Breaking News

ರಪೀಕ ಖಾನಾಪೂರಿ ಋಣ ತೀರಿಸಿದ ಅಂಜಲಿತಾಯಿ

ಬೆಳಗಾವಿ-ಖಾನಾಪೂರ ಶಾಸಕಿ ಅಂಜಲಿತಾಯಿ ನಿಂಬಾಳ್ಕರ್ ನಿಜವಾಗಿಯೂ ತಾಯಿ ಪಾತ್ರ ನಿಭಾಯಿಸುತ್ತಿದ್ದಾರೆ,ರಪೀಕ ಖಾನಾಪೂರಿ ಅವರ ಮಗನನ್ನು ಖಾನಾಪೂರ ನಗರಸಭೆಯ ಅಧ್ಯಕ್ಷ ರನ್ನಾಗಿ ನೇಮಿಸಿ ರಪೀಕ ಖಾನಾಪೂರಿ ಕಾಂಗ್ರೆಸ್ ಪಕ್ಷಕ್ಕೆ ಮಾಡಿದ ಋಣ ತೀರಿಸಿದ್ದಾರೆ.

ಶಾಸಕಿ ಡಾ ಅಂಜಲಿ ಹೇಮಂತ್ ನಿಂಬಾಳ್ಕರ್ ಅವರ ನೇತೃತ್ವದಲ್ಲಿ ಖಾನಾಪೂರ ಪಟ್ಟಣ ಪಂಚಾಯತ್ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಅವಿರೋಧ ಆಯ್ಕೆ ನಡೆಯಿತು.

ಖಾನಾಪೂರ ಪಟ್ಟಣ ಪಂಚಾಯತ್ ಅಧ್ಯಕ್ಷರಾಗಿ ದಿ. ರಫೀಕ್ ಖಾನಾಪೂರಿ ಅವರ ಪುತ್ರ ಶ್ರೀ ಮಜರ್ ರಫೀಕ್ ಖಾನಾಪೂರಿ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ಲಕ್ಷ್ಮೀ ಅಂಕಲಗಿಯವರು ಅವಿರೋಧ ಆಯ್ಕೆಯಾಗಿದ್ದಾರೆ.
ಶಾಸಕಿ ಅಂಜಲಿತಾಯಿಯ ನಿರ್ಧಾರವನ್ನು ಎಲ್ಲರೂ ಸ್ವಾಗತಿಸಿದ್ದಾರೆ.

Check Also

ಬೆಳಗಾವಿ ಜಿಲ್ಲೆಯ ರೇಲ್ವೆ ಸಮಸ್ಯೆಗಳ ಪರಿಹಾರಕ್ಕೆ ಹುಬ್ಬಳ್ಳಿಯಲ್ಲಿ ಮೀಟಿಂಗ್

ಬೆಳಗಾವಿ – ಬೆಳಗಾವಿ ಲೋಕಸಭಾ ಸದಸ್ಯರು ಹಾಗೂ ಕರ್ನಾಟಕ ರಾಜ್ಯದ ಮಾಜಿ ಮುಖ್ಯ ಮಂತ್ರಿಗಳಾದ ಜಗದೀಶ ಶೆಟ್ಟರ, ಇವರು ಇಂದು …

Leave a Reply

Your email address will not be published. Required fields are marked *