ಬಸನಗೌಡ ಪಾಟೀಲ ಯತ್ನಾಳ ಇಂದು ಬೆಳಗಾವಿಗೆ

ಬೆಳಗಾವಿ -ಸದನದಲ್ಲಿ ಗುಡುಗುವ ಸರ್ಕಾರವನ್ನು ನಡುಗಿಸುವ,ಹಿಂದೂ ಹುಲಿ ಎಂದೇ ಪ್ರಸಿದ್ಧಿ ಪಡೆದಿರುವ ಫೈರ್ ಬ್ರ್ಯಾಂಡ್ ಬಸನಗೌಡ ಪಾಟೀಲ ಯತ್ನಾಳ ಇಂದು ಬೆಳಗಾವಿಗೆ ಬಂದಿದ್ದಾರೆ.

ಶಾಸಕ ಅಭಯ ಪಾಟೀಲ ಅವರ ಸಹೋದರ ಸಂತೋಷ ಪಾಟೀಲ ಅವರ ಮುಖಂಡತ್ವದಲ್ಲಿ ಉದಯವಾಗುತ್ತಿರುವ ಪಾರಸ ಕೋ.ಆ ಸೌಹಾರ್ದ ಸಹಕಾರಿ ಬ್ಯಾಂಕಿನ ಉದ್ಘಾಟನಾ ಕಾರ್ಯಕ್ರಮ ಇಂದು ಮಧ್ಯಾಹ್ನ 3-30 ಗಂಟೆಗೆ ಬೆಳಗಾವಿಯ ಅನಿಗೋಳ ಮುಖ್ಯ ರಸ್ತೆಯಲ್ಲಿ ಇರುವ ಮಾಲಿನಿ ಪ್ಲಾಝಾ ದಲ್ಲಿ ನಡೆಯಲಿದ್ದು ಈ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮತ್ತು ಬಸನಗೌಡ ಪಾಟೀಲ ಯತ್ನಾಳ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಬಿಜೆಪಿ ಮುಖಂಡ ಪ್ರಭಾಕರ ಕೋರೆ,ಮಾಜಿ ಶಾಸಕರಾದ ಸಂಜಯ ಪಾಟೀಲ, ಅನೀಲ ಬೆನಕೆ,ಉದ್ಯಮಿಗಳಾದ, ಜಯಂತ ಹಂಬರವಾಡಿ,ಮತ್ತು ಗೋಪಾಲ ಜಿನಗೊಂಡ ಅವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.ಈ ಕಾರ್ಯಕರ್ಮದಲ್ಲಿ ಯತ್ನಾಳ ಗೌಡ್ರು ಭರ್ಜರಿ ಭಾಷಣ ಮಾಡಲಿದ್ದಾರೆ.

Check Also

ಅನಾಹುತ ಮಳೆಗೆ ಗೋಡೆ ಕುಸಿದು ಮಹಿಳೆ ಸಾವು

ಗೋಕಾಕ: ಗೋಕಾಕದ ಸಂಗಮ ನಗರದ ಫರೀದಾ ಎಂಬ ಮಹಿಳೆ ಗೋಡೆ ಕುಸಿದ ಪರಿಣಾಮ ಮೃತಪಟ್ಟಿದ್ದಾರೆ. ಇವರು ತಮ್ಮ ಮಗ ರಿಯಾಜ್ …

Leave a Reply

Your email address will not be published. Required fields are marked *