Breaking News

ಕೆಶಿಪ್,ಆಯುಷ್ ಔಷಧಿ ಘಟಕ ಸ್ಥಳಾಂತರ ವಿರುದ್ಧ ಪ್ರತಿಭಟನೆ

ಬೆಳಗಾವಿ ,- ಬೆಳಗಾವಿಯಿಂದ ಬೆಂಗಳೂರು ಹಾಸನ ಜಿಲ್ಲೆಗಳಿಗೆ ಕಚೇರಿಗಳನ್ನು ಸ್ಥಳಾಂತರ ಮಾಡುತ್ತರುವ ಸರ್ಕಾರದ ಹಠಮಾರಿ ಧೋರಣೆ ಖಂಡಿಸಿ ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯೆದುರು ವಿವಿಧ ಕನ್ನಡ ಸಂಘಟನೆಗಳು ಪ್ರತಿಭಟಿಸಿದವು

ರಾಜ್ಯ ಹೆದ್ದಾರಿಗಳ ಅಭಿವೃದ್ಧಿ ಯೋಜನೆಗೆ ಸಂಬಂಧಿಸಿದ ಕೆಶಿಪ್ ಮತ್ತು 2017.18 ರ ಬಜೆಟ್ ನಲ್ಲಿ ಘೋಷಿಸಿದ್ದ ಆಯುಷ್ ಔಷಧಿ ತಯಾರಿಕೆ ಘಟಕವನ್ನು ಬೆಳಗಾವಿಯಿಂದ ಸ್ಥಳಾಂತರಿಸಿರುವದನ್ನು ಕನ್ನಡ ಸಂಘಟನೆಗಳು ಪ್ರತಿಭಟಸಿ ಕೂಡಲೇ ಈ ಎರಡೂ ಆದೇಶಗಳನ್ನು ಸರ್ಕಾರ ರದ್ದು ಮಾಡಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು

ನೃಪತುಂಗ ಯುವಕ ಮಂಡಳದ ವತಿಯಿಂದ ಮನವಿ ಸಲ್ಲಿಸಲಾಯಿತು ಮಂಡಳದ ಅಧ್ಯಕ್ಷ ಸಾಗರ್ ಬೋರಗಲ್ ಬೆಳಗಾವಿ ಕನ್ನಡ ಸಂಘಟನೆಗಳ ಪ್ರಮುಖ ಅಶೋಕ ಚಂದರಗಿ ಉಪಸ್ಥಿತರಿದ್ದರು

Check Also

ನಾಳೆ ಬೆಳಗಾವಿಯಲ್ಲಿ ಗಾಂಜಾವಾಲಾ, ಕೋಕೀಲಾ ಲೈವ್ ರಸಮಂಜರಿ….

ಕಿತ್ತೂರು ಉತ್ಸವ: ಅ.22 ರಂದು ಬೆಳಗಾವಿ ನಗರದಲ್ಲಿ ಕುನಾಲ್ ಗಾಂಜಾವಾಲಾ, ಸಾಧು ಕೋಕಿಲ ರಸಮಂಜರಿ ಬೆಳಗಾವಿ,-: ಕಿತ್ತೂರು ಉತ್ಸವ ಹಾಗೂ …

Leave a Reply

Your email address will not be published. Required fields are marked *

Sahifa Theme License is not validated, Go to the theme options page to validate the license, You need a single license for each domain name.