆ ಎಂದು ಆರೋಪಿಸಿ ಇಂದು ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಅವರ ಕಾರಿಗೆ ಘೇರಾವ್ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸತೀಶ್ ಜಾರಕಿಹೊಳಿ ಅವರನ್ಬು ಬೆಂಬಲಿಸಿ ಘಟಪ್ರಭಾದಲ್ಲಿ ವಿವಿಧ ದಲಿತಪರ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು
*ಪ್ರತಿಭಟನೆ ವೇಳೆ ಬಿಜೆಪಿ ರಾಜ್ಯ ಸಭಾ ಸದಸ್ಯ ಈರಣ್ಣಾ ಕಡಾಡಿ ಕಾರಿಗೆ ಮುತ್ತಿಗೆ‌ ಹಾಕಿರುವ ಸತೀಶ್ ಜಾರಕಿಹೊಳಿ ಬೆಂಬಲಿಗರು. ಕಡಾಡಿ ಕಾರಿಗೆ ಘೇರಾವ್ ಹಾಕಿ ಆಕ್ರೋಶ ಹೊರಹಾಕಿದ್ದಾರೆ.

ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಘಟಪ್ರಭಾ ಪಟ್ಟಣದಲ್ಲಿ ಈ ಘಟನೆ ನಡೆದಿದೆ.
ಇಂದು ಸಂಜೆ ದಲಿತಪರ ಸಂಘಟನೆಗಳು ಸತೀಶ್ ಬೆಂಬಲಿಸಿ ಮೃತ್ಯುಂಜಯ ವೃತ್ತದಲ್ಲಿ ಪ್ರತಿಭಟನೆ ನಡೆಸಿದ್ದರು.
ಮಲ್ಲಾಪುರ ಗ್ರಾಮದಿಂದ ಕಲ್ಲೋಳ ಗ್ರಾಮಕ್ಕೆ ಹೊರಟ್ಟಿದ್ದ ಈರಣ್ಣಾ ಕಡಾಡಿ ಕಾರು ಗಮನಿಸಿದ ಪ್ರತಿಭಟನಾಕಾರರು
ಈ ವೇಳೆ ಘಟಪ್ರಭಾದಲ್ಲಿ ಈರಣ್ಣಾ ಕಡಾಡಿ ಕಾರಿಗೆ ಮುತ್ತಿಗೆ ಹಾಕಿ ಆಕ್ರೋಶ.ವ್ಯಕ್ತಪಡಿಸಿದ್ದಾರೆ.

ಸತೀಶ್ ಜಾರಕಿಹೊಳಿ ಪರ ಘೋಷಣೆ ಕೂಗಿ ದಲಿತಪರ ಸಂಘಟನೆ ಕಾರ್ಯಕರ್ತರು. ಈರಣ್ಣಾ ಕಡಾಡಿ ಅವರ ಕಾರಿಗೆ ಘೇರಾವ್ ಹಾಕುತ್ತಿದ್ದಂತೆಯೇ
ಕೂಡಲೇ ಮಧ್ಯಸ್ಥಿಕೆ ವಹಿಸಿ ಪ್ರತಿಭಟನಾಕಾರರನ್ನ ಚದುರಿಸಿದ ಪೋಲೀಸರು ಕಡಾಡಿ ಅವರ ಕಾರನ್ನು ಕಳುಹಿಸಿದ್ದಾರೆ.

Check Also

ದ ಮೇಕರ್ ಆಫ್ ನ್ಯೂ ಇಂಡಿಯಾ ಪುಸ್ತಕ ರೆಡಿ ಮಾಡಿದವರು ಯಾರು ಗೊತ್ತಾ..??

ಪ್ರಾಮಿಸ್ಡ್ ನೇಷನ್’ ಪ್ರಧಾನಿಗೆ ಅರ್ಪಣೆ * ಹುಬ್ಬಳ್ಳಿಯ ‘ಸೆನ್ಸ್ ಎಸೆನ್ಸ್’ ಸಂಸ್ಥೆಯಿಂದ ಅಂಧರಿಗಾಗಿ ಸಿದ್ಧಪಡಿಸಿದ ಪುಸ್ತಕ ಬೆಂಗಳೂರು ದೇಶದ ಏಳು …

Leave a Reply

Your email address will not be published. Required fields are marked *