Breaking News

ಲೋಕಸಭಾ ಚುನಾವಣೆಯಲ್ಲಿ, ಅಂಜಲಿ ನಿಂಬಾಳ್ಕರ್ ಸ್ಪರ್ದೆ ಖಚಿತ….!!!

ಬೆಳಗಾವಿ- ಬೆಳಗಾವಿ ಜಿಲ್ಲೆಯ ಖಾನಾಪೂರ ಕ್ಷೇತ್ರದ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ಅವರನ್ನು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಣಕ್ಕಿಳಿಸಲು ಕಾಂಗ್ರೆಸ್ ಹೈಕಮಾಂಡ್ ಚಿಂತನೆ ನಡೆಸಿದೆ ಎಂದು ಕಾಂಗ್ರೆಸ್ ಪಕ್ಷದ ಉನ್ನತ ಮೂಲಗಳಿಂದ ತಿಳಿದು ಬಂದಿದೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅಂಜಲಿ ನಿಂಬಾಳ್ಕರ್ ಅವರು ಪರಾಭವಗೊಂಡರೂ ಸಹ ಕ್ಷೇತ್ರದಲ್ಲಿ ಸಕ್ರೀಯವಾಗಿ ಜನಸೇವೆ ಮಾಡುತ್ತಿದ್ದು ಅವರ ಕ್ರೀಯಾಶೀಲತೆ ಮತ್ತು ಪಕ್ಷ ನಿಷ್ಠೆಯನ್ನು ಗಮನಿಸಿ ಕಾಂಗ್ರೆಸ್ ಹೈಕಮಾಂಡ್ ಅಂಜಲಿ ನಿಂಬಾಳ್ಕರ್ ಅವರನ್ನು ಕೆನರಾ ಕ್ಷೇತ್ರದಿಂದ ಕಣಕ್ಕಿಳಿಸುವ ಚಿಂತನೆ ನಡೆಸಿದೆ ಎಂದು ಬೆಳಗಾವಿ ಸುದ್ದಿ ಡಾಟ್ ಕಾಮ್ ಗೆ ನಂಬಲರ್ಹ ಮೂಲಗಳಿಂದ ಮಾಹಿತಿ ಸಿಕ್ಕಿದ್ದು ಅಂಜಲಿ ನಿಂಬಾಳ್ಕರ್ ಸಹ ಕೆನರಾ ಕಾರವಾರ ಕ್ಷೇತ್ರದಲ್ಲಿ ಓಡಾಟ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಕೆನರಾ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬೆಳಗಾವಿ ಜಿಲ್ಲೆಯ ಖಾನಾಪೂರ ಮತ್ತು ಚನ್ನಮ್ಮನ ಕಿತ್ತೂರು ವಿಧಾನಸಭಾ ಕ್ಷೇತ್ರಗಳು ಬರುತ್ತವೆ. ಕೆನರಾ ಕ್ಷೇತ್ರದಿಂದ ಪ್ರತಿ ಬಾರಿಯೂ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳು ಕಾರವಾರ ಭಾಗದ ಅಭ್ಯರ್ಥಿಗಳನ್ನೇ ಕಣಕ್ಕಿಳಿಸುತ್ತಾ ಬಂದಿವೆ ಕಾಂಗ್ರೆಸ್ ಹೈಕಮಾಂಡ್ ಈ ಬಾರಿ ಖಾನಾಪೂರ ಕ್ಷೇತ್ರದ ಕಾಂಗ್ರೆಸ್ ನಾಯಕಿ ಅಂಜಲಿ ನಿಂಬಾಳ್ಕರ್ ಅವರನ್ನು ಕಣಕ್ಕಿಳಿಸಿ ಈ ಭಾಗದ ಜನರಿಗೆ ನ್ಯಾಯ ದೊರಕಿಸಿಕೊಡಲು ಚಿಂತನೆ ನಡೆಸಿದೆ.

ಕೆನರಾ ಕ್ಷೇತ್ರದ ಖಾನಾಪೂರ ಹಳಿಯಾಳ ಮತ್ತು ಅಳನಾವರ ಭಾಗದಲ್ಲಿ ಮರಾಠಾ ಸಮುದಾಯದ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿದ್ದು ಸಂಘಟನಾತ್ಮಕವಾಗಿ ಕ್ರೀಯಾಶೀಲವಾಗಿರುವ ಅಂಜಲಿ ನಿಂಬಾಳ್ಕರ್ ಅವರನ್ನು ಕಣಕ್ಕಿಳಿಸುವ ತಂತ್ರ ರೂಪಿಸಿದೆ ಎಂದು ತಿಳಿದು ಬಂದಿದೆ

ಕಾಂಗ್ರೆಸ್ ಹೈಕಮಾಂಡ್ ಶೀಘ್ರದಲ್ಲೇ ಅಧಿಕೃತವಾಗಿ ಕಾಂಗ್ರೆಸ್ ಅಭ್ಯರ್ಥಿಯ ಘೋಷಣೆ ಮಾಡಲಿದೆ ಎಂದು ಗೊತ್ತಾಗಿದೆ.

Check Also

ನಾಳೆ ಬೆಳಗಾವಿಯಲ್ಲಿ ಗಾಂಜಾವಾಲಾ, ಕೋಕೀಲಾ ಲೈವ್ ರಸಮಂಜರಿ….

ಕಿತ್ತೂರು ಉತ್ಸವ: ಅ.22 ರಂದು ಬೆಳಗಾವಿ ನಗರದಲ್ಲಿ ಕುನಾಲ್ ಗಾಂಜಾವಾಲಾ, ಸಾಧು ಕೋಕಿಲ ರಸಮಂಜರಿ ಬೆಳಗಾವಿ,-: ಕಿತ್ತೂರು ಉತ್ಸವ ಹಾಗೂ …

Leave a Reply

Your email address will not be published. Required fields are marked *

Sahifa Theme License is not validated, Go to the theme options page to validate the license, You need a single license for each domain name.