Breaking News
Home / Breaking News / ಹೆಬ್ಬಾಳಕರ ಜನ್ಮದಿನದ ನಿಮಿತ್ಯ ನೂರಾರು ಯುವಕರಿಂದ ರಕ್ತದಾನ

ಹೆಬ್ಬಾಳಕರ ಜನ್ಮದಿನದ ನಿಮಿತ್ಯ ನೂರಾರು ಯುವಕರಿಂದ ರಕ್ತದಾನ

ಬೆಳಗಾವಿ- ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳಕರ ಅವರ ಜನ್ಮದಿನಾಚರಣೆ ನಿಮಿತ್ಯ ನೂರಾರು ಯುವಕರು ರಕ್ತದಾನ ಮಾಡುವ ಮೂಲಕ ವಿಶಿಷ್ಟವಾಗಿ ಜನ್ಮದಿನಾಚರಣೆಯನ್ನು ಆಚರಿಸಿದರು

ಕುವೆಂಪು ನಗರದಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ಲಕ್ಷ್ಮೀ ತಾಯಿ ಯುವಪಡೆಯ ಯುವಕರು ಮತ್ತು ಲಕ್ಷ್ಮಿ ಹೆಬ್ಬಾಳಕರ ಅವರ ಅಭಿಮಾನಿಗಳು ರಕ್ತದಾನ ಮಾಡಿ ಎಲ್ಲರ ಗಮನ ಸೆಳೆದರು

ಲಕ್ಷ್ಮೀ ಹೆಬ್ಬಾಳಕರ ಅವರ ಪುತ್ರ ಮೃನಾಲ ಮೊದಲಿಗರಾಗಿ ರಕ್ತದಾನ ಮಾಡುವ ಮೂಲಕ ರಕ್ತದಾನ ಶಿಬಿರ ಕ್ಕೆ ಚಾಲನೆ ನೀಡಿದರು
ಈ ಸಂಧರ್ಭದಲ್ಲಿ ಮಾತನಾಡಿದ ಲಕ್ಷ್ಮೀ ಹೆಬ್ಬಾಳಕರ ದೇಶದ ಯುವಕರು ಸದೃಢ ರಾದರೆ ದೇಶ ಸದೃಢ ವಾಗುತ್ತದೆ ರಕ್ತದಾನ ಶ್ರೇಷ್ಠ ದಾನವಾಗಿದ್ದು ಯುವಕರು ರಕ್ತದಾನ ಮಾಡುವ ಮೂಲಕ ಇನ್ನೊಬ್ಬರ ಜೀವದ ಉಳಿವಿಗೆ ಸಹಾಯಮಾಡಿದ್ದಾರೆ ಇಂತಹ ಮನೋಭಾವ ಎಲ್ಲರಿಗೂ ಮಾದರಿಯಾಗಿದೆ ಎಂದರು

ತಾವು ಯಾವತ್ತೂ ಜನ್ಮದಿನ ಆಚರಿಸಿಕೊಂಡಿರಲಿಲ್ಲ ಅಭಿಮಾನಿಗಳು ಈ ವರ್ಷ ಜನ್ಮದಿನವನ್ನು ವಿಶಿಷ್ಟವಾಗಿ ಆಚರಿಸಿ ರಕ್ತದಾನ ಮಾಡಿ ರೋಗಿಗಳಿಗೆ ಹಣ್ಣುಹಂಪಲ ವಿತರಿಸಿದ್ದಾರೆ ಅಭಿಮಾನಿಗಳ ಈ ರೀತಿಯ ಅಭಿಮಾನಕ್ಕೆ ನಾನೆಂದಿಗೂ ಕೃತಜ್ಞಳಾಗಿದ್ದೇನೆ ಎಂದು ಹೆಬ್ಬಾಳಕರ ಹೇಳಿದರು

ಜಿಲ್ಲಾ ಕಾಂಗ್ರೆಸ್ ಅದ್ಯಕ್ಷ ವಿನಯ ನಾವಲಗಟ್ಟಿ ಸಿಸಿ ಪಾಟೀಲ ಬೆಳಗಾವಿ ಗ್ರಾಮೀಣ ಕ್ಷೇತ್ರದ ಯುಥ್ ಕಾಂಗ್ರೆಸ್ ಅಧ್ಯಕ್ಷ ತೌಸೀಫ್ ಫನಿಬಂದ ಸೇರಿದಂತೆ ಹಲವಾರು ಜನ ಮುಖಂಡರು ಉಪಸ್ಥಿತರಿದ್ದರು

Check Also

ಚಿಕ್ಕೋಡಿ ಕ್ಷೇತ್ರದಲ್ಲಿ ಕಾಂಗ್ರೆಸ್ಸಿಗೆ ಉತ್ತಮ ಬೆಂಬಲ…!

ಚಿಕ್ಕೋಡಿ- ಚಿಕ್ಕೋಡಿ ಕ್ಷೇತ್ರದಲ್ಲಿ ಮಹತ್ವದ ಬೆಳವಣಿಗೆ ಆಗಿದೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅತ್ಯಲ್ಪ ಮತಗಳಿಂದ ಪರಾಭವಗೊಂಡಿದ್ದ NCP ಅಭ್ಯರ್ಥಿ ಉತ್ತಮ್ …

Leave a Reply

Your email address will not be published. Required fields are marked *