ಬೆಳಗಾವಿ : ಗೋಡೆ ಕುಸಿದು ಯುವಕನ ಸಾವು.

ಬೆಳಗಾವಿ-ಮಳೆಯಿಂದ ಮನೆಯ ಗೋಡೆ ಕುಸಿದು ಯುವಕ ಸಾವನ್ನೊಪ್ಪಿದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ದುರ್ಘಟನೆ ನಡೆದಿದೆ.ಕಾಶಿನಾಥ ಅಪ್ಪಾಸಾಬ ಸುತಾರ (23) ಮೃತ ದುರ್ದೈವಿಯಾಗಿದ್ದಾನೆ.ಸತತವಾಗಿ ಸುರಿದ ಮಳೆಯಿಂದಾಗಿ ಮನೆಯ ಗೋಡೆ ಕುಸಿತದಿಂದ ಸಾವು ಸಂಭವಿಸಿದೆ.

ಯುವಕನ ಮೈ ಮೇಲೆ ಗೋಡೆ ಕುಸಿತದ ಕಲ್ಲು ಮಣ್ಣು ಬಿದ್ದು ಸ್ಥಳದಲ್ಲೇ ಮೃತನಾಗಿದ್ದು,ಸ್ಥಳಕ್ಕೆ ಅಥಣಿ ಪಿಎಸ್ಐ ಹಾಗೂ ಸಿಪಿಐ ಭೇಟಿ ಪರಿಶೀಲನೆ ಮಾಡಿದ್ದಾರೆ.ಅಥಣಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ.ನಡೆದಿದೆ.

Check Also

ನಿಶ್ಚಿತವಾಗಿದ್ದ ಮದುವೆ ರದ್ದು ಯುವಕನ ಆತ್ಮಹತ್ಯೆ

ಬೆಳಗಾವಿ-ನಿಶ್ಚಿತಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. …

Leave a Reply

Your email address will not be published. Required fields are marked *