ಬಸವರಾಜ್ ಜೊತೆ ಬಸವರಾಜ್ ದೋಸ್ತಿ…ಈಗ ಶುರುವಾಯಿತು ಇಲೆಕ್ಷನ್ ಕುಸ್ತಿ….!!!

ಬೆಂಗಳೂರು: ಇದು ಚುನಾವಣೆಯ ವರ್ಷ ಹೀಗಾಗಿ ಸಹಜವಾಗಿ, ಪಕ್ಷಾಂತರ ಪರ್ವವೂ ಶುರುವಾಗಿದ್ದು,ಜೆಡಿಎಸ್ ಪಕ್ಷದ ಪ್ರಭಾವಿ ಮುಖಂಡ

ಮಾಜಿ ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.

ಯಾವುದೇ ಗದ್ದಲ,ಆಡಂಬರ ಇಲ್ಲದೇ,ಅತ್ಯಂತ ಸರಳವಾಗಿ ಬಸವರಾಜ್ ಹೊರಟ್ಟಿ ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.ಈ ಕುರಿತು ಟ್ವಿಟರ್‌ನಲ್ಲಿ ಚಿತ್ರಗಳನ್ನು ಹಂಚಿಕೊಂಡಿರುವ ಬೊಮ್ಮಾಯಿ, ‘ಮಾಜಿ ವಿಧಾನ ಪರಿಷತ್ ಸಭಾಪತಿ, ಜೆಡಿಎಸ್‌ ಪಕ್ಷದ ಹಿರಿಯ ನಾಯಕರಾದ ಬಸವರಾಜ ಹೊರಟ್ಟಿ ಅವರು ಇಂದು ಅಧಿಕೃತವಾಗಿ ಬಿಜೆಪಿಗೆ ಸೇರಿದರು. ಅವರಿಗೆ ಪಕ್ಷದ ಧ್ವಜ ನೀಡಿ ಸ್ವಾಗತಿಸಲಾಯಿತು’ ಎಂದು ಬರೆದುಕೊಂಡಿದ್ದಾರೆ.

ಈ ಸಂದರ್ಭಧಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌, ಸಚಿವರಾದ ಗೋವಿಂದ ಕಾರಜೋಳ, ಸಿ.ಸಿ.ಪಾಟೀಲ ಹಾಗೂ ಆರ್‌. ಅಶೋಕ ಹಾಜರಿದ್ದರು.

Check Also

ಅನಾಹುತ ಮಳೆಗೆ ಗೋಡೆ ಕುಸಿದು ಮಹಿಳೆ ಸಾವು

ಗೋಕಾಕ: ಗೋಕಾಕದ ಸಂಗಮ ನಗರದ ಫರೀದಾ ಎಂಬ ಮಹಿಳೆ ಗೋಡೆ ಕುಸಿದ ಪರಿಣಾಮ ಮೃತಪಟ್ಟಿದ್ದಾರೆ. ಇವರು ತಮ್ಮ ಮಗ ರಿಯಾಜ್ …

Leave a Reply

Your email address will not be published. Required fields are marked *