Breaking News

ಬೆಳಗಾವಿ: ಟೆಂಪೋ ಬೈಕ್ ಡಿಕ್ಕಿ ಮೂರುಜನ ಯುವಕರ ಸಾವು..

ಚಿಕ್ಕೋಡಿ: ಬೈಕ್ ಮತ್ತು ಟೆಂಪು ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ ಮೇಲೆ ತೆರಳುತ್ತಿದ್ದ ಮೂವರು ಯುವಕರು ಮೃತಪಟ್ಟಿರುವ ಘಟನೆ ಚಿಕ್ಕೋಡಿ ತಾಲೂಕಿನ ಬಸವನಾಳಗಡ್ಡೆ ಬಳಿ ಮಂಗಳವಾರ ರಾತ್ರಿ ಸಂಭವಿಸಿದೆ.

ಮೃತ ಯುವಕರನ್ನು ಕೇರೂರ ಗ್ರಾಮದ ಪ್ರಶಾಂತ ಬೈರು ಖೋತ(೨೨).ಸತೀಶ ಕಲ್ಲಪ್ಪ ಹಿರೇಕೊಡಿ(೨೩).ಯಲಗೌಡ ಚಂದ್ರಕಾಂತ ಪಾಟೀಲ (೨೨) ಎಂದು ಗುರ್ತಿಸಲಾಗಿದೆ.
ಯುವಕರು ಬೈಕ ಮೇಲೆ ಚಿಕ್ಕೋಡಿ ಕಡೆಯಿಂದ ಕೇರೂರ ಗ್ರಾಮಕ್ಕೆ ತೆರಳುವ ಸಮಯದಲ್ಲಿ ಚಿಕ್ಕೋಡಿ- ಅಂಕಲಿ ರಸ್ತೆಯ ಬಸವನಾಳಗಡ್ಡೆ ಬಳಿ ಟೆಂಪು ಮತ್ತು ಬೈಕ ನಡುವೆ ಅಪಘಾತ ಸಂಭವಿಸಿದೆ. ಇಬ್ಬರು ಸ್ಥಳದಲ್ಲಿ ಮೃತಪಟ್ಟರೆ ಓರ್ವ ಆಸ್ಪತ್ರೆಗೆ ತೆರಳುವ ಮಾರ್ಗಮಧ್ಯದಲ್ಲಿ ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Check Also

ಕೆಎಲ್ಇ ಡಾಕ್ಟರ್ ಗಳಿಗೆ ಯುದ್ಧ ಗೆದ್ದ ಸಂಭ್ರಮ

ಕೆಮ್ಮು ಮತ್ತು ಕಡಿಮೆ ರಕ್ತದೊತ್ತಡದೊಂದಿಗೆ ತೀವ್ರವಾದ ಉಸಿರಾಟದ ತೊಂದರೆ ಅನುಭವಿಸುತ್ತ ಜೀವನ್ಮರಣದ ನಡುವೆ ಹೋರಾಡುತ್ತಿದ್ದ ವ್ಯಕ್ತಿಗೆ ಪೆನುಂಬ್ರಾ ಡಿವೈಸ್ ಮೂಲಕ …

Leave a Reply

Your email address will not be published. Required fields are marked *