Breaking News

ಅಂಬೋಲಿ ಜಲಪಾತದ ಬಳಿ ಕಾರಿಗೆ ಬೆಂಕಿ ಸುಟ್ಟು ಭಸ್ಮವಾದ ಬೆಳಗಾವಿಯ ಮಹಿಳೆ ….

 

ಸಳಗಾವಿ- ಅಂಬೋಲಿ ಜಲಪಾತದದ ಬಳಿ ಕಾರು ಹೊತ್ತ ಉರಿದು ಕಾರಿನಲ್ಲಿದ್ದ ಮಹಿಳೆ ಸುಟ್ಟು ಭಸ್ಮವಾಗಿದ್ದು ಕಾರಿನ ಚಾಲಕ ಪಾರಾದ ಘಟನೆ ರಾತ್ರಿ 9 ಘಂಟೆ ನಡೆದಿದೆ

ಪೀರನವಾಡಿ ಗ್ರಾಮದ ದುಂಡಪ್ಪಾ ಪದ್ಮನ್ನವರ ಮತ್ತು ಅವರ ಪತ್ನಿ ಸಾವಂತವಾಡಿಯಿಂದ ಬೆಳಗಾವಿಗೆ ಬರುತ್ತಿರುವಾಗ ಈ ದುರಂತ ಸಂಭವಿಸಿದೆ

ಅಂಬೋಲಿ ಜಲಪಾತದದ ಬಳಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಾಗ ಕಾರು ಚಲಾತಿಸುತ್ತಿದ್ದ ದುಂಡಪ್ಪ ಕಾರಿನಿಂದ ಜಿಗಿದಿದ್ದಾನೆ ಕಾರಿನಲ್ಲಿದ್ದ ದುಂಡಪ್ಪನ ಪತ್ನಿ ಸೀಟ್ ಬೆಲ್ಟ್ ಧರಿಸಿದ್ದರಿಂದ ಕಾರಿನಿಂದ ಹೊರಗೆ ಬರುವಷ್ಟರಲ್ಲಿ ಕಾರು ಧಗಧಗನೇ ಹೊತ್ತು ಉರಿದ ಪರಿಣಾಮ ಕಾರಿನಲ್ಲಿದ್ದ ದುಂಡಪ್ಪನ ಪತ್ನಿ ಸುಟ್ಟು ಭಸ್ಮವಾದ ಘಟನೆ ನಡೆದಿದೆ‌‌.
ದುಂಡಪ್ಪ ತನ್ನ ಪತ್ನಿಯನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡಿದ್ದಾನೆ.ಆದರೂ ಪ್ರಯತ್ನ ವಿಫಲವಾಗಿದೆ .ಕ್ಷಣಾರ್ಧದಲ್ಲಿ ಮಹಿಳೆ ಸುಟ್ಟು ಭಸ್ಮವಾಗಿದ್ದಾಳೆ

ಪೀರನವಾಡಿಯ ದುಂಡಪ್ಪ ಪದ್ಮಣ್ಣವರ ಗಾಯಗೊಂಡಿದ್ದು ಸಾವಂತವಾಡಿ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ.

Check Also

ಬೆಳಗಾವಿ ಜಿಲ್ಲೆಯ ರೇಲ್ವೆ ಸಮಸ್ಯೆಗಳ ಪರಿಹಾರಕ್ಕೆ ಹುಬ್ಬಳ್ಳಿಯಲ್ಲಿ ಮೀಟಿಂಗ್

ಬೆಳಗಾವಿ – ಬೆಳಗಾವಿ ಲೋಕಸಭಾ ಸದಸ್ಯರು ಹಾಗೂ ಕರ್ನಾಟಕ ರಾಜ್ಯದ ಮಾಜಿ ಮುಖ್ಯ ಮಂತ್ರಿಗಳಾದ ಜಗದೀಶ ಶೆಟ್ಟರ, ಇವರು ಇಂದು …

Leave a Reply

Your email address will not be published. Required fields are marked *