Breaking News

ಬೆಳಗಾವಿ ಜಿಲ್ಲೆಯಲ್ಲಿ ಮುಂದುವರೆದ ಮರ್ಡರ್ ಗಳ ಸರಣಿ…!!

ಬೆಳಗಾವಿ- ಬೆಳಗಾವಿ ಜಿಲ್ಲೆಯ ಮೇಲೆ ಯಾರ ದೃಷ್ಟಿ ಬಿದ್ದಿದೆಯೋ ಗೊತ್ತಿಲ್ಲ, ಇಲ್ಲಿ ಸಿಂಗಲ್ ಆದ್ಮೇಲೆ ಡಬಲ್ ಹೀಗೆ ಮರ್ಡರ್ ಗಳ ಸರಣಿ ಮುಂದುವರೆದಿದೆ,ಇಂದು ಬೆಳ್ಳಂ ಬೆಳಗ್ಗೆ ಜಿಲ್ಲೆಯಲ್ಲಿ ಮೊತ್ತೋರ್ವ ಯುವಕನ ಮರ್ಡರ್ ಆಗಿದೆ.

ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲ್ಲೂಕಿನ ವಡೇರಹಟ್ಟಿ ಗ್ರಾಮದಲ್ಲಿ ಇಂದು ಬೆಳಗಿನ ಜಾವ ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದ್ದು ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.ಸ್ಥಳಕ್ಕೆ ಪೋಲೀಸರು ದೌಡಾಯಿಸಿ ಹತ್ಯೆಯಾದ ಯುವಕನ ಕುಟುಂಬಸ್ಥರನ್ನು ವಿಚಾರಣೆ ನಡೆಸುತ್ತಿದ್ದು ಕೊಲೆಗೆ ಕಾರಣ ಏನು ಅನ್ನೋದು ಇನ್ನುವರೆಗೆ ಗೊತ್ತಾಗಿಲ್ಲ.

ಕೊಲೆಯಾದ ಯುವಕನನ್ನು ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲ್ಲೂಕಿನ ವಡೇರಹಟ್ಟಿ ಗ್ರಾಮದ ಶಂಕರ ಸಿದ್ಧಪ್ಪಾ ಜಗಮೋತಿ 30 ಎಂದು ಗುರುತಿಸಲಾಗಿದೆ.

Check Also

ಲವ್ ಮ್ಯಾರೇಜ್ ಆಗಿದೆ, ಪೋಷಕರ ಬೆದರಿಕೆ ಇದೆ. ರಕ್ಷಣೆ ಕೊಡಿ…!!

ಬೆಳಗಾವಿ ಕೊರಳಲ್ಲಿ ತಾಳಿ, ಮುಖದಲ್ಲಿ ಮಂದಹಾಸ, ಕೈಯಲ್ಲೊಂದು ಮನವಿ ಪತ್ರ, ನನಗೆ ನೀನು ನಿನಗೆ ನಾನು ಎಂದು ಕೈ ಕೈ …

Leave a Reply

Your email address will not be published. Required fields are marked *