Breaking News
Home / Breaking News / ಚಿಕ್ಕೋಡಿ ಚಿಂಚಣಿ ಸಿದ್ಧಪ್ರಭು ಸಂಸ್ಥಾನ ಮಠದ ಅಲ್ಲಮಪ್ರಭು ಶ್ರೀಗಳು ಲಿಂಗೈಕ್ಯ.

ಚಿಕ್ಕೋಡಿ ಚಿಂಚಣಿ ಸಿದ್ಧಪ್ರಭು ಸಂಸ್ಥಾನ ಮಠದ ಅಲ್ಲಮಪ್ರಭು ಶ್ರೀಗಳು ಲಿಂಗೈಕ್ಯ.

ಬೆಳಗಾವಿ- ಕನ್ನಡದ ಮಠ ಎಂದೇ ಪ್ರಸಿದ್ದಿ ಪಡೆದಿರುವ ಬೆಳಗಾವಿ ಜಿಲ್ಲೆಯ ಚಿಂಚಣಿ ಮಠದ ಅಲ್ಲಮಪ್ರಭು ಶ್ರೀಗಳು ಇಂದು ಬೆಳಗ್ಗೆ ಲಿಂಗೈಕ್ಯರಾಗಿದ್ದಾರೆ.

ಅನಾರೋಗ್ಯದಿಂದ ಚಿಂಚಣಿ ಶ್ರೀಗಳು ಇಂದು ಲಿಂಗೈಕ್ಯರಾಗಿದ್ದು,ಗಡಿಭಾಗದಲ್ಲಿ ಕನ್ನಡದ ಸ್ವಾಮೀಜಿ ಎಂದೇ ಖ್ಯಾತಿಯಾಗಿದ್ದ ಚಿಂಚಣಿ ಶ್ರೀಗಳು, ಹಲವಾರು ದಶಕಗಳಿಂದ ಹತ್ತು ಹಲವಾರು ಕನ್ನಡದ ಕಾರ್ಯಕ್ರಮಗಳನ್ನು ಮಾಡುವ ಮೂಲಕ ರಾಜ್ಯದ ಗಮನ ಸೆಳೆದಿದ್ದರು.

ಚಿಂಚಣಿಯ ಶ್ರೀ ಅಲ್ಲಮಪ್ರಭು ಮಹಾಸ್ವಾಮೀಜಿ ಅವರು ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಚಿಕಿತ್ಸೆ ಫಲಾಕಾರಿಯಾಗದೆ ಇಂದು ಬೆಳಗಿನ ಜಾವ ಸ್ವಾಮೀಜಿ ಲಿಂಗೈಕ್ಯರಾಗಿದ್ದಾರೆ.

ಕಿಡ್ನಿ ಸಂಬಂಧಿತ ಖಾಯಿಲೆಯಿಂದ ಬಳಲುತ್ತಿದ್ದ ಅಲ್ಲಮಪ್ರಭು ಸ್ವಾಮೀಜಿ.ಹಲವಾರು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು.ಸ್ವಾಮೀಜಿಗಳ ಅಗಲಿಕೆಯಿಂದ ಭಕ್ತರು ಶೋಕಸಾಗರದಲ್ಲಿ ಮುಳುಗಿದ್ದಾರೆ.ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಚಿಂಚಣಿ ಗ್ರಾಮದಲ್ಲಿ ಇರುವ ಚಿಂಚಣಿ ಸಿದ್ದಪ್ರಭು ಸಂಸ್ಥಾನ ಮಠ ಇದಾಗಿದೆ.

Check Also

ದ ಮೇಕರ್ ಆಫ್ ನ್ಯೂ ಇಂಡಿಯಾ ಪುಸ್ತಕ ರೆಡಿ ಮಾಡಿದವರು ಯಾರು ಗೊತ್ತಾ..??

ಪ್ರಾಮಿಸ್ಡ್ ನೇಷನ್’ ಪ್ರಧಾನಿಗೆ ಅರ್ಪಣೆ * ಹುಬ್ಬಳ್ಳಿಯ ‘ಸೆನ್ಸ್ ಎಸೆನ್ಸ್’ ಸಂಸ್ಥೆಯಿಂದ ಅಂಧರಿಗಾಗಿ ಸಿದ್ಧಪಡಿಸಿದ ಪುಸ್ತಕ ಬೆಂಗಳೂರು ದೇಶದ ಏಳು …

Leave a Reply

Your email address will not be published. Required fields are marked *