ಬೆಳಗಾವಿ ಜಿಲ್ಲೆಯಲ್ಲಿ ಮುಂದುವರೆದ ಮರ್ಡರ್ ಗಳ ಸರಣಿ…!!

ಬೆಳಗಾವಿ- ಬೆಳಗಾವಿ ಜಿಲ್ಲೆಯ ಮೇಲೆ ಯಾರ ದೃಷ್ಟಿ ಬಿದ್ದಿದೆಯೋ ಗೊತ್ತಿಲ್ಲ, ಇಲ್ಲಿ ಸಿಂಗಲ್ ಆದ್ಮೇಲೆ ಡಬಲ್ ಹೀಗೆ ಮರ್ಡರ್ ಗಳ ಸರಣಿ ಮುಂದುವರೆದಿದೆ,ಇಂದು ಬೆಳ್ಳಂ ಬೆಳಗ್ಗೆ ಜಿಲ್ಲೆಯಲ್ಲಿ ಮೊತ್ತೋರ್ವ ಯುವಕನ ಮರ್ಡರ್ ಆಗಿದೆ.

ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲ್ಲೂಕಿನ ವಡೇರಹಟ್ಟಿ ಗ್ರಾಮದಲ್ಲಿ ಇಂದು ಬೆಳಗಿನ ಜಾವ ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದ್ದು ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.ಸ್ಥಳಕ್ಕೆ ಪೋಲೀಸರು ದೌಡಾಯಿಸಿ ಹತ್ಯೆಯಾದ ಯುವಕನ ಕುಟುಂಬಸ್ಥರನ್ನು ವಿಚಾರಣೆ ನಡೆಸುತ್ತಿದ್ದು ಕೊಲೆಗೆ ಕಾರಣ ಏನು ಅನ್ನೋದು ಇನ್ನುವರೆಗೆ ಗೊತ್ತಾಗಿಲ್ಲ.

ಕೊಲೆಯಾದ ಯುವಕನನ್ನು ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲ್ಲೂಕಿನ ವಡೇರಹಟ್ಟಿ ಗ್ರಾಮದ ಶಂಕರ ಸಿದ್ಧಪ್ಪಾ ಜಗಮೋತಿ 30 ಎಂದು ಗುರುತಿಸಲಾಗಿದೆ.

Check Also

ನಿಶ್ಚಿತವಾಗಿದ್ದ ಮದುವೆ ರದ್ದು ಯುವಕನ ಆತ್ಮಹತ್ಯೆ

ಬೆಳಗಾವಿ-ನಿಶ್ಚಿತಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. …

Leave a Reply

Your email address will not be published. Required fields are marked *