ಬೆಳಗಾವಿಯಿಂದ ಬೆಂಗಳೂರಿಗೆ ಆಯುಷ್ ಔಷಧಿ ಕೇಂದ್ರ ಹೈಜಾಕ್ ……

ಬೆಳಗಾವಿ- ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಉತ್ತರ ಕರ್ನಾಟಕಕ್ಕೆ ಅನ್ಯಾಯ ಮುಂದಯವರೆದಿದೆ ಬೆಳಗಾವಿಯಿಂದ ಹಾಸನಕ್ಜೆ ಕೆಶಿಪ್ ಕಚೇರಿ ಸ್ಥಳಾಂತರ ಮಾಡಿದ ಬೆನ್ನಲ್ಲಿಯೇ ಬೆಳಗಾವಿಗೆ ಮಂಜೂರಾಗಿದ್ದ ಆಯುಷ್ ಔಷಧಿ ತಯಾರಿಕಾ ಘಟಕವನ್ನು ಬೆಂಗಳೂರಿಗೆ ಸ್ಥಳಾಂತರಿಸಿ ಉತ್ತರ ಕರ್ನಾಟಕಕ್ಕೆ ಘೋರ ಅನ್ಯಾಯ ಮಾಡಿದ್ದಾರೆ ಎಂದು ಶಾಸಕ ಅಭಯ ಪಾಟೀಲ ಆರೋಪಿಸಿದ್ದಾರೆ

ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಸರ್ಕಾರಕ್ಕೆ ಉತ್ತರ ಕರ್ನಾಟಕದ ಬಗ್ಗೆ ಕಾಳಜಿ ಇಲ್ಲ ಬೆಳಗಾವಿಯನ್ನು ರಾಜ್ಯದ ಎರಡನೇಯ ರಾಜಧಾನಿಯಾಗಿ ಘೋಷಣೆ ಮಾಡುವದಾಗಿ ಹೇಳಿ ಈಗ ಕಚೇರಿಗಳನ್ನು ಬೆಳಗಾವಿಯಿಂದ ಹೈಜಾಕ್ ಮಾಡುತ್ತಿದೆ ಎಂದು ಅಭಯ ಪಾಟೀಲ ಸರ್ಕಾರದ ಮಲತಾಯಿ ಧೋರಣೆ ವಿರುದ್ಧ ಕಿಡಿಕಾರಿದ್ದಾರೆ

ಹಿಂದಿನ ಕಾಂಗ್ರೆಸ್ ಸರ್ಕಾರ ಬೆಳಗಾವಿಯ ವ್ಯಾಕ್ಸೀನ್ ಡಿಪೋದಲ್ಲಿ ಆಯುಷ್ ಔಷಧಿ ತಯಾರಿಕಾ ಘಟಕ ಸ್ಥಾಪಿಸಲು ಅನುದಾನ ಬಿಡುಗಡೆ ಮಾಡಿತ್ತು ಆದರೆ ಅರೋಗ್ಯ ಇಲಾಖೆಯ ಅಧಿಕಾರಿಗಳು ತುರ್ತು ಸಭೆ ನಡೆಸಿ ಆಯುಷ್ ಔಷಧಿ ತಯಾರಿಕಾ ಕೇಂದ್ರವನ್ನು ಬೆಂಗಳೂರಿಗೆ ಸ್ಥಳಾಂತರಿಸುವ ನಿರ್ಣಯ ಕೈಗೊಂಡು ಆದೇಶ ಹೊರಡಿಸಿದ್ದಾರೆ ಸರ್ಕಾರ ಕೂಡಲೇ ಆದೇಶ ರದ್ದು ಪಡಿಸುವಂತೆ ಶಾಸಕ ಅಭಯ ಪಾಟೀಲ ಒತ್ತಾಯಿಸಿದ್ದಾರೆ

ಬೆಳಗಾವಿ ನಗರದ ಉದ್ಯಮಬಾಗ ಠಾಣೆಯ ವ್ಯಾಪ್ತಿಯಲ್ಲಿ ಮಟಕಾ ದಂಧೆ,ಗಾಂಜಾ ಮಾರಾಟ ಅವ್ಯಾಹತವಾಗಿ ನಡೆಯುತ್ತಿದೆ ಇಲ್ಲಿಯ ಬಾರ್ ಗಳು ಮದ್ಯರಾತ್ರಿ ಮೂರು ಘಂಟೆಯವರೆಗೆ ನಡೆಯುತ್ತಿವೆ ಈ ಬಗ್ಗೆ ನಗರ ಪೋಲೀಸ್ ಆಯುಕ್ತರ ಗಮನಕ್ಕೆ ತಂದರೂ ಕ್ರಮ ಜರುಗಿಸಿಲ್ಲ ಈ ಕುರಿತು ಪೋಲೀಸ್ ಮಹಾ ನಿರ್ದೇಶಕರಿಗೆ ಗೃಹ ಸಚಿವರಿಗೆ ದೂರು ನೀಡಲಾಗುವದು ಎಂದು ಅಭಯ ಪಾಟೀಲ ತಿಳಿಸಿದ್ದಾರೆ

Check Also

ಅನಾಹುತ ಮಳೆಗೆ ಗೋಡೆ ಕುಸಿದು ಮಹಿಳೆ ಸಾವು

ಗೋಕಾಕ: ಗೋಕಾಕದ ಸಂಗಮ ನಗರದ ಫರೀದಾ ಎಂಬ ಮಹಿಳೆ ಗೋಡೆ ಕುಸಿದ ಪರಿಣಾಮ ಮೃತಪಟ್ಟಿದ್ದಾರೆ. ಇವರು ತಮ್ಮ ಮಗ ರಿಯಾಜ್ …

Leave a Reply

Your email address will not be published. Required fields are marked *