Breaking News
Home / Breaking News / ಗೋ ಬ್ಯಾಕ್ ಸಂಧಾನಕ್ಕಾಗಿ ,ದಿಢೀರ್ ಬೆಳಗಾವಿಗೆ ಯಡಿಯೂರಪ್ಪ…!!

ಗೋ ಬ್ಯಾಕ್ ಸಂಧಾನಕ್ಕಾಗಿ ,ದಿಢೀರ್ ಬೆಳಗಾವಿಗೆ ಯಡಿಯೂರಪ್ಪ…!!

ಬೆಳಗಾವಿ- ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಬೆಳಗಾವಿ ಕ್ಷೇತ್ರದಿಂದ ಸ್ಪರ್ದಿಸುವ ವಿಚಾರದಲ್ಲಿ ಬಿಜೆಪಿಯಿಂದಲೇ ಗೋ ಬ್ಯಾಕ್ ಆಂದೋಲನ ಶುರುವಾದ ಹಿನ್ನಲೆಯಲ್ಲಿ ಬಿಜೆಪಿಯ ಅತೃಪ್ತ ನಾಯಕರನ್ನು ಸಂತೈಸಲು ಮಾಜಿ ಸಿಎಂ ಯಡಿಯೂರಪ್ಪ ಬೆಳಗಾವಿಗೆ ಇಂದು ರಾತ್ರಿ ಆಗಮಿಸುತ್ತಿದ್ದಾರೆ.

ಬೆಳಗಾವಿಯ ಪಂಚತಾರಾ ಹೊಟೆಲ್ ನಲ್ಲಿ ಯಡಿಯೂರಪ್ಪ ನವರು ಬೆಳಗಾವಿ ಜಿಲ್ಲೆಯ ಬಿಜೆಪಿ ಶಾಸಕರು, ಮಾಜಿ ಶಾಸಕರು,ಹಾಗು ಸ್ಥಳೀಯ ಬಿಜೆಪಿ ನಾಯಕರ ಜೊತೆ ಮಹತ್ವದ ಸಭೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

ಸೋಶಿಯಲ್ ಮಿಡಿಯಾದಲ್ಲಿ ಗೋ ಬ್ಯಾಕ್ ಶೆಟ್ಟರ್ ಎಂದು ಅಭಿಯಾನ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದ ಬೆಳಗಾವಿಯ ಸ್ಥಳೀಯ ನಾಯಕರು ಮತ್ತು ಬಿಜೆಪಿ ಕಾರ್ಯಕರ್ತರನ್ನು ಸಮಾಧಾನ ಪಡಿಸಲು ಯಡಿಯೂರಪ್ಪ ಇಂದು ಬೆಳಗಾವಿಗೆ ಆಗಮಿದಲಿದ್ದಾರೆ.

ಇಂದು ರಾತ್ರಿ ಬೆಳಗಾವಿಗೆ ಆಗಮಿಸುವ ಅವರು ಬೆಳೆ ಬೆಳಗ್ಗೆ ಹೊಟೇಲ್ ಯು.ಕೆ 27 ನಲ್ಲಿ ಸಂಧಾನ ಸಭೆ ಮಾಡಲಿದ್ದಾರೆ ಎಂದು ಗೊತ್ತಾಗಿದೆ. ನಾಳೆ ಬುಧವಾರ ಜಗದೀಶ್ ಶೆಟ್ಟರ್ ಅವರು ಬೆಳಗಾವಿಗೆ ಬರಲಿದ್ದು ಯಡಿಯೂರಪ್ಪ ಅವರು ಜಗದೀಶ್ ಶೆಟ್ಟರ್ ಅವರ ಜೊತೆಯಾಗಿ ಬರ್ತಾರೋ ಅಥವಾ ಪ್ರತ್ಯೇಕವಾಗಿ ಬರ್ತಾರೋ ಅನ್ನೋದನ್ನು ಕಾದು ನೋಡ ಬೇಕಾಗಿದೆ.

Check Also

ಜಗದೀಶ್ ಶೆಟ್ಟರ್ ಕುವೆಂಪು ನಗರಕ್ಕೆ ಹೋಗಿದ್ದು ಯಾಕೆ ಗೊತ್ತಾ.??

ಬೆಳಗಾವಿ-ಬೆಳಗಾವಿ ನಗರದಲ್ಲಿ ಬೆಳಗಿನ ಜಾವ ಕೋಳಿ ಕೂಗುವ ಮುನ್ನ ನಗರದಲ್ಲಿ ಜಗದೀಶ್ ಶೆಟ್ಟರ್ ಅವರ ಅವಾಜ್ ಕೇಳುತ್ತಿದೆ.ತಪ್ಪದೇ ದಿನನಿತ್ಯ ಚಹಾ …

Leave a Reply

Your email address will not be published. Required fields are marked *