Breaking News

ಬೆಳಗಾವಿ ನಗರದಲ್ಲಿ ಬೈಕ್ ಮೇಲೆ ಮರ ಬಿದ್ದು ಯುವಕನ ಸಾವು…

ಬೆಳಗಾವಿ- ಬೆಳಗಾವಿಯಲ್ಲಿ ಸುರಿಯುತ್ತಿರುವ ವಿಪರೀತ ಮಳೆಗೆ ಇಂದು ಬೆಳಗ್ಗೆ ಮತ್ತೊಂದು ಜೀವ ಬಲಿಯಾಗಿದೆ.ಬೈಕ್ ಮೇಲೆ ಮರ ಬಿದ್ದು ಯುವಕನೊಬ್ಬ ಸ್ಥಳದಲ್ಲೇ ಮೃತ ಪಟ್ಟ ಘಟನೆ ನಗರದ ರಾಯಣ್ಣ ಸರ್ಕಲ್ ( RTO ) ಸರ್ಕಲ್ ಬಳಿ ನಡೆದಿದೆ.

ಇಬ್ಬರು ಯುವಕರು ರಾಯಣ್ಣ ಸರ್ಕಲ್ ನಿಂದ ಚನ್ನಮ್ಮ ಸರ್ಕಲ್ ಕಡೆಗೆ ಬೈಕ್ ಮೇಲೆ ಹೊರಟಿದ್ದರು ದೊಡ್ಡ ಮರ ಬೈಕ್ ಮೇಲೆ ಬಿದ್ದ ಪರಿಣಾಮ ಗೋಕಾಕ್ ತಾಲ್ಲೂಕಿನ ಸುಲದಾಳ ಗ್ರಾಮದ 25 ವರ್ಷದ ರಾಕೇಶ್ ಸುಲದಾಳ ಎಂಬ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದು,ಇ‌ನ್ನೋರ್ವ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ.

ಘಟನೆ ನಡೆಯುತ್ತಿದ್ದಂತೆಯೇ ಸ್ಥಳಕ್ಕೆ ಪೋಲೀಸರು ದೌಡಾಯಿಸಿ ಮರ ತೆರವುಗೊಳಿಸಿ ಸಂಚಾರ ಸುಗಮಗೊಳಿಸಿದ್ದಾರೆ.

ಬೆಳಗಾವಿ ನಗರದಲ್ಲಿ ಅತ್ಯಂತ ವಯಸ್ಸಾಗಿರುವ ಮರಗಳನ್ನು ಗುರುತಿಸಿ,ಬೀಳುವ ಹಂತದಲ್ಲಿರುವ ಮರಗಳನ್ನು ತೆಗೆಯಬೇಕು ಎನ್ನುವ ಬೇಡಿಕೆ ಪ್ರತಿ ವರ್ಷ ಮಳೆಗಾಲದಲ್ಲಿ ಇರುತ್ತದೆ. ಆದ್ರೆ ಅರಣ್ಯ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಪ್ರತಿ ವರ್ಷ ಅನೇಕ ಜನ ಬಲಿಯಾಗುವ ಪರಿಸ್ಥಿತಿ ಎದುರಾಗಿದೆ.

Check Also

ರಾತ್ರಿ ಮಠದಲ್ಲಿ ಲೇಡಿ……..ಗ್ರಾಮಸ್ಥರಿಂದ ಮುತ್ತಿಗೆ ಮಠದಿಂದ ಸ್ವಾಮೀಜಿ ಉಚ್ಛಾಟನೆ

ಮೂಡಲಗಿ : ತಾಲೂಕಿನ ಶಿವಾಪೂರ(ಹ) ಗ್ರಾಮದ ಅಡವಿ ಸಿದ್ದೇಶ್ವರ ಮಠದ ಅಡವಿಸಿದ್ದರಾಮ ಸ್ವಾಮೀಜಿಯ ಅಕ್ರಮ ಸಂಭಂದದ ಆರೋಪದ ಹಿನ್ನಲೆ ಇಡೀ …

Leave a Reply

Your email address will not be published. Required fields are marked *