ಭೀಕರ ಅಪಘಾತ ರಸ್ರೆ ದುರಸ್ಥಿ ಮಾಡುತ್ತಿದ್ದ ಮೂವರ ಸಾವು

ಬೆಳಗಾವಿ-ರಾಷ್ಟ್ರೀಯ ಹೆದ್ದಾರಿ ನಾಲ್ಕು ಪುಣೆ ಬೆಂಗಳೂರು ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂ ಭವಿಸಿದೆ.ರಸ್ತೆಯಲ್ಲಿ ಕೆಲಸ ಮಾಡ್ತಿದ್ದವರ ಮೇಲೆ ಟ್ಯಾಂಕರ್ ಹರಿದು ಮೂರು ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಇಟಗಿ ಕ್ರಾಸ್ ನಲ್ಲಿ ಈ ಘಟನೆ ನಡೆದಿದೆ.ಪುಣೆ ಬೆಂಗಳೂರು ಹೆದ್ದಾರಿಯಲ್ಲಿ ರಸ್ತೆ ರಿಪೇರಿ ಮಾಡ್ತಿದ್ದ ಸಂಧರ್ಬದಲ್ಲಿ ಕಾರ್ಮಿಕರ ಮೇಲೆ ಏಕಾಏಕ ಟ್ಯಾಂಕರ್ ಹರಿದ ಪರಿಣಾಮ ಮೂರು ಜನ ಕಾರ್ಮಿಕರ ಮೃತಪಟ್ಟಿದ್ದಾರೆ.
ಓರ್ವ ಕಾರ್ಮಿಕನ ಸ್ಥಿತಿ ಗಂಭೀರ ಮತ್ತಿಬ್ಬರಿಗೂ ಗಾಯಗಳಾಗಿವೆ.

ಸ್ಥಳದಲ್ಲಿ ಮುಗಿಲು ಮುಟ್ಟಿದ ಇನ್ನೂಳಿದ ಕಾರ್ಮಿಕರ ಆಕ್ರಂದನ.ಕಲಬುರಗಿ ಜಿಲ್ಲೆಯಿಂದ ಕೆಲಸಕ್ಕೆಂದು ಬೆಳಗಾವಿಗೆ ಬಂದಿರುವ ಕಾರ್ಮಿಕರು.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ ದಿನಗೂಲಿ ಕೆಲಸ ಮಾಡ್ತಿದ್ದ ಕಾರ್ಮಿಕರು.ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ಇದಾಗಿದೆ.

ಕಲಬುರಗಿ ಜಿಲ್ಲೆಯ ರಾಮನ್ನ, ಮಹೇಶ್, ರಾಮಚಂದ್ರ ಮೃತ ದುರ್ದೈವಿಗಳು.ಲಕ್ಷ್ಮೀಬಾಯಿ, ಅನುಶ್ರೀ, ಭೀಮಾಬಾಯಿ ಗೆ ಗಂಭೀರ ಗಾಯ.
ಕಾರ್ಮಿಕರ ಮೇಲೆ ಹರಿದು ಸರ್ವಿಸ್ ರಸ್ತೆಯಲ್ಲಿ ಪಲ್ಟಿಯಾದ ಆಯಿಲ್ ತುಂಬಿದ್ದ ಟ್ಯಾಂಕರ್.
ಟ್ಯಾಂಕರ್ ನಲ್ಲಿ ಸಿಲುಕಿದ್ದ ಚಾಲಕನನ್ನ ಹೊರ ತೆಗೆದ ಪೊಲೀಸರು.ಗಾಯಗೊಂಡು ಎಲ್ಲರಿಗೂ ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ರವಾನೆ.
ಸ್ಥಳಕ್ಕೆ ಕಿತ್ತೂರು ಠಾಣೆ ಪೊಲೀಸರು ಭೇಟಿ ಪರಿಶೀಲನೆ.

Check Also

ಆಟದ ಜಗಳದಲ್ಲಿ ಕೊಲೆಯಾದ ಆಟಗಾರ….!!

ಬೆಳಗಾವಿ -ಆಟದಲ್ಲಿ ಆರಂಭವಾದ ಸಣ್ಣ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ .ಈ ಜಗಳದಲ್ಲಿ ರನ್ನೀಂಗ್ ಚಾಂಪಿಯನ್‌ ಆಟಗಾರನ ಕೊಲೆಯಾಗಿದ್ದು ದುರ್ದೈವದ ಸಂಗತಿಯಾಗಿದೆ. …

Leave a Reply

Your email address will not be published. Required fields are marked *