ಬೆಳಗಾವಿ : ಗೋಡೆ ಕುಸಿದು ಯುವಕನ ಸಾವು.

ಬೆಳಗಾವಿ-ಮಳೆಯಿಂದ ಮನೆಯ ಗೋಡೆ ಕುಸಿದು ಯುವಕ ಸಾವನ್ನೊಪ್ಪಿದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ದುರ್ಘಟನೆ ನಡೆದಿದೆ.ಕಾಶಿನಾಥ ಅಪ್ಪಾಸಾಬ ಸುತಾರ (23) ಮೃತ ದುರ್ದೈವಿಯಾಗಿದ್ದಾನೆ.ಸತತವಾಗಿ ಸುರಿದ ಮಳೆಯಿಂದಾಗಿ ಮನೆಯ ಗೋಡೆ ಕುಸಿತದಿಂದ ಸಾವು ಸಂಭವಿಸಿದೆ.

ಯುವಕನ ಮೈ ಮೇಲೆ ಗೋಡೆ ಕುಸಿತದ ಕಲ್ಲು ಮಣ್ಣು ಬಿದ್ದು ಸ್ಥಳದಲ್ಲೇ ಮೃತನಾಗಿದ್ದು,ಸ್ಥಳಕ್ಕೆ ಅಥಣಿ ಪಿಎಸ್ಐ ಹಾಗೂ ಸಿಪಿಐ ಭೇಟಿ ಪರಿಶೀಲನೆ ಮಾಡಿದ್ದಾರೆ.ಅಥಣಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ.ನಡೆದಿದೆ.

Check Also

ಮೂವತ್ತು ವರ್ಷಗಳ ನಂತರ ರಾಜಕೀಯ ವೈರಿಗಳ ಮಿಲನ.!!!

  ಬೆಳಗಾವಿ- ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ಆಗಿದೆ.ಕಳೆದ ಮೂರು ದಶಕಗಳಿಂದ ರಾಜಕೀಯ ಕಡುವೈರಿಗಳಾಗಿದ್ದ ಕತ್ತಿ ಕುಟುಂಬ ಹಾಗೂ …

Leave a Reply

Your email address will not be published. Required fields are marked *