Breaking News

ಶಹಾಪೂರ ಗಲಾಟೆ ,ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಠಾಣೆಗೆ ಮುತ್ತಿಗೆ

ಬೆಳಗಾವಿ- ನಿನ್ನೆ ರಾತ್ರಿ ಬೆಳಗಾವಿ ನಗರದ ಶಹಾಪೂರ ಪ್ರದೇಶದ ಅಲವನ್ ಗಲ್ಲಿಯಲ್ಲಿ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಮಂಧಿಸಿದಂತೆ ಕೂಡಲೇ ಘಟನೆಗೆ ಕಾರಣರಾದ ಕಿಡಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿ ನೂರಾರು ಜನ ಮಹಿಳೆಯರು ಮಾಜಿ ಶಾಸಕ ಅಭಯ ಪಾಟೀಲ ನೇತ್ರತ್ವದಲ್ಲಿ ಶಹಾಪೂರ ಪೋಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದಾರೆ

ನಿನ್ನೆ ರಾತ್ರಿ ಅಲವನ್ ಗಲ್ಲಿಯಲ್ಲಿ ಯುವಕರ ಗುಂಪು ಕಲ್ಲು ತೂರಾಟ ನಡೆಸಿ ಶಾಂತಿ ಭಂಗ ಮಾಡಿ ಸಾರ್ವಜನಿಕರ ಆಸ್ತಿ ಪಾಸ್ತಿಗಳನ್ನು ನಾಶ ಮಾಡಿ ಪುಂಡಾಟಿಕೆ ಪ್ರದರ್ಶಿಸಿದರೂ ಶಹಾಪೂರ ಪೋಲೀಸರು ಇನ್ನುವರೆಗೆ ಆರೋಪಿಗಳನ್ನು ಬಂಧಿಸಿಲ್ಲ ಎಂದು ಆರೋಪಿಸಿ ಈ ಪ್ರದೇಶದ ನೂರಾರು ಮಹಿಳೆಯರು ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುತ್ತಿದ್ದಾರೆ
ಮುತ್ತಿಗೆ ಹಾಕಿ ಘಂಟೆಗಳೇ ಕಳಿದಿದ್ದು ಅಹವಾಲು ಸ್ವೀಕರಿಸಲು ಸ್ಥಳಕ್ಕೆ ಹಿರಿಯ ಪೋಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸದ ಕಾರಣ ಆಕ್ರೋಶ ವ್ಯೆಕ್ತ ಪಡಿಸಿರುವ ಪ್ರತಿಭಟನಾ ಕಾರರು ಪೋಲೀಸ್ ಠಾಣೆಗೆ ಬೀಗ ಜಡಿಯಲು ಮುಂದಾಗಿದ್ದಾರೆ

Check Also

ನಿರಂತರ ಮಳೆ,ಬೆಳಗಾವಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ

ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಚಿವ ಸತೀಶ್‌ ಜಾರಕಿಹೊಳಿ ಮನವಿ ಬೆಳಗಾವಿ: ಭಾರತ ಹವಾಮಾನ ಇಲಾಖೆ ಆಗಸ್ಟ್ …

Leave a Reply

Your email address will not be published. Required fields are marked *