Breaking News

IAS ಅಧಿಕಾರಿಯಾಗುವ ಕನಸು ಬಿಚ್ಚಿಟ್ಟ ಸವದತ್ತಿಯ ಸುಪುತ್ರಿ !

ಸವದತ್ತಿ :ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸವದತ್ತಿ ಕುಮಾರೇಶ್ವರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಅನುಪಮಾ ಶ್ರೀಶೈಲ ಹಿರೇಹೊಳೆ 625 ಕ್ಕೆ 625 ಅಂಕ ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ವಿಜ್ಞಾನ ವಿಭಾಗ ಆಯ್ದುಕೊಂಡು ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುವೆ. ಐಎಎಸ್‌ ಅಧಿಕಾರಿಯಾಗುವ ಇಚ್ಛೆ ಇದೆ ಎಂದು ತಿಳಿಸಿದರು. ಶಾಲೆಯಿಂದ ಬಂದ ನಂತರ ರಾತ್ರಿ ಹನ್ನೆರಡರವರೆಗೂ ಓದುತ್ತಿದ್ದೆ. ಈ ಸಲದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಮೊದಲ ಸ್ಥಾನ ಸಿಕ್ಕಿರುವುದಕ್ಕೆ ಬಹಳ ಸಂತೋಷವಾಗಿದೆ ಎಂದು ತಿಳಿಸಿದರು.
ಯಲ್ಲಮ್ಮ ದೇವಿ ದೇವಸ್ಥಾನದಲ್ಲಿ ಸೇವೆ ಸಲ್ಲಿಸುತ್ತಿದ್ದ ಅವರ ತಂದೆ ಕಳೆದ ವರ್ಷವಷ್ಟೇ ನಿಧನರಾಗಿದ್ದರು. ತಾಯಿ ರಾಜಶ್ರೀ ಸವದತ್ತಿಯ ಎಂ.ಎಂ. ಜೋಶಿ ಕಣ್ಣಿನ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾರೆ.

Check Also

ನಾಳೆ ಬೆಳಗಾವಿಯಲ್ಲಿ ಗಾಂಜಾವಾಲಾ, ಕೋಕೀಲಾ ಲೈವ್ ರಸಮಂಜರಿ….

ಕಿತ್ತೂರು ಉತ್ಸವ: ಅ.22 ರಂದು ಬೆಳಗಾವಿ ನಗರದಲ್ಲಿ ಕುನಾಲ್ ಗಾಂಜಾವಾಲಾ, ಸಾಧು ಕೋಕಿಲ ರಸಮಂಜರಿ ಬೆಳಗಾವಿ,-: ಕಿತ್ತೂರು ಉತ್ಸವ ಹಾಗೂ …

Leave a Reply

Your email address will not be published. Required fields are marked *

Sahifa Theme License is not validated, Go to the theme options page to validate the license, You need a single license for each domain name.