ಮಹಿಳೆಗೆ ಎಳೆದಾಡಿದ ಘಟನೆ,ಕೆಟ್ಟ ಸಂಪ್ರದಾಯ…

ಗೋಕಾಕ: ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿಯ ಮಹಾಲಿಂಗಪುರ ಪುರಸಭೆಗೆ ಸಂಬಂಧಿಸಿದಂತೆ ನಡೆದ ಘಟನೆಯು ಒಂದು ಕೆಟ್ಟ ಸಂಪ್ರದಾಯವಾಗಿದೆ. ಅಧ್ಯಕ್ಷೆ ಆಕಾಂಕ್ಷಿಯಾಗಿರುವ ಮಹಿಳೆಯನ್ನು ಎಳೆದಾಡಿ ಬಿಜೆಪಿ ಶಾಸಕ ಸಿದ್ದು ಸವದಿ ಸೇರಿದಂತೆ ಇತರರು ಅಸಭ್ಯ ವರ್ತನೆ ತೋರಿರುವುದು ಒಂದು ಕೆಟ್ಟ ಸಂಪ್ರದಾಯಾವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಿಕಿಹೊಳಿ ಹೇಳಿದ್ದಾರೆ.

ನಗರದ ಅವರ ಹೀಲ್ ಗಾರ್ಡನ್ ಕಛೇರಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜವಾಬ್ದಾರಿಯುತ ಸ್ಥಾನದಲ್ಲಿರುವವರು ಈ ರೀತಿ ಮಹಿಳೆಯರ ಜೊತೆ ಅಸಭ್ಯವಾಗಿ ನಡೆದುಕೊಳ್ಳುವುದನ್ನು ನಾವು ಖಂಡಿಸುತ್ತೇವೆ. ಈ ಸಂಬಂಧ ನಮ್ಮ ಪಕ್ಷ ಪ್ರತಿಭಟನೆ ನಡೆಸಲಿದೆ.

ಕೂಡಲೇ ಈ ಘಟನೆಗೆ ಸಂಬಂಧಿಸಿದಂತೆ ಅಸಭ್ಯವಾಗಿ ನಡೆದುಕೊಂಡ ಎಲ್ಲಾರ ಮೇಲೂ ಪೊಲೀಸರು ಹಾಗೂ ಸರಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

Check Also

ರೇಖಾ ಗುಪ್ತಾ ದೆಹಲಿ ಸಿಎಂ ಇಂದು ಪ್ರಮಾಣ ವಚನ

ಬೆಳಗಾವಿ- ಬಿಜೆಪಿ ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತನಿಗೂ ಉನ್ನತ ಸ್ಥಾನ ಕೊಡುತ್ತಾರೆ ಎನ್ನುವ ವಿಚಾರ ಈಗ ಮತ್ತೊಮ್ಮೆ ಸಾಭೀತಾಗಿದೆ. ಪ್ರಥಮ ಬಾರಿಗೆ …

Leave a Reply

Your email address will not be published. Required fields are marked *