Breaking News
Home / BGAdmin (page 120)

BGAdmin

ಬೆಳಗಾವಿಯ ಚನ್ನಮ್ಮ ವಿವಿ ವಿರುದ್ಧ ಯುದ್ಧ ಸಾರಿದ ವಿಧ್ಯಾರ್ಥಿಗಳು….!!

ಬೆಳಗಾವಿ-ಬೆಳಗಾವಿಯ ಚನ್ನಮ್ಮ ವಿಶ್ವ ವಿದ್ಯಾಲಯ ವಿರುದ್ಧ ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳು ಧಿಡೀರ್ ಪ್ರತಿಭಟನೆ ನಡೆಸುತ್ತಿದ್ದಾರೆ.ಆಡಳಿತ ಮಂಡಳಿ ಕಚೇರಿಗೆ ಬೀಗ ಹಾಕಿ ಆಕ್ರೋಶ ಹೊರ ಹಾಕಿದ ವಿದ್ಯಾರ್ಥಿಗಳು ಚನ್ನಮ್ಮ ವಿಶ್ವವಿದ್ಯಾಲಯದ ವಿರುದ್ಧ ಯುದ್ಧ ಸಾರಿದ್ದಾರೆ. ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಬಳಿ ಇರುವ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ವಿಧ್ಯಾರ್ಥಿಗಳ ಆಂದೋಲನದ ಶುರುವಾಗಿದೆ.ವಿಶ್ವವಿದ್ಯಾಲಯ ಮುಂಭಾಗದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ನಡೆಸುತ್ತಿದ್ದಾರೆ. ಪರಿಶಿಷ್ಟ ಜಾತಿ, ಪಂಗಡ ವಿದ್ಯಾರ್ಥಿಗಳಿಗೆ ಕಡಿಮೆ ಶಿಷ್ಯವೇತನ ಮಂಜೂರಾಗಿದೆ.ಮಂಜೂರಾದ ಮೊತ್ತದಲ್ಲಿ ನೀಡಿದ ಮೊತ್ತಕ್ಕಿಂತ ಕಡಿಮೆ ಶಿಷ್ಯವೇತನ …

Read More »

ಬೆಳಗಾವಿ ಎಸ್ ಪಿ ಹೆಸರಿನಲ್ಲೂ ಹಣ ಕೇಳಿದ ಸೈಬರ್ ಕಳ್ಳರು…!!

*ಬೆಳಗಾವಿ ಎಸ್ ಪಿ ಹೆಸರಲ್ಲಿ ನಕಲಿ ಖಾತೆ: ಹಣ ಕೇಳುತ್ತಿದ್ದಾರೆ ಖದೀಮರು* ಬೆಳಗಾವಿ- ಜನಸಾಮಾನ್ಯರ ಫೇಸ್ ಬುಕ್, ಇನಸ್ಟಾಗ್ರಾಮ್ ಸೋಶಿಯಲ್ ಮಿಡಿಯಾದಲ್ಲಿ ನಕಲಿ ಅಕೌಂಟ್ ಕ್ರಿಯೇಟ್ ಮಾಡಿ ಹಣ ಕೇಳುತ್ತಿದ್ದ ಸೈಬರ್ ಕಳ್ಳರು ಈಗ ಬೆಳಗಾವಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳ ಹೆಸರಿನಲ್ಲೂ ನಕಲಿ ಅಕೌಂಟ್ ಕ್ರಿಯೇಟ್ ಮಾಡಿ ಹಣ ಕೇಳಿದ್ದಾರೆ. ಬೆಳಗಾವಿ: ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾ ರಿ ಸಂಜೀವ ಪಾಟೀಲ ಅವರ ಹೆಸರಿನಲ್ಲಿ ಇನ್ಸ್ಟ್ರಾಗ್ರಾಂ ನಕಲಿ ಖಾತೆ ತೆರೆದು …

Read More »

ಹುಷಾರು,ಈ ಡಬ್ಬಿಯಲ್ಲಿ ಹೃದಯ ಮಿಡಿಯುತಿದೆ…!!

ಬೆಳಗಾವಿ ಜಿಲ್ಲೆಗೆ ಕಾಲಿಟ್ಟ ಬೆಳಗೋ ಬೇಕರಿ…!! ಬೇಕರಿ ಪ್ರೋಡಕ್ಟ್ ಗಳನ್ನು ಮಾರಾಟ ಮಾಡಲು ಬೆಳಗಾವಿ ಜಿಲ್ಲೆಯಲ್ಲಿ ಡಿಸ್ಟಿಬ್ಯಟರ್ ಗಳು ಬೇಕಾಗಿದ್ದಾರೆ. ಸಂಪರ್ಕಿಸಿ..9538876488 ಬೆಳಗಾವಿ-ಝಿರೋ ಟ್ರಾಫಿಕ್‌ನಲ್ಲಿ ನಸುಕಿನ ಜಾವ ಹೃದಯ ರವಾನೆ ಮಾಡಲಾಯಿತು.ಧಾರವಾಡದ ಎಸ್‌ಡಿ‌ಎಂ ಆಸ್ಪತ್ರೆಯಿಂದ ಬೆಳಗಾವಿ ಕೆಎಲ್ಇ ಆಸ್ಪತ್ರೆಗೆ ಹೃದಯ ಸಾಗಾಟ ಮಾಡಲಾಯಿತು. ಅಪಘಾತದಿಂದ ಎಸ್‌ಡಿಎಂ ಆಸ್ಪತ್ರೆಗೆ ದಾಖಲಾಗಿದ್ದ ಕೊಪ್ಪಳ ಮೂಲದ ವ್ಯಕ್ತಿಯಮಿದುಳು ನಿಷ್ಕ್ರಿಯವಾಗಿದಕ್ಕೆ ಕುಟುಂಬಸ್ಥರಿಂದ ಅಂಗಾಂಗ ದಾನಕ್ಕೆ ನಿರ್ಧಾರ ಮಾಡಿದ ಹಿನ್ನಲೆಯಲ್ಲಿ ಹೃದಯ ಬೆಳಗಾವಿಗೆ ತರಲಾಯಿತು. ಅದೇ ಸಮಯಕ್ಕೆ …

Read More »

ಬೆಳಗಾವಿಯ ಹಿಂಡಲಗಾ ಜೈಲಿನಿಂದಲೇ ಮೀಟೀಂಗ್ ಗೆ ಹಾಜರಿ…..!!!

ಬೆಳಗಾವಿ- ಕಾಲಕ್ಕೆ ತಕ್ಕಂತೆ ವ್ಯವಸ್ಥೆ ಬದಲಾಗುತ್ತಿದೆ.ಜೈಲಿನಲ್ಲಿರುವ ಕೈದಿಗಳೂ ಈಗ ಹೈಟೆಕ್ ಆಗಿದ್ದಾರೆ.ಕೊಲೆ ಪ್ರಕರಣದ ಆರೋಪಿಯಾಗಿರುವ ಪುರಸಭೆ ಸದಸ್ಯನೊಬ್ಬ ವಿಡಿಯೋ ಕಾನ್ಫರೆನ್ಸ್ ಮೂಲಕ,ಪುರಸಭೆಯ ಸಾನಾನ್ಯ ಸಭೆಯಲ್ಲಿ ಭಾಗಹಿಸಿ,ತನ್ನ ವಾರ್ಡಿನ ಸಮಸ್ಯೆಗಳನ್ನು ಹೇಳಿಕೊಂಡ ಪ್ರಸಂಗ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಕೊಲೆ ಆರೋಪಿದಡಿ ಜೈಲಿನಲ್ಲಿರುವ ಆರೋಪಿ ಒರ್ವ ವಿಡಿಯೋ ಕಾಲ್ ಮೂಲಕ ಸಾಮಾನ್ಯ ಸಭೆಗೆ ಹಾಜರಾಗಿ ತನ್ನ ವಾರ್ಡ್ ಕುರಿತು ಸಭೆಯಲ್ಲಿ ಚರ್ಚೆ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ …

Read More »

ಕನ್ನಡ….ಕನ್ನಡ….ಕೇಳ್ರಪೋ ನಮ್ಮ ಸಂಕಟ…!!!

ಬೆಳಗಾವಿ- ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲ್ಲೂಕಿನ ಲಿಂಗನಮಠ ಗ್ರಾಮಸ್ಥರು ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆಯ ಕೊಠಡಿಗಳ ನಿರ್ಮಾಣಕ್ಕಾಗಿ ಆಗ್ರಹಿಸಿ,ಇಂದು ಬೆಳಗ್ಗೆ ಏಕಾಏಕಿ ಬೀದಿಗಿಳಿದು ಹೋರಾಟ ಶುರು ಮಾಡಿದ್ದಾರೆ. ಉರ್ದು ಶಾಲೆಗೆ ಕೊಠಡಿಗಳು ಮಂಜೂರಾಗಿವೆ.ಕನ್ನಡ ಶಾಲೆಯ ಮಕ್ಕಳು ಶಾಲೆಯ ಕಟ್ಟೆಯ ಮೇಲೆ ಪಾಠ ಕೇಳುವ ಪರಿಸ್ಥಿತಿ ಇದೆ.ಶಾಲಾ ಕೊಠಡಿಗಳ ಮಂಜೂರಾತಿ ವಿಚಾರದಲ್ಲಿ ಕನ್ನಡ ಶಾಲೆಯ ಮಕ್ಕಳಿಗೆ ಅನ್ಯಾಯವಾಗಿದೆ.ಎಂದು ಆರೋಪಿಸಿ ಗ್ರಾಮಸ್ಥರು ಲಿಂಗನಮಠ ಗ್ರಾಮದಲ್ಲಿ ಪ್ರತಿಭಟಿಸುತ್ತಿದ್ದಾರೆ. ಲಿಂಗನಮಠ ಗ್ರಾಮದಲ್ಲಿ, ಪ್ರಾಥಮಿಕ ಶಾಲೆಯಲ್ಲಿ ಐದು …

Read More »

ಅದಕ್ಕಾಗಿಯೇ ಜನ ಇವರನ್ನು ಸಾಹುಕಾರ್ ಅಂತಾರೆ…!!

ಮೂಡಲಗಿ- ಅರಭಾವಿ ವಿಧಾನಸಭಾ ಕ್ಷೇತ್ರಕ್ಕೆ 2022-23 ನೇ ಸಾಲಿನಲ್ಲಿ 4 ಹೊಸ ಸರ್ಕಾರಿ ಪದವಿ ಪೂರ್ವ ಕಾಲೇಜುಗಳು ಮಂಜೂರು ಆಗಿವೆ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಮೂಡಲಗಿ ತಾಲೂಕಿನ ಮೂಡಲಗಿ, ಕುಲಗೋಡ, ಖಾನಟ್ಟಿ ಮತ್ತು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮಗಳಿಗೆ ವಿದ್ಯಾರ್ಥಿಗಳ ಅನುಕೂಲಕ್ಕೋಸ್ಕರ ಹೊಸ ಪದವಿ ಪೂರ್ವ ಕಾಲೇಜುಗಳನ್ನು ಮಂಜೂರು ಮಾಡಿಸಲಾಗಿದೆ. ಇದರಿಂದ ಮೂಡಲಗಿ ವಲಯದಲ್ಲಿ ಕಾಲೇಜುಗಳ ಸಂಖ್ಯೆ 9ಕ್ಕೇರಿದೆ ಎಂದು …

Read More »

ಮಗು ಅಪಹರಿಸಿದ ಚಾಲಾಕಿ ಕಳ್ಳಿ ಅರೆಸ್ಟ್…!!

ಮಗುವನ್ನು ಕಳುವು ಮಾಡಿದ ಆರೋಪದ ಮೇಲೆ,ಮಾಯಾ ಕಾಂಬಳೆ .ಮಹಾರಾಷ್ಟ್ರದ ಮೈಶಾಳ ಮೂಲದ ಮಹಿಳೆ ಅಥಣಿ-ನರ್ಸ್ ವೇಷದಲ್ಲಿ ಬಂದು ಮಗು ಅಪಹರಿಸಿದ ಚಾಲಾಕಿ ಕಳ್ಳಿಯನ್ನು ಪೋಲೀಸ್ರು ಕೆಲವೇ ಗಂಟೆಗಳಲ್ಲಿ ಪತ್ತೆ ಮಾಡಿ ಕಳುವಾದ ಮಗುವನ್ನು ರಕ್ಷಣೆ ಮಾಡಿದ್ದಾರೆ. ನರ್ಸ್ ವೇಷದಲ್ಲಿ ಬಂದು ಸರ್ಕಾರಿ ಆಸ್ಪತ್ರೆಯಲ್ಲಿ,ತೂಕ ಮಾಡಿಸಿಕೊಂಡು ಬರುವದಾಗಿ ಗಂಡು ಮಗು ಕಳ್ಳತನ ಮಾಡಲಾಗಿತ್ತು.ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕು ಆಸ್ಪತ್ರೆಯಲ್ಲಿ ಇಂದು ಬೆಳ್ಳಂ ಬೆಳಗ್ಗೆ ಈ ಘಟನೆ ನಡೆದಿತ್ತು.ಅಂಬಿಕಾ ಅಮೀತ ಭೋವಿ ಅವರ …

Read More »

ಪರಿಹಾರ ಕೊಡಿ ಎಂದು,ಡಿಸಿ ಕಚೇರಿಗೆ ಬಂದ್ರು…!!

ಬೆಳಗಾವಿ ನಿರಂತರ ಮಳೆಯಿಂದ ಸೋಯಾಬಿನ್, ಆಲೂಗಡ್ಡೆ ಹಾಗೂ ಇನ್ನಿತರ ಬೆಳೆ ನಾಶಕ್ಕೆ ರೈತರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಆಗ್ರಹಿಸಿ ಬುಧವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಬೆಳಗಾವಿ ತಾಲೂಕಿನಲ್ಲಿ ಈ ಹಿಂದೆಯಾದ ನಿರಂತರ ಮಳೆಗೆ ಸೋಯಾಬಿನ್ ಹಾಗೂ ಆಲೂಗಡ್ಡೆ ಬೆಳೆ ಹಾನಿಯಾಗಿದ್ದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅದರಂತೆ ಈ ಹಿಂದೆ ಲಾಕ್ ಡೌನ್ ಸಮಯದಲ್ಲಿ ಕ್ಯಾಬಿಜ ಹಾಗೂ ಇನ್ನಿತರ …

Read More »

ಮಿಂಡನ ಜೊತೆ ಸೇರಿ ಗಂಡನನ್ನೇ ಖತಂ ಮಾಡಿದ ಖಿಲಾಡಿ ಪತ್ನಿ…!!

 ನಿನ್ನೆ ಶವ ಪತ್ತೆ ಇವತ್ತು ಆರೋಪಿಗಳ ಪತ್ತೆ…!! ಬೆಳಗಾವಿ-ಪ್ರಿಯಕರನ ಜೊತೆ ಸೇರಿ ಗಂಡನ ಕೊಲೆ ಮಾಡಿದ್ದ ಪತ್ನಿಯ ಜೊತೆಗೆ ಪ್ರಿಯಕರನನ್ನು ಬಂಧಿಸಲಾಗಿದೆ.ಕಟಕೋಳ ಠಾಣೆ ಪೊಲೀಸರಿಂದ ಪತ್ನಿ, ಆಕೆಯ ಪ್ರಿಯಕರನ ಬಂಧನವಾಗಿದೆ.ಹೊಸೂರು ಪೂಲ್ ಬಳಿ ನಿನ್ನೆ ಪತ್ತೆಯಾಗಿದ್ದ ಪಾಂಡಪ್ಪ ಜಟಕನ್ನವರ (35) ಶವ ಪತ್ತೆಯಾಗಿತ್ತು.ಇವತ್ತು ಬೆಳಗಾಗುವಷ್ಟರಲ್ಲಿ ಆರೋಪಿಗಳೂ ಪತ್ತೆಯಾಗಿದ್ದಾರೆ.ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಹೊಸೂರು ಗ್ರಾಮದಲ್ಲಿ ವ್ಯಕ್ತಿಯೊಬ್ಬನ ಶವ ಸಿಕ್ಕತ್ತು.ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದಿದ್ದ ಕಟಕೋಳ ಪೊಲೀಸರು 24 ಗಂಟೆಯೊಳಗಾಗಿ ಪ್ರಕರಣ ಭೇದಿಸಿದ್ದಾರೆ.ಕೃಷಿ …

Read More »

ಬೆಳಗಾವಿಯಲ್ಲಿ ಮಟಕಾ ಜೋರು,ಬುಕ್ಕಿಗೆ ಒಂದು ವರ್ಷ ಗಡಿಪಾರು….!!!

ಬೆಳಗಾವಿ-ಬೆಳಗಾವಿ ನಗರದಲ್ಲಿ ಜೋರ್ದಾರ್ ಮಟಕಾ ದಂಧೆ ನಡೆಸಿದ್ದ,ಮಟಕಾ ಬುಕ್ಕಿಯೊಬ್ಬನನ್ನು ಒಂದು ವರ್ಷದವರೆಗೆ ಬೆಳಗಾವಿಯಿಂದ ಗಡಿಪಾರು ಮಾಡಿ ಡಿಸಿಪಿ ರವೀಂದ್ರ ಗಡಾದೆ ಆದೇಶ ಹೊರಡಿಸಿದ್ದಾರೆ. ಹಲವಾರು ವರ್ಷಗಳಿಂದ ಮಟಕಾ ದಂಧೆ ನಡೆಸುವ ಚಾಳಿಯನ್ನು ಮುಂದುವರೆಸಿದ್ದ,7 ಮಟಕಾ ಜೂಜಾಟದ ಪ್ರಕರಣಗಳಲ್ಲಿ ಭಾಗಿಯಾಗಿ,ನಾಲ್ಕು ಪ್ರಕರಣಗಳಲ್ಲಿ ನ್ಯಾಯಾಲಯದಲ್ಲಿ ದೋಷಿಯಾಗಿ ಶಿಕ್ಷೆಗೊಳಪಟ್ಟರೂ ಈತ ಮಟಕಾ ದಂಧೆ ಮುಂದುರೆಸಿದ್ದ,ಬೆಳಗಾವಿಯ ಅನಿಗೋಳದ ನಿವಾಸಿ,ಪರಶುರಾಮ ಬಾಬು ಮೇತ್ರಿ ಎಂಬಾತನನ್ನು ಈಗ ಒಂದು ವರ್ಷ ಗಡಿಪಾರು ಮಾಡಲಾಗಿದೆ. ಬೆಳಗಾವಿ ಮಹಾನಗರ ವ್ಯಾಪ್ತಿಯಲ್ಲಿ ಮಟಕಾ …

Read More »