Breaking News

ನಿವೃತ್ತ ಯೋಧನ ಪುತ್ರನ ಸಾಧನೆ

ಬೆಳಗಾವಿ: ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದ ಸಾಗರ ಸಿದ್ದಪ್ಪ ಭಾಂವಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 625 ಅಂಕಗಳ ಪೈಕಿ 623 ಅಂಕಗಳಿಸಿ ಗಮನಾರ್ಹ ಸಾಧನೆ ಮಾಡಿದ್ದಾನೆ.

ಬೈಲಹೊಂಗಲ ಮೊರಾರ್ಜಿ ದೇಸಾಯಿ ವಸತಿ ಶಾಲೆ ವಿದ್ಯಾರ್ಥಿಯಾಗಿದ್ದ ಸಾಗರ ನಿವೃತ್ತ ಯೋಧ, ಹಾಲಿ ಕೆಎಸ್ ಆರ್ ಪಿ ಪೇದೆಯಾಗಿರುವ ಸಿದ್ದಪ್ಪ ಭಾಂವಿ ಇವರ ಪುತ್ರ. ಕನ್ನಡ, ಸಮಾಜ ವಿಜ್ಞಾನ, ಹಿಂದಿ, ಗಣಿತ ವಿಷಯಗಳಲ್ಲಿ ನೂರಕ್ಕೆ ನೂರು ಅಂಕ‌ಗಳಿಸಿದ್ದು, ಇಂಗ್ಲಿಷ ಹಾಗೂ ವಿಜ್ಞಾನ ವಿಷಯದಲ್ಲಿ 99 ಅಂಕಗಳು ಬಂದಿವೆ. ವಿದ್ಯಾರ್ಥಿಯ ಈ ಸಾಧನೆಗೆ ವಸತಿ ನಿಲಯದ ಶಿಕ್ಷಕರು, ಗ್ರಾಮದ ಹಿರಿಯರು ಹರ್ಷ ವ್ಯಕ್ತಪಡಿಸಿದ್ದಾರೆ.

Check Also

ನೌಕರಿಯಿಂದ ವಜಾ, ಯುವಕನ ಆತ್ಮಹತ್ಯೆ

ಬೆಳಗಾವಿ-ಕೆಲಸದಿಂದ ವಜಾ ಮಾಡಿದಕ್ಕೆ ಮನನೊಂದು ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲ್ಲೂಕಿನಲ್ಲಿ ನಡೆದಿದೆ. ರವಿ ವೀರನಗೌಡ ಹಟ್ಟಿಹೊಳಿ (24) …

Leave a Reply

Your email address will not be published. Required fields are marked *