Home / Breaking News / ಪ್ರಪಾತಕ್ಕೆ ಬಿದ್ದರೂ ಪ್ರಾಣಾಪಾಯದಿಂದ ಪಾರು….!!!

ಪ್ರಪಾತಕ್ಕೆ ಬಿದ್ದರೂ ಪ್ರಾಣಾಪಾಯದಿಂದ ಪಾರು….!!!

ಬೆಳಗಾವಿ- ಅದೃಷ್ಟ ಅಂದ್ರೆ ಏನು ? ಅದು ಹೇಗಿರುತ್ತೆ ಅನ್ನೋದಕ್ಕೆ ಈ ಘಟನೆಯೇ ಅದಕ್ಕೆ ಸಾಕ್ಷಿ.ಬೈಕ್ ಸಮೇತ 100ಅಡಿ ಪ್ರಪಾತಕ್ಕೆ ಬಿದ್ದಿದ್ದ ಯುವಕ ಕೊನೆಗೂ ಪ್ರಾಣಾಪಾಯದಿಂದ ಪಾರಾದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ಚಿಕಲೆ ಫಾಲ್ಸ್ ಬಳಿ ಈ ಘಟನೆ ನಡೆದಿದೆ.ಖಾನಾಪುರ ಗೋವಾ ಗಡಿ ಭಾಗದಲ್ಲಿರುವ ಪ್ರಸಿದ್ಧ ಚಿಕಲೆ ಫಾಲ್ಸ್ ನೋಡಲು ದಿನನಿತ್ಯ ಸಾವಿರಾರು ಪ್ರವಾಸಿಗರು ಹೋಗ್ತಾರೆ,ಸ್ನೇಹಿತರ ಜತೆಗೆ ಚಿಕಲೆ ಫಾಲ್ಸ್ ನೋಡಲು ಹೋದಾಗ,ಬೆಳಗಾವಿ ಕ್ಯಾಂಪ್ ಪ್ರದೇಶದ ನಿವಾಸಿ ವಿನಾಯಕ ಬುತ್ತುಲ್ಕರ್ (26) ಎಂಬಾತ ಬೈಕ್ ಸಮೇತ, ಪ್ರಪಾತಕ್ಕೆ ಬಿದ್ದಿದ್ದ,ಬೈಕ್ ಮೇಲೆ ಹೋಗುವಾಗ ಆಯತಪ್ಪಿ 100ಅಡಿ ಪ್ರಪಾತಕ್ಕೆ ಬಿದ್ದಿದ್ದ ವಿನಾಯಕ ಕೊನೆಗೂ ಪ್ರಾಣಾಪಾಯದಿಂದ ಪಾರಾಗಿ ಬದುಕುಳಿದಿದ್ದು ಪವಾಡವೇ ಸರಿ,

ಮುಖ, ಕಾಲಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅದೃಷ್ಟವಶಾತ್ ವಿನಾಯಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.ಈ ವೇಳೆ ಪೊಲೀಸರಿಗೆ ಮಾಹಿತಿ ನೀಡಿದ್ದ ಸ್ನೇಹಿತರು,ಖಾನಾಪುರ ಸಿಪಿಐ ರಾಮಚಂದ್ರ ನಾಯಕ ನೇತೃತ್ವದಲ್ಲಿ ಯುವಕನ ರಕ್ಷಣೆ ಕಾರ್ಯಾಚರಣೆ ನಡೆದಿತ್ತು,ಜಾಂಬೋಟಿ ಉಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೋಲೀಸರು ಪ್ರಪಾತಕ್ಕೆ ಬಿದ್ದ ಯುವಕನ ರಕ್ಷಣೆ ಮಾಡಿದ್ದಾರೆ.

Check Also

ಒಂದು ಟೇಬಲ್ ಎರಡು ಖರ್ಚಿಗೆ ಮಾತ್ರ ಅವಕಾಶ….!!

ಲೋಕಸಭಾ ಚುನಾವಣೆ: ಬಿಗಿ ಬಂದೋಬಸ್ತ್ ಸುಗಮ-ಶಾಂತಿಯುತ ಮತದಾನಕ್ಕೆ ಸಕಲ ಸಿದ್ದತೆ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಬೆಳಗಾವಿ, -: ಲೋಕಸಭಾ ಚುನಾವಣೆ …

Leave a Reply

Your email address will not be published. Required fields are marked *