ಪಾಲಿಟೀಕ್ಸ್ ಗೂ ಸೈ….ಉದ್ಯಮಕ್ಕೂ ಜೈ….!!!

ಬೆಳಗಾವಿ- ಖಾನಾಪೂರ ಶಾಸಕಿ ಅಂಜಲಿ ನಿಂಬಾಳ್ಕರ್ ಅವರು ಇಂದು ಸಕ್ಕರೆ ಕಾರ್ಖಾನೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ್ದಾರೆ.

ಖಾನಾಪೂರ ತಾಲ್ಲೂಕಿನ ಹಲಸಿ ಗ್ರಾಮದ ಸಮೀಪದಲ್ಲಿರುವ ಹಲಗಾ ಗ್ರಾಮದಲ್ಲಿ ಶಾಸಕಿ ಅಂಜಲಿ ನಿಂಬಾಳ್ಕರ್ ಅವರು ಅಂಜಲಿತಾಯಿ ಕೇನ್ ಪ್ರೈವೇಟ್ ಲಿಮಿಟೆಡ್ ಹೆಸರಿನಲ್ಲಿ ಹೊಸ ಸಕ್ಕರೆ ಕಾರ್ಖಾನೆ ನಿರ್ಮಾಣಕ್ಕೆ ಇವತ್ತು ಭೂಮಿ ಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದ್ರು…

ಹಿರಿಯ ಪೋಲಿಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರು ಇಂದು ಭೂಮಿ ಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದ್ರು….

ಸಕ್ಕರೆ ಕಾರ್ಖಾನೆ, ಡಿಸ್ಟಲರಿ ಘಟಕ,ವಿದ್ಯುತ್ ಉತ್ಪಾದನಾ ಘಟಕ ನಿರ್ಮಾಣ ಮಾಡಲಾಗುತ್ತಿದೆ.ಖಾನಾಪೂರದಲ್ಲಿ ಈಗ ಮತ್ತೊಂದು ಹೊಸ ಸಕ್ಕರೆ ಕಾರ್ಖಾನೆ ನಿರ್ಮಾಣ ಆಗುತ್ತಿದೆ. ರಾಜಕೀಯಕ್ಕೂ ಸೈ..ಉದ್ಯಮಕ್ಕೂ ಜೈ ಎನ್ನುವ ಸಿದ್ದಾಂತದ ತಳಹದಿಯಲ್ಲಿ ಶಾಸಕಿ ಅಂಜಲಿ ನಿಂಬಾಳ್ಕರ್ ಮುನ್ನುಗ್ಗುತ್ತಿದ್ದಾರೆ‌.ಅದಕ್ಕೆ ಅವರ ಯಜಮಾನರಾದ ಹೇಮಂತ್ ನಿಂಬಾಳ್ಕರ್ ಅವರೂ ಸಾಥ್ ಕೊಡುತ್ತಿದ್ದಾರೆ‌.

ಇವತ್ತು ಶಾಸಕಿ ಅಂಜಲಿ ನಿಂಬಾಳ್ಕರ್ ಅವರ ಜನ್ಮ ದಿನವಾಗಿದ್ದು ಜನ್ಮ ದಿನದಂದೇ ಅವರು ಹೊಸ ಹೆಜ್ಜೆ ಇಟ್ಟಿದ್ದು ವಿಶೇಷವಾಗಿದೆ.

Check Also

ನಿಶ್ಚಿತವಾಗಿದ್ದ ಮದುವೆ ರದ್ದು ಯುವಕನ ಆತ್ಮಹತ್ಯೆ

ಬೆಳಗಾವಿ-ನಿಶ್ಚಿತಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. …

Leave a Reply

Your email address will not be published. Required fields are marked *