Breaking News

ಹಣಕಾಸಿನ ವ್ಯೆವಹಾರಕ್ಕಾಗಿ ಚೋಪ್ರಾ ಮೇಲೆ ಹಲ್ಲೆ ಮೂವರ ಬಂಧನ,ನಾಳೆ ಸವದತ್ತಿ ಬಂದ್ ಗೆ ಕರೆ

ಬೆಳಗಾವಿ-

ಉದ್ಯಮಿ ಆನಂದ ಚೋಪ್ರಾ ಕೊಲೆಗೆ ಯತ್ನ‌ ಪ್ರಕರಣ ಬೇಧಿಸಿ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೋಲೀಸರು ಯಶಸ್ವಿಯಾಗಿದ್ದಾರೆ

ಕೊಲೆ ಯತ್ನದಲ್ಲಿ ಭಾಗಿಯಾಗಿದ್ದ 3ಜನ ಆರೋಪಿಗಳ ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ
1.ಮಂಜು ಪಚಾಂಗಿ(30)
2. ಸುನೀಲ್ ತಾರಿಹಾಲಾ(33) ಕಾರ್ಮಿಕ ಗುತ್ತಿಗೆದಾರ
3. ಬಸವರಾಜ್ ಅರ್ಮಾನಿ(33) ರೈತ
ಮೂರು ಜನ ಆರೋಪಿಗಳು ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ನಿವಾಸಿಗಳಾಗಿದ್ದಾರೆ

ಹಣಕಾಸಿನ ವ್ಯವಹಾರದ ಕುರಿತು ಆನಂದ ಚೋಪ್ರಾ ಕೊಲೆಗೆ ಯತ್ನ ನಡೆದಿರುವದು ಗೊತ್ತಗಿದೆ ಈ ಕುರಿತು
ಪ್ರಮುಖ ಆರೋಪಿ ಮಂಜು ಪಚಾಂಗಿ ತಪ್ಪೋಪ್ಪಿಕೊಂಡಿದ್ದಾನೆ

ಆರೋಪಗಳನ್ನು ಇಂದು ಸಂಜೆ ನ್ಯಾಯಾಧೀಶರ‌ ಮುಂದೆ ಹಾಜರು ಪಡಿಸಿರುವ ಪೊಲೀಸರು
307ಸೆಕ್ಷನ್ ಅಡಿಯಲ್ಲಿ ಸವದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ
ಜುಲೈ 28ರಂದು ರಾತ್ರಿ ಹತ್ತುಗಂಟೆಗೆ ಸವದತ್ತಿ ಪಟ್ಟಣದಲ್ಲಿ ಧಾರವಾಡ ಸವದತ್ತಿ ರಸ್ತೆಯಲ್ಲಿ ಮಾರಕಾಸ್ತ್ತಗಳಿಂದ ಹಲ್ಲೆ‌ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದರು

ಸದ್ಯ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಆನಂದ ಚೋಪ್ರಾ ಚಿಕಿತ್ಸೆ ಪಡೆಯುತ್ತಿದ್ದು ಗುಣಮುಖರಾಗಿದ್ದಾರೆ ಎಂದು ತಿಳಿದು ಬಂದಿದೆ

ಉದ್ಯಮಿ ಆನಂದ ಚೋಪ್ರಾ ಕೊಲೆಗೆ ಯತ್ನ ಖಂಡಿಸಿ ಸವದತ್ತಿ ಪಟ್ಟಣ ಬಂದ್ ಗೆ ಅವರ ಅಭಿಮಾನಿಗಳು ಕರೆ ನೀಡಿದ್ದಾರೆ ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣ ಬಂದ್ ಗೆ ಕರೆ ನೀಡಿದ ಆನಂದ ಚೋಪ್ರಾ ಅಭಿಮಾನ ಬಳಗ

ಅಂಗಡಿ ಮುಂಗಟ್ಟು, ಶಾಲಾ ಕಾಲೇಜುಗಳು ಬಂದ್ ಮಾಡಿ ಪ್ರತಿಭಟನೆ ನಡೆಸಲಿದ್ದು
ಬೆಳಗ್ಗೆ ಎಂಟು ಗಂಟೆಯಿಂದ ಸಂಜೆ ಆರು ಗಂಟೆವರೆಗೂ ಸವದತ್ತಿ ಪಟದಟಣ ವಹಿವಾಟು ಬಂದ್ ಆಗಲಿದೆ

Check Also

ನಾಳೆ ಬೆಳಗಾವಿಯಲ್ಲಿ ಗಾಂಜಾವಾಲಾ, ಕೋಕೀಲಾ ಲೈವ್ ರಸಮಂಜರಿ….

ಕಿತ್ತೂರು ಉತ್ಸವ: ಅ.22 ರಂದು ಬೆಳಗಾವಿ ನಗರದಲ್ಲಿ ಕುನಾಲ್ ಗಾಂಜಾವಾಲಾ, ಸಾಧು ಕೋಕಿಲ ರಸಮಂಜರಿ ಬೆಳಗಾವಿ,-: ಕಿತ್ತೂರು ಉತ್ಸವ ಹಾಗೂ …

Leave a Reply

Your email address will not be published. Required fields are marked *

Sahifa Theme License is not validated, Go to the theme options page to validate the license, You need a single license for each domain name.