Home / BGAdmin (page 112)

BGAdmin

ಬೆಳಗಾವಿಯಲ್ಲಿ,ಮಾಂಜಾ ದಾರ ಕುತ್ತಿಗೆಗೆ ಸುತ್ತಿ ಐದು ವರ್ಷದ ಬಾಲಕನ ಬಲಿ…

ಕಾಟನ್ ದಾರಕ್ಕೆ ಗಾಜಿನಪುಡಿಯನ್ನು ಲೇಪಿಸಿ ಸಿದ್ಧಪಡಿಸುವ ಮಾಂಜಾ ಎಂಬ ದಾರದಿಂದ ಗಾಳಿಪಟ ಹಾರಿಸಲಾಗುತ್ತದೆ.ಈ ದಾರ ಹರಿದು ಎಲ್ಲೋ ಯಾರದೋ ಕುತ್ತಿಗೆಗೆ ಸುತ್ತಿ ಅನೇಕ ಜನ ಬಲಿಯಾಯಾಗಿದ್ದು,ಹಲವಾರು ಜನ ಗಾಯಗೊಂಡಿದ್ದಾರೆ. ಇಂದು ಬೆಳಗಾವಿ ನಗರದಲ್ಲಿ ಇದೇ ಮಾಂಜಾ ದಾರಕ್ಕೆ ಐದು ವರ್ಷದ ಬಾಲಕ ಬಲಿಯಾಗಿದ್ದಾನೆ. ಬೆಳಗಾವಿ: ದೀಪಾವಳಿ ಹಬ್ಬಕ್ಕೆ ಬಟ್ಟೆ ಖರೀದಿಸಿ ಊರಿಗೆ ದ್ವಿಚಕ್ರ ವಾಹನದ ಮೇಲೆ ಹೊರಟಿದ್ದಾಗ ಮಾಂಜಾ ದಾರ ಕುತ್ತಿಗೆಗೆ ಬಿಗಿದು ಐದು ವರ್ಷದ ಬಾಲಕ ಸ್ಥಳದಲ್ಲಿಯೇ ಮೃತಪಟ್ಟ …

Read More »

ಬೆಳಗಾವಿಯಲ್ಲಿ ವಿಧ್ಯಾರ್ಥಿ ಕೊಲೆ ಮಾಡಿದ್ದು ಯಾರು ಅನ್ನೋದು ಗೊತ್ತಾಯ್ತು….!!

ಬೆಳಗಾವಿ- ಇತ್ತೀಚಿಗೆ ಬೆಳಗಾವಿ ನಗರದ ಎಸ್ ಎಸ್ ಎಲ್ ಸಿ ಕಲಿಯುತ್ತಿದ್ದ ವಿಧ್ಯಾರ್ಥಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ,ಕಲ್ಲಿನಿಂದ ಜಜ್ಜಿ ಕೊಲೆ ಮಾಡಿ ಶವವನ್ನು ಮಾರಿಹಾಳ ಪೋಲೀಸ್ ಠಾಣೆ ವ್ಯಾಪ್ತಿಯ ಮುಚ್ಚಂಡಿ ಗ್ರಾಮದಲ್ಲಿ ಎಸೆದ ಪ್ರಕರಣ ನಡೆದಿತ್ತು. ಬೆಳಗಾವಿಯ ಜಿ‌.ಎ ಹೈಸ್ಕೂಲ್ ವಿಧ್ಯಾರ್ಥಿ ಪ್ರಜ್ವಲ ಶಿವಾನಂದ ಕರೆಗಾರ ಎಂಬ ವಿಧ್ಯಾರ್ಥಿಯನ್ನು ಕೊಲೆ ಮಾಡಲಾಗಿತ್ತು. ಕ್ಯಾಂಪ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಪೋಲೀಸರು ಕೊಲೆ ಮಾಡಿದ ಆರೋಪಿಯನ್ನು ಬಂಧಿಸಿದ್ದಾರೆ. ಕೊಲೆಗೆ ವಯಕ್ತಿಕ …

Read More »

ಉತ್ಸವ ರದ್ದಾದ ಮೇಲೆ,ಕಿತ್ತೂರಿನಲ್ಲಿ ಏನೇನಾಯ್ತು ಗೊತ್ತಾ…??

*ವಿಧಾನ ಸಭೆಯ ಉಪಾಧ್ಯಕ್ಷ ಆನಂದ ಮಾಮನಿ ಅವರ ನಿಧನದ ಹಿನ್ನಲೆಯಲ್ಲಿ ಚನ್ನಮ್ಮನ ಕಿತ್ತೂರಿನಲ್ಲಿ ಇಂದು ನಡೆಯಬೇಕಿದ್ದ ಕಿತ್ತೂರು ಉತ್ಸವವನ್ನು ನಾಳೆ ಸೋಮವಾರ(ಅ.24)ಕ್ಕೆ ಮುಂದೂಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಇದೇ ಮೊದಲಬಾರಿಗೆ ರಾಜ್ಯ‌ಮಟ್ಟದ ಉತ್ಸವಕ್ಕೆ ಇಂದು ಚಾಲನೆ ದೊರೆಯಬೇಕಿತ್ತು. ಉತ್ಸವಕ್ಕಾಗಿ ಕಿತ್ತೂರು ಹಾಗೂ ಚನ್ನಮ್ಮನ ಜನ್ಮ ಸ್ಥಳ ಬೆಳಗಾವಿ ಹೊರವಲಯದ ಕಾಕತಿಯಲ್ಲಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು. ಜಿಲ್ಲೆಯ ವಿವಿಧೆಡೆಯಿಂದ ರೂಪಗಳು ಕಿತ್ತೂರಿಗೆ ಆಗಮಿಸಿದ್ದವು. ಜಾನಪದ ಕಲಾ ತಂಡಗಳು ಪ್ರದರ್ಶನಕ್ಕೆ …

Read More »

ಕಿತ್ತೂರು ಉತ್ಸವ ನಾಳೆಗೆ ಮುಂದೂಡಿಕೆ

ಬೆಳಗಾವಿ: ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ ನಿಧನವಾಗಿದ್ದರಿಂದ ಕಿತ್ತೂರಿನಲ್ಲಿ ಅ.23ರಿಂದ ಆರಂಭವಾಗಬೇಕಿದ್ದ ಕಿತ್ತೂರು ಉತ್ಸವವನ್ನು ಮುಂದೂಡಿಕೆ ಮಾಡಿ ಡಿಸಿ ಆದೇಶ ಹೊರಡಿಸಿದ್ದಾರೆ. ಅ.24ರಿಂದ ಕಿತ್ತೂರು ಉತ್ಸವ ನಾಳೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.

Read More »

ಆನಂದ ಮಾಮನಿ ಇನ್ನಿಲ್ಲ…..

ಬೆಳಗಾವಿ- ವಿಧಾನಸಭೆಯ ಡೆಪ್ತುಟಿ ಸ್ಪೀಕರ್ ಸವದತ್ತಿ ಯಲ್ಲಮ್ಮ ಕ್ಷೇತ್ರದ ಶಾಸಕ ಆನಂದ ಮಾಮನಿ ಅವರು ಶನಿವಾರ ಮದ್ಯರಾತ್ರಿ ಮನಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮನಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಆನಂದ ಮಾಮನಿ ಶನಿವಾರ ರಾತ್ರಿ ನಿಧನರಾಗಿದ್ದಾರೆ‌. ಮೃದು ಸ್ವಭಾವದ ಮೂಲಕ,ಅಪಾರ ಜನಮೆಚ್ಚುಗೆ ಗಳಿಸಿದ್ದ ಅವರು,ಸವದತ್ತಿ ಯಲ್ಲಮ್ಮನ ಕ್ಷೇತ್ರದಲ್ಲಿ ಅಭಿವೃದ್ದಿಯ ಹೊಳೆ ಹರಿಸಿದ್ದರು.ಕಳೆದ ಒಂದು ತಿಂಗಳಿನಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು,ವಿಡಿಯೋ …

Read More »

ಕ್ರಾಂತಿಯ ನೆಲ,ಕಿತ್ತೂರಿ‌ನಲ್ಲಿ ಹಬ್ಬದ ಕಳೆ….!!

ಬೆಳಗಾವಿ, -ಮೊದಲ ಬಾರಿಗೆ ರಾಜ್ಯಮಟ್ಟದ ಚನ್ನಮ್ಮನ ಕಿತ್ತೂರು ಉತ್ಸವ ಹಮ್ಮಿಕೊಳ್ಳಲಾಗಿದ್ದು, ವ್ಯವಸ್ಥಿತ, ಅದ್ಧೂರಿ ಉತ್ಸವ ಆಚರಣೆಗೆ ಸರ್ವ ರೀತಿಯಲ್ಲೂ ಸಿದ್ಧತೆ ಕೈಗೊಳ್ಳಲಾಗಿದೆ. ಭಾನುವಾರ (ಅ.23) ಸಂಜೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚನ್ನಮ್ಮನ ಕಿತ್ತೂರು ಉತ್ಸವವನ್ನು ಅಧಿಕೃತವಾಗಿ ಉದ್ಘಾಟಿಸಲಿದ್ದಾರೆ ಎಂದು ಕಿತ್ತೂರು ಶಾಸಕ ಮಹಾಂತೇಶ ದೊಡಗೌಡರ ಅವರು ತಿಳಿಸಿದರು. ಶನಿವಾರ (ಅ.22)ಉತ್ಸವದ ಪೂರ್ವಸಿದ್ಧತೆಯ ಕಾರ್ಯಪ್ರಗತಿಯನ್ನು ಪರಿಶೀಲಿಸಿದ ನಂತರ ಕೋಟೆ ಆವರಣದಲ್ಲಿರುವ ಗ್ರಾಮ ದೇವತೆ ದೇವಸ್ಥಾನದಲ್ಲಿ ಸುದ್ದಿಗಾರರಿಗೆ ಅವರು ಮಾಹಿತಿ ನೀಡಿದರು. …

Read More »

ಅಫೀಮ ಮಾರಾಟ ಜಾಲ ಪತ್ತೆ,ಇಬ್ಬರ ಅರೆಸ್ಟ್…

ಬೆಳಗಾವಿ- ಖಚಿತ ಮಾಹಿತಿ ಆದರಿಸಿ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಸಿಸಿಬಿ ಪೊಲೀಸ್ ಇನ್ಸಪೆಕ್ಟರ್ ನಿಂಗನಗೌಡ ಪಾಟೀಲ್ ರವರ ನೇತೃತ್ವದ ತಂಡ ಬೆಳಗಾವಿ ನಗರದ ಆಟೋ ನಗರದಲ್ಲಿ ದಾಳಿ ಮಾಡಿ,ಆಫೀಮು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿದ್ದಾರೆ. ನಿಷೇಧಿತ ಅಫೀಮ ಮಾರಾಟ ಮಾಡುತ್ತಿದ್ದ, 1) *ರೋಹಿತಾಶ್ವ ಭಗವಾನರಾಮ ಬಿಷ್ನೋಯಿ (24 ) ಸಾ: ಜೋಧಪುರ, ರಾಜಸ್ಥಾನ ಹಾಲಿ ಎಮ್.ಕೆ ಹುಬ್ಬಳ್ಳಿ, ಬೆಳಗಾವಿ* 2) *ರಾಜಕುಮಾರ್ ಜುಗತಾರಾಮ್ ಬಿಶ್ನೊಯಿ(22) ವರ್ಷ, ಸಾ: ಜೋಧಪುರ, ರಾಜಸ್ಥಾನ …

Read More »

ವಿಜಯಪೂರಕ್ಕೆ ನ್ಯಾಯ ಐತಿಹಾಸಿಕ ಬೆಳಗಾವಿಗೆ ಅನ್ಯಾಯ…!!!

ಬೆಳಗಾವಿ-ವಿಜಯಪೂರದ ವಿಮಾನ ನಿಲ್ಧಾಣಕ್ಕೆ ಜಗಜ್ಯೋತಿ ಬಸವೇಶ್ವರ ವಿಮಾನ ನಿಲ್ಧಾಣ ಎಂದು ನಾಮಕರಣ ಮಾಡಲು ಇಂದು ನಡೆದ ಸಚಿವ ಸಂಪುಟದ ಸಭೆಯಲ್ಲಿ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ.ಜೊತೆಗೆ ವಿಜಯಪುರ ವಿಮಾನ ನಿಲ್ಧಾಣದ ಅಭಿವೃದ್ಧಿಗೆ ಸುಮಾರು 350 ಕೋಟಿ ರೂ ಸರ್ಕಾರ ಮಂಜೂರು ಮಾಡಿದೆ. ಬೆಳಗಾವಿಯ ಸಾಂಬ್ರಾ, ವಿಮಾನ ನಿಕ್ಧಾಣಕ್ಕೆ ವೀರರಾಣಿ ಚನ್ನಮ್ಮಾಜಿಯ ಹೆಸರು ನಾಮಕರಣ ಮಾಡುವಂತೆ ಕಳೆದ ಒಂದು ದಶಕದಿಂದ ನಡೆದ ಹೋರಾಟಕ್ಕೆ ಸರ್ಕಾರ ಸ್ಪಂದಿಸದೇ ಇರುವುದು ದುರ್ದೈವದ ಸಂಗತಿಯಾಗಿದೆ. ಸಾಂಬ್ರಾ ವಿಮಾನ …

Read More »

ಬೆಳಗಾವಿಯಲ್ಲಿ, SSLC ವಿಧ್ಯಾರ್ಥಿಯ ಕೊಲೆ….!!

ಬೆಳಗಾವಿ-ನಾಪತ್ತೆಯಾಗಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯ ಬರ್ಬರವಾಗಿ ಹತ್ಯೆ ಮಾಡಿದ ಘಟನೆಬೆಳಗಾವಿ ತಾಲೂಕಿನ ಮುಚ್ಚಂಡಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಮುಚ್ಚಂಡಿ ಗ್ರಾಮದ ಹೊರವಲಯದಲ್ಲಿ ವಿದ್ಯಾರ್ಥಿ ಶವ ಪತ್ತೆಯಾಗಿದೆ.ಬೆನ್ನಿಗೆ ಮಾರಕಾಸ್ತ್ರದಿಂದ ಇರಿದು ತಲೆ ಮೇಲೆ ಕಲ್ಲು ಎತ್ತಿ ಹಾಕಿ ದುಷ್ಕರ್ಮಿಗಳು ಕೊಲೆಗೈದಿದ್ದಾರೆ. ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿ ನಾಪತ್ತೆ ಪ್ರಕರಣ ದಾಖಲಾಗಿತ್ತು,ನಿನ್ನೆ ರಾತ್ರಿ ವಿದ್ಯಾರ್ಥಿಯನ್ನ ಕೊಲೆ ಮಾಡಿ ಎಸೆದಿರುವ ಹಂತಕರು ಪರಾರಿಯಾಗಿದ್ದಾರೆ. ಶಿವಾಜಿ ನಗರ ನಿವಾಸಿ ಪ್ರಜ್ವಲ್ ಶಿವಾನಂದ ಕರಿಗಾರ(16) ಕೊಲೆಯಾದ ವಿದ್ಯಾರ್ಥಿ,ಬೆಳಗಾವಿಯ ಖಾಸಗಿ …

Read More »

ಸೆಬ್ಸಿಡಿ ರಿಲೀಸ್ ಮಾಡಲು 50 ಸಾವಿರ ಲಂಚ ಕೇಳಿದ್ದರು…!!

ಜಿಲ್ಲಾ ಕೈಗಾರಿಕೆ ಕೇಂದ್ರದ ಜಂಟಿ ನಿರ್ದೇಶಕ ಸೇರಿ ಇಬ್ಬರು ಲೋಕಾಯುಕ್ತರ ಬಲೆಗೆ ಬೆಳಗಾವಿ: ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳ ತಂಡ ಬುಧವಾರ ರಾತ್ರಿ ಬೀಸಿದ ಬಲೆಗೆ ಬೆಳಗಾವಿ ಉದ್ಯಮಬಾಗದಲ್ಲಿರುವ ಜಿಲ್ಲಾ ಕೈಗಾರಿಕಾ ಕೇಂದ್ರ ( ಡಿಐಸಿ) ಕಚೇರಿಯ ಜಂಟಿ ನಿರ್ದೇಶಕ ಸೇರಿ ಇಬ್ಬರು ಅಧಿಕಾರಿಗಳು ಸಿಕ್ಕಿ ಬಿದ್ದಿದ್ದಾರೆ. ಜಂಟಿ ನಿರ್ದೇಶಕ ಶಿವಪುತ್ರಪ್ಪ ಆರ್.ಎಚ್. ಮತ್ತು ಸಹಾಯಕ ನಿರ್ದೇಶಕ ಪದ್ಮಕಾಂತ ಜಿ. ಎಂಬುವರೇ ಲೋಕಾಯುಕ್ತರ ಬಲೆಗೆ ಬಿದ್ದವರು. ಈ ಇಬ್ಬರೂ ಅಧಿಕಾರಿಗಳು ಸಬ್ಸಿಡಿ …

Read More »