Breaking News

ಆನಂದ ಚೋಪ್ರಾ ಹಲ್ಲೆ ಪ್ರಕರಣ,ಧಾರವಾಡದಲ್ಲಿ ನಾಲ್ವರು ಜನ ಪೋಲೀಸರ ವಶಕ್ಕೆ

ಬೆಳಗಾವಿ- ಸವದತ್ತಿಯ ಕಾಂಗ್ರೆಸ್ ಪಕ್ಷದ ಪ್ರಭಾವಿ ನಾಯಕ ಆನಂದ ಚೋಪ್ರಾ ಅವರ ಮೇಲೆ ನಿನ್ನೆ ರಾತ್ರಿ ನಡೆದ ಹಲ್ಲೆ ಪ್ರಕರಣಕ್ಕೆ ಸಮಂಧಿಸಿದಂತೆ ಬೆಳಗಾವಿ ಪೋಲೀಸರು ತನಿಖೆ ಚುರುಕು ಗೊಳಿಸಿದ್ದಾರೆ

: ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿ ಆನಂದ ಚೋಪ್ರಾ ಕೊಲೆ ಯತ್ನ ಪ್ರಕರಣ ನಿನ್ನೆ ಮದ್ಯರಾತ್ರಿ ನಡೆದಿತ್ತು ಈ ಪ್ರಕರಣಕ್ಕೆ ಸಮಂಧಿಸಿದಂತೆ ಧಾರವಾಡದಲ್ಲಿ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದಿರುವ ಪೋಲೀಸರು ತನಿಖೆ ಆರಂಭಿಸಿದ್ದಾರೆ

ವಿದ್ಯಾಗಿರಿ ಠಾಣೆ ಪೊಲೀಸರು ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದು ಬೆಳಗಾವಿ ಪೋಲೀಸರಿಗೆ ಒಪ್ಪಿಸಿದ್ದಾರೆ
ಧಾರವಾಡ ಕಲಘಟಗಿ ರಸ್ತೆಯ ಹೋಟೆಲ್‌ವೊಂದರಲ್ಲಿ ಬಂಧಿಸಿರುವುದಾಗಿ ಮಾಹಿತಿ ಲಭ್ಯವಾಗಿದ್ದು ಆರೋಪಿಗಳಿಂದ ಒಂದು ಸ್ಕಾರ್ಪಿಯೋ ಮತ್ತು ಡಿಸ್ಕವರಿ ಬೈಕ್ ವಶಕ್ಕೆ ಪಡೆಯಲಾಗಿದೆ

ಸವದತ್ತಿಯಲ್ಲಿಯೂ ಹತ್ತು ಜನರನ್ನು ಠಾಣೆಗೆ ಕರೆದು ವಿಚಾರಣೆ ಮಾಡಲಾಗಿದ್ದು ಹಲ್ಲೆಯ ಹಿಂದೆ ರಾಜಕೀಯ ಸೇಡಿನ ರಾಜಕಾರಣ ಅಡಗಿದೆಯಾ? ವ್ಯೆಯಕ್ತಿಕ ಕಾರಣವೇ ? ಅನ್ನೋದನ್ನು ಪತ್ತೆ ಮಾಡಲು ಪೋಲೀಸರು ಜಾಲ ಬೀಸಿದ್ದಾರೆ

Check Also

ಇವರು ನೀಡಿದ ಚಿಕಿತ್ಸೆ ಅದ್ಭುತ , ಬೆಳಗಾವಿಯ ವ್ಯಕ್ತಿ ಇವರ ಔಷಧಿಯಿಂದ ಬದುಕಿದ್ದು ಪವಾಡ…!!

ನಾಟಿ ವೈದ್ಯ ಲೋಕೇಶ್ ಟೇಕಲ್ ಅವರು ನೀಡಿದ ಚಿಕಿತ್ಸೆ ನೋಡಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಈ …

Leave a Reply

Your email address will not be published. Required fields are marked *