Breaking News

ಗೋಕಾಕ್ ಫಾಲ್ಸ್ ನಲ್ಲಿ ಯುವಕನಿಗೆ ಚಾಕು ಇರಿತ!

ಬೆಳಗಾವಿ-ಹಳೇ ವೈಷಮ್ಯದ ಕಾರಣ ಜಾತ್ರೆಯ ಸಂಂಭ್ರಮದಲ್ಲಿದ್ದ ಯುವಕನಿಗೆ ಚಾಕು ಇರಿತವಾದ ಘಟನೆ ನಡೆದಿದೆ.ಗೋಕಾಕ್ ಫಾಲ್ಸ್‌ನ ಮಹಾಲಿಂಗೇಶ್ವರ ಜಾತ್ರೆಯಲ್ಲಿ ನಿನ್ನೆ ರಾತ್ರಿ ಕೃತ್ಯ ನಡೆದಿದ್ದುಗೋಕಾಕ ಫಾಲ್ಸ್ ನಿವಾಸಿ ವಿನೋದ ಬೇಟಗೇರಿ (28 ) ಎಂಬಾತನಿಗೆ ಚೂರಿ ಇರಿತವಾಗಿದೆ.

ಗಂಬೀರ ಗಾಯಗೊಂಡ ವಿನೋದ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾನೆ.ಜಾತ್ರೆ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ಯುವಕ ಮೇಲೆ 7 ಜನರ ತಂಡದಿಂದ ದಾಳಿ ನಡೆದಿದೆ‌. ಓರ್ವ ಆರೋಪಿ ಪೊಲೀಸರ ವಶಕ್ಕೆ, 6 ಜನರಿಗೆ ಪೊಲೀಸರ ಹುಡುಕಾಟ ನಡೆಸಿದ್ದಾರೆ‌
ಗೋಕಾಕ ಗ್ರಾಮೀಣ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ.

Check Also

ಲವ್ ಮ್ಯಾರೇಜ್ ಆಗಿದೆ, ಪೋಷಕರ ಬೆದರಿಕೆ ಇದೆ. ರಕ್ಷಣೆ ಕೊಡಿ…!!

ಬೆಳಗಾವಿ ಕೊರಳಲ್ಲಿ ತಾಳಿ, ಮುಖದಲ್ಲಿ ಮಂದಹಾಸ, ಕೈಯಲ್ಲೊಂದು ಮನವಿ ಪತ್ರ, ನನಗೆ ನೀನು ನಿನಗೆ ನಾನು ಎಂದು ಕೈ ಕೈ …

Leave a Reply

Your email address will not be published. Required fields are marked *