ಮಗನ ಸಾವಿನ ಸುದ್ದಿ ಕೇಳಿ ತಾಯಿಯೂ ಹೃದಯಾಘಾತದಿಂದ ಸಾವು.

ಬೆಳಗಾವಿ-ಮಗನ ಸಾವಿನ ಸುದ್ದಿ ಕೇಳಿ ತಾಯಿಯೂ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ,ಬೆಳಗಾವಿಯ ರಾಮದುರ್ಗ ತಾಲೂಕಿನ ಸುರೇಬಾನ ಗ್ರಾಮದಲ್ಲಿ ನಡೆದಿದೆ.

ಬಾಳಪ್ಪ ವೆಂಕಪ್ಪ ತಳವಾರ (50) ರುದ್ರವ್ವ ತಳವಾರ (70) ಮೃತದುರ್ದೈವಿಗಳು.ನೇರಳೆ ಹಣ್ಣು ಹರಿಯಲು ಮರ ಏರಿದ್ದಾಗ ಜಾರಿ ಬಿದ್ದು ಸ್ಥಳದಲ್ಲೇ ಮೃತಪಟ್ಟ ಬಾಳಪ್ಪ,ಬಾಳಪ್ಪ ತಳವಾರ ನೇರಳೆ ಹಣ್ಣು ವ್ಯಾಪಾರ ಮಾಡುತ್ತಿದ್ದ ಎಂಬ ಮಾಹಿತಿ ಸಿಕ್ಕಿದೆ.

ಈ ಸುದ್ದಿ ಗೊತ್ತಾಗುತ್ತಿದ್ದಂತೆ ತೀವ್ರ,ಹೃದಯಾಘಾತದಿಂದ ರುದ್ರವ್ವ ತಳವಾರ ಸಾವನ್ನೊಪ್ಪಿದ್ದು,ತಾಯಿ- ಅಣ್ಣನ ಸಾವಿನ ಸುದ್ದಿ ಕೇಳಿ ಕುಸಿದು ಬಿದ್ದ ಮತ್ತೋರ್ವ ಸಹೋದರ ಬಸವರಾಜ್ ತಳವಾರ,ಸ್ಥಳೀಯ ‌ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ.ರಾಮದುರ್ಗ ‌ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Check Also

ಅನಾಹುತ ಮಳೆಗೆ ಗೋಡೆ ಕುಸಿದು ಮಹಿಳೆ ಸಾವು

ಗೋಕಾಕ: ಗೋಕಾಕದ ಸಂಗಮ ನಗರದ ಫರೀದಾ ಎಂಬ ಮಹಿಳೆ ಗೋಡೆ ಕುಸಿದ ಪರಿಣಾಮ ಮೃತಪಟ್ಟಿದ್ದಾರೆ. ಇವರು ತಮ್ಮ ಮಗ ರಿಯಾಜ್ …

Leave a Reply

Your email address will not be published. Required fields are marked *