Breaking News

ಬೆಳಗಾವಿ ಡಿಸಿ ಕಚೇರಿ ಆವರಣದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದು ಯಾರು ,ಯಾಕೆ ಗೊತ್ತಾ!!

ಬೆಳಗಾವಿ ಡಿಸಿ ಕಚೇರಿ ಆವರಣದಲ್ಲಿ ಮೂರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ತಾಯಿ!

ಬೆಳಗಾವಿ-ಗಂಡ ಸಾಲಮಾಡಿ ಮನೆ ಬಿಟ್ಟು ಹೋಗಿದ್ದ,ಸಾಲಗಾರರ ಕಿರುಕಳ ತಾಳಲಾರದೆ,ತನ್ನ ಸಂಕಷ್ಟ ಹೇಳಿಕೊಳ್ಳಲು ಆಗದೆ, ಮೂರು ಮಕ್ಕಳೊಂದಿಗೆ ತಾಯಿಯೊಬ್ಬಳು ಬೆಳಗಾವಿ ಡಿಸಿ ಕಚೇರಿ ಆವರಣದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

ಜ್ಯುಸ್ ಅಂತಾ ಹೇಳಿಕ್ಕಳಿಗೆ ಪಿನಾಯಲ್ ಕುಡಿಸಿ ತಾನೂ ಪಿನಾಯಿಲ್ ಕಿಡಿದು ಆತ್ಮಹತ್ಯೆಗೆ ಯತ್ನಿಸಿದ ತಾಯಿ ಮತ್ತು ಮಕ್ಕಳನ್ನು ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಗಿದೆ.ಪತಿ ಮಾಡಿದ ಸಾಲಕ್ಕೆ ಬೇಸತ್ತು ಪತ್ನಿ ಮೂರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.
ಬೆಳಗಾವಿ ನಗರದ ಅನಗೋಳದ ನಿವಾಸಿಯಾಗಿರುವ ಸರಸ್ವತಿ.
ಸರಸ್ವತಿ ಹಂಪನ್ನವರ್ ತನ್ನ ಮೂರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.

ಕಟಿಂಗ್ ಶಾಪ್ ನಲ್ಲಿ ಕೆಲಸ ಮಾಡ್ತಿದ್ದ ಪತಿ ಅದೃಶಪ್ಪಾ ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದ.
ಸಾಲ ತೀರಿಸಲು ಆಗದೇ ಊರು ಬಿಟ್ಟಿದ್ದ ಅದೃಶ್ಯಪ್ಪ.
ಸಾಲಗಾರರ ಕಿರುಕುಳಕ್ಕೆ ಬೇಸತ್ತು ನ್ಯಾಯಕೊಡಿಸುವಂತೆ ಡಿಸಿ ಕಚೇರಿಗೆ ಆಗಮಿಸಿದ್ದ ಸರಸ್ವತಿ.ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಕೂಡ ಭೇಟಿಯಾಗದ ಹಿನ್ನೆಲೆಯಲ್ಲಿ
ಕಚೇರಿ ಹೊರ ಭಾಗದಲ್ಲಿ ಜ್ಯೂಸ್ ಅಂತಾ ಹೇಳಿ ಮೂರು ಮಕ್ಕಳಿಗೆ ಪಿನಾಯಿಲ್ ಕುಡಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ
ಕೂಡಲೇ ನಾಲ್ವರನ್ನ ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ ಡಿಸಿ ಕಚೇರಿ ಸಿಬ್ಬಂದಿ.ತಾಯಿ ಮತ್ತು ಮಕ್ಕಳನ್ನು
ಪ್ರಾಣಾಪಾಯದಿಂದ ಪಾರು ಮಾಡಿದ್ದಾರೆ.
ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ.

Check Also

ಬೆಳಗಾವಿ ಜಿಲ್ಲೆಯ ವೀರ ಯೋಧ ನಿಧನ

ಮೂಡಲಗಿ:ಕಲ್ಲೋಳಿ ಪಟ್ಟಣದ ವೀರ ಯೋಧ ಶ್ರೀ ಪ್ರವೀಣ್ ಸುಭಾಸ್ ಖಾನಗೌಡ್ರ (24) ಅವರು ಬುಧವಾರ ಚೆನ್ನೈನ ಭಾರತೀಯ ನೌಕಾ ಪಡೆಯಲ್ಲಿ …

Leave a Reply

Your email address will not be published. Required fields are marked *