Breaking News

ವಿದ್ಯುತ್ ದರ ಏರಿಕೆಯನ್ನು ಹಿಂಪಡೆಯಲು ಸಾಧ್ಯವಿಲ್ಲ ಅಂದ್ರು ಪಾವರ್ ಮಿನಿಸ್ಟರ್..

ಬಾಳೆಹೊನ್ನೂರು: ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್ ಸಿ) ಅನುಮೋದಿಸಿರುವ ವಿದ್ಯುತ್ ದರ ಏರಿಕೆಯನ್ನು ಹಿಂಪಡೆಯಲು ಸಾಧ್ಯವಿಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ.

ರಂಭಾಪುರಿ ಪೀಠಕ್ಕೆ ಭಾನುವಾರ ಭೇಟಿ ನೀಡಿ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕಳೆದ ವರ್ಷದ ನವೆಂಬರ್ ನಿಂದ ದರ ಏರಿಕೆ ಪ್ರಕ್ರಿಯೆ ಆರಂಭವಾಗಿದೆ. 2023ರ ಮಾರ್ಚ್ ನಲ್ಲಿಯೇ ದರ ಏರಿಕೆ ಆಗಬೇಕಿತ್ತು. ಆದರೆ, ಆಗ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ಏರಿಕೆ ಆಗಿರಲಿಲ್ಲ. ಚುನಾವಣೆ ಮುಗಿದ ನಂತರ ಮೇ 12 ರಿಂದ ಅನ್ವಯವಾಗುವಂತೆ ವಿದ್ಯುತ್ ದರ ಏರಿಕೆ ಮಾಡಲಾಗಿದೆ ಎಂದರು.

ಹಿಂದಿನ ಬಿಜೆಪಿ ಸರ್ಕಾರವೇ ವಿದ್ಯುತ್ ದರ ಏರಿಕೆ ಮಾಡಿದ್ದು, ಜುಲೈನಿಂದ ಯಾವುದೇ ದರ ಏರಿಕೆ ಆದರೂ ಅದನ್ನು ಸರ್ಕಾರವೇ ಭರಿಸಲಿದೆ. ಆದರೆ, ಹಿಂದಿನ ಬಾಕಿಯನ್ನು ಗ್ರಾಹಕರೇ ಭರಿಸಬೇಕು ಎಂದು ಅವರು ತಿಳಿಸಿದರು.

Check Also

ಕೆಎಂಎಫ್ ಅಧ್ಯಕ್ಷ ಸ್ಥಾನದ ರೇಸ್ ಲ್ಲಿ ನಾನಿಲ್ಲ.ನಾನು ಆಂಕಾಂಕ್ಷಿಯೂ ಅಲ್ಲ,ಸ್ಪರ್ದೆಯೂ ಮಾಡೋದಿಲ್ಲ…

ಬೆಳಗಾವಿ-ಮುಂದೆ ನಡೆಯುವ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ನಾನು ಸ್ಪರ್ಧೆ ಮಾಡುವುದಿಲ್ಲ. ಈ ಬಗ್ಗೆ ಕೆಲ ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿಗಳು ಕೇವಲ …

Leave a Reply

Your email address will not be published. Required fields are marked *