ಇದ್ದಕ್ಕಿದ್ದಂತೆ ಬಸದಿಯಿಂದ ಜೈನ ಮುನಿ ನಾಪತ್ತೆ, ಭಕ್ತರಲ್ಲಿ ಆತಂಕ

ಚಿಕ್ಕೋಡಿ-ಇದ್ದಕ್ಕಿದ್ದಂತೆ ಬಸದಿಯಿಂದ ಜೈನ ಮುನಿ ನಾಪತ್ತೆ, ಭಕ್ತರಲ್ಲಿ ಆತಂಕ ಮೂಡಿದೆ. ಚಿಕ್ಕೋಡಿ ಪಕ್ಕದ ಹಿರೇಕೋಡಿಯ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರು ನಾಪತ್ತೆಯಾದ ಘಟನೆ ನಡೆದಿದೆ.ಮಹಾರಾಜರು ನಾಪತ್ತೆಯಾದ ಬಗ್ಗೆ ಭಕ್ತರು ಪೋಲೀಸರಿಗೆ ದೂರು ನೀಡಿದ್ದಾರೆ.

ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದಲ್ಲಿರುವ ಆಶ್ರಮ ಇದಾಗಿದೆ.ಹಿರೇಕೋಡಿ ಗ್ರಾಮದ ನಂದಿಪರ್ವತ ಜೈನ ಆಶ್ರಮದಿಂದ ಮಹಾರಾಜರು ನಾಪತ್ತೆಯಾಗಿದ್ದಾರೆ.

ನಿನ್ನೆ ಬೆಳಗ್ಗೆ 8 ಗಂಟೆಯಿಂದ ನಾಪತ್ತೆಯಾಗಿರುವ ಜೈನ ಮುನಿಗಳನ್ನು ಭಕ್ತರು ಹುಡುಕಾಟ ಆರಂಭಿಸಿದ್ದಾರೆ.ಮೊನ್ನೆ ರಾತ್ರಿ 10 ಗಂಟೆಯವರೆಗೆ ಆಶ್ರಮದ ತಮ್ಮ ಕೋಣೆಯಲ್ಲಿಯೇ ಇದ್ದ ಸ್ವಾಮೀಜಿ ಏಕಾಏಕಿ ನಾಪತ್ತೆಯಾಗಿದ್ದು ಭಕ್ತರು ಆತಂಕಕ್ಕೀಡಾಗಿದ್ದಾರೆ.

ನಿನ್ನೆ ಬೆಳಗ್ಗೆ ಭಕ್ತರು ಆಶ್ರಮಕ್ಕೆ ಆಗಮಿಸಿದಾಗ ಮಹಾರಾಜರ ನಾಪತ್ತೆ ಪ್ರಕರಣ ಬೆಳಕಿಗೆ ಬಂದಿದೆ.ಕಳೆದ 15 ವರ್ಷಗಳಿಂದ ನಂದಿಪರ್ವತದಲ್ಲಿ ವಾಸವಿದ್ದ ಕಾಮಕುಮಾರ ನಂದಿ ಮಹಾರಾಜರು ನಾಪತ್ತೆಯಾಗಿದ್ದಾರೆ.ಜೈನಮುನಿಗಳು ವಾಸವಿರುವ ಕೋಣೆಯಲ್ಲಿಯೇ ಇರುವ
ಪಿಂಚಿ, ಕಮಂಡಲು ಹಾಗೂ ಮೊಬೈಲ್.

ಜೈನಮುನಿಗಳು ಎಲ್ಲೇ ಹೋಗಬೇಕಿದ್ದರೂ ಪಿಂಚಿ, ಕಮಂಡಲು ತಗೆದುಕೊಂಡು ಹೋಗುವ ಪ್ರತೀತಿ ಇದೆ.ಆದ್ರೆ ಪಿಂಚಿ, ಕಮಂಡಲು ಕೋಣೆಯಲ್ಲಿಯೇ ಇರುವ ಹಿನ್ನೆಲೆ ಭಕ್ತರಲ್ಲಿ ಆತಂಕ ಮೂಡಿದೆ.ಆಶ್ರಮಕ್ಕೆ ಸಂಬಂಧಿಸಿದ ಕೆಲವು ದಾಖಲೆ ಪತ್ರ ಸಹ ನಾಪತ್ತೆಯಾದ ಮಾಹಿತಿ ಸಿಕ್ಕಿದೆ.ನಿನ್ನೇ ಇಡೀ ದಿನ ಜೈನ ಆಶ್ರಮದ ಸುತ್ತಮುತ್ತ ಭಕ್ತರಿಂದ ಹುಡುಕಾಟ ಮಾಡಲಾಗಿದೆ.ಇಂದು ಚಿಕ್ಕೋಡಿ ಪೊಲೀಸ್ ಠಾಣೆಗೆ ನಾಪತ್ತೆಯಾದ ಬಗ್ಗೆ ದೂರು ದಾಖಲಾಗಿದ್ದು,ಆಚಾರ್ಯ ಕಾಮಕುಮಾರನಂದಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಭೀಮಪ್ಪ ಉಗಾರೆಯಿಂದ ದೂರು ನೀಡಲಾಗಿದೆ.ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Check Also

ಕುಂಭಮೇಳದಿಂದ ವಾಪಸ್ ಬರುವಾಗ ಬೆಳಗಾವಿಯ ನಾಲ್ವರ ಸಾವು

ಬೆಳಗಾವಿ- ಮಹಾ ಕುಂಭಮೇಳಕ್ಕೆ ಹೋಗಿ ವಾಪಾಸ್ ಆಗುವಾಗ ಟಿ.ಟಿ ವಾಹನ ಅಪಘಾತಕ್ಕೀಡಾಗಿ ಬೆಳಗಾವಿಯ ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ.ಬೆಳಗಾವಿಯ ಶಹಾಪುರ …

Leave a Reply

Your email address will not be published. Required fields are marked *